Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

- Advertisement -
- Advertisement -

2018ರ ಎಲ್ಗರ್ ಪರಿಷತ್- ಮಾವೋವಾದಿ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ತೆಲುಗು ಕವಿ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರ ಪೀಠವು ಎಡಗಣ್ಣಿನ ಶಸ್ತ್ರಚಿಕಿತ್ಸೆಗಾಗಿ ಡಿ.5 ರಿಂದ 11ರ ನಡುವೆ ತೆಲಂಗಾಣ ರಾಜಧಾನಿಗೆ ಪ್ರಯಾಣಿಸಲು ವರವರ ರಾವ್ ಅವರಿಗೆ ಅನುಮತಿ ನೀಡಿದೆ.

ವರವರ ರಾವ್ ಡಿಸೆಂಬರ್ 4ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅವರ ಪ್ರಯಾಣದ ವಿವರಗಳನ್ನು ಮತ್ತು ಅವರು ಹೈದರಾಬಾದ್‌ನಲ್ಲಿ ನಿಲ್ಲುವ ಸ್ಥಳದ ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ಒದಗಿಸಬೇಕು. ನ್ಯಾಯಾಲಯವು ನೀಡಿರುವ ಈ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ.

ವರವರ ರಾವ್ ಅವರನ್ನು 2018ರಲ್ಲಿ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲಾಯಿತು ಮತ್ತು ಬಾಂಬೆ ಹೈಕೋರ್ಟ್ ವರವರ ರಾವ್ ಅವರಿಗೆ ಮಾ.2021ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಿತ್ತು.

ವರವರ ರಾವ್ ಅವರಿಗೆ ಆ.2022ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಆದೇಶದಲ್ಲಿ ರಾವ್ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯದ ವ್ಯಾಪ್ತಿಗಿಂತ ಹೊರ ಹೋಗಬಾರದು ಎಂದು ಆದೇಶಿಸಿತ್ತು.

ಕಳೆದ ತಿಂಗಳು ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ರಾವ್ ಅವರಿಗೆ ಹೈದರಾಬಾದ್‌ಗೆ ಒಂದು ವಾರ ಪ್ರಯಾಣಿಸಲು ಹೈಕೋರ್ಟ್ ಅನುಮತಿ ನೀಡಿತ್ತು.

ನ್ಯಾಯಮೂರ್ತಿ ಎ ಎಸ್ ಗಡ್ಕರಿ ನೇತೃತ್ವದ ವಿಭಾಗೀಯ ಪೀಠವು ಅವರು ಹಿಂದಿರುಗಿದ ನಂತರ ಮತ್ತೊಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಮತ್ತೊಮ್ಮೆ ಪ್ರಯಾಣಿಸಲು ಅನುಮತಿ ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿತ್ತು.

ಡಿ.31, 2017ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾವ್ ಮತ್ತು ಇತರ ಹಲವು ಎಡ-ಒಲವಿನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪುಣೆ ಪೊಲೀಸರು ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿತ್ತು ಎಂದು ಆರೋಪಿಸಿದ್ದರು ಮತ್ತು ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳು ಮರುದಿನ ಪುಣೆ ಜಿಲ್ಲೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆರೋಪಿಸಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲಾದ ಎಲ್ಗರ್ ಪರಿಷತ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ರಾವ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...