Homeಮುಖಪುಟಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

- Advertisement -
- Advertisement -

2020ರ ಟಿಆರ್‌ಪಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯುವ ಮುಂಬೈ ಪೊಲೀಸರ ಅರ್ಜಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮ್ಮತಿಸಿದೆ.

ಮುಂಬೈ ಪೊಲೀಸ್ ತನಿಖೆಯಲ್ಲಿನ ವಿರೋಧಾಭಾಸಗಳು ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಹಿಂಪಡೆಯಲು ನಿರ್ಧಾರ ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಪ್ರಕರಣದ ಕುರಿತು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಲ್‌ಎಸ್ ಪಧೇನ್ ಅವರು ಪ್ರಕರಣ ಹಿಂಪಡೆಯಲು ಪೊಲೀಸರಿಗೆ ಅನುಮತಿ ನೀಡಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹಿರಾಯ್ ದೃಢಪಡಿಸಿದ್ದಾರೆ.

2020ರಲ್ಲಿ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಹಲವಾರು ಚಾನೆಲ್‌ಗಳ ವಿರುದ್ಧ ಟಿಆರ್‌ಪಿ ಹೆಚ್ಚಿಸಿರುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಮುಂಬೈನ ಪೊಲೀಸ್ ಕಮಿಷನರ್ ಆಗಿದ್ದ ಪರಮ್ ಬೀರ್ ಸಿಂಗ್ ಈ ಪ್ರಕರಣವನ್ನು ನಿರ್ವಹಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿಶಿರ್ ಹಿರಾಯ್ ಅವರು ವಿಚಾರಣೆಯನ್ನು ಮುಂದುವರಿಸುವುದರಿಂದ ಆರೋಪಿಗಳಿಗೆ ಶಿಕ್ಷೆಯಾಗುವುದಿಲ್ಲ, ಬದಲಿಗೆ ನ್ಯಾಯಾಲಯದ ಸಮಯ ವ್ಯರ್ಥವಾಗುತ್ತದೆ ಎಂದು  ನ್ಯಾಯಾಲಯದ ಗಮನಕ್ಕೆ ತಂದಿದ್ದು, ಇದರಿಂದ ಪ್ರಕರಣವನ್ನು ಹಿಂಪಡೆಯಲು ನ್ಯಾಯಾಲಯವು ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

ಮುಂಬೈ ಪೊಲೀಸರ ಎಫ್‌ಐಆರ್ ಆಧರಿಸಿ, ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು. ತನ್ನ ತನಿಖಾ ವರದಿಯಲ್ಲಿ ಪ್ರಕರಣದಲ್ಲಿ ಟಿಆರ್‌ಪಿ ಸಂಖ್ಯೆಗಳನ್ನು ದುರ್ಬಳಕೆ ಮಾಡಿದ ಆರೋಪದಿಂದ ರಿಪಬ್ಲಿಕ್ ಟಿವಿ ಮತ್ತು ರಿಪಬ್ಲಿಕ್ ಭಾರತ್‌ನ್ನು ಜಾರಿ ನಿರ್ದೇಶನಾಲಯವು ಈಗಾಗಲೇ ಮುಕ್ತಗೊಳಿಸಿದೆ.

2021ರಲ್ಲಿ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿತ್ತು. ಈ ಹಗರಣದಿಂದ ರಿಪಬ್ಲಿಕ್ ಟಿವಿ ಚಾನೆಲ್‌ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಹೆಚ್ಚಿನ ಆದಾಯವನ್ನು ಗಳಿಸಿದೆ ಎಂದು ಉಲ್ಲೇಖಿಸಿತ್ತು. 2023ರಲ್ಲಿ ರಾಜ್ಯ ಗೃಹ ಇಲಾಖೆ ಅಧಿಕಾರಿಗಳು ಮುಂಬೈ ಪೊಲೀಸರಿಂದ ದಾಖಲೆಗಳನ್ನು ಪಡೆದರು ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಝೆ ಮತ್ತು ತಂಡವು ನಡೆಸಿದ ತನಿಖೆಯಲ್ಲಿ ಹಲವಾರು ನ್ಯೂನತೆಗಳಿವೆ ಎಂದು ಮರು ತನಿಖೆಯಲ್ಲಿ ಹೇಳಿದೆ. ವಝೆ ಅವರು ಪ್ರಕರಣದ ತನಿಖೆ ನಡೆಸಿದ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥರಾಗಿದ್ದರು.

ನಿರ್ದಿಷ್ಟ ಟಿವಿ ಚಾನೆಲ್‌ಗಳನ್ನು ವೀಕ್ಷಿಸಲು ಜನರಿಗೆ ಹಣ ಪಾವತಿಸುವ ಮೂಲಕ ಟಿಆರ್‌ಪಿಯಲ್ಲಿ ಹಗರಣ ನಡೆಯುತ್ತಿದೆ ಎಂದು 2020ರಲ್ಲಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ಹಂಸಾ ರಿಸರ್ಚ್ ಗ್ರೂಪ್ ಮೂಲಕ ದೂರು ದಾಖಲಿಸಿದೆ. ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಅರ್ನಬ್‌ ಗೋಸ್ವಾಮಿಯನ್ನು ಆರೋಪಿ ಎಂದು ಹೆಸರಿಸಿದ್ದರು. ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಎಲ್ಲ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

ಇದನ್ನು ಓದಿ: ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...