Homeಮುಖಪುಟಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

- Advertisement -
- Advertisement -

2020ರ ಟಿಆರ್‌ಪಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯುವ ಮುಂಬೈ ಪೊಲೀಸರ ಅರ್ಜಿಗೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮ್ಮತಿಸಿದೆ.

ಮುಂಬೈ ಪೊಲೀಸ್ ತನಿಖೆಯಲ್ಲಿನ ವಿರೋಧಾಭಾಸಗಳು ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಹಿಂಪಡೆಯಲು ನಿರ್ಧಾರ ಕೈಗೊಂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಪ್ರಕರಣದ ಕುರಿತು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಲ್‌ಎಸ್ ಪಧೇನ್ ಅವರು ಪ್ರಕರಣ ಹಿಂಪಡೆಯಲು ಪೊಲೀಸರಿಗೆ ಅನುಮತಿ ನೀಡಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹಿರಾಯ್ ದೃಢಪಡಿಸಿದ್ದಾರೆ.

2020ರಲ್ಲಿ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಹಲವಾರು ಚಾನೆಲ್‌ಗಳ ವಿರುದ್ಧ ಟಿಆರ್‌ಪಿ ಹೆಚ್ಚಿಸಿರುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಮುಂಬೈನ ಪೊಲೀಸ್ ಕಮಿಷನರ್ ಆಗಿದ್ದ ಪರಮ್ ಬೀರ್ ಸಿಂಗ್ ಈ ಪ್ರಕರಣವನ್ನು ನಿರ್ವಹಿಸಿದ್ದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿಶಿರ್ ಹಿರಾಯ್ ಅವರು ವಿಚಾರಣೆಯನ್ನು ಮುಂದುವರಿಸುವುದರಿಂದ ಆರೋಪಿಗಳಿಗೆ ಶಿಕ್ಷೆಯಾಗುವುದಿಲ್ಲ, ಬದಲಿಗೆ ನ್ಯಾಯಾಲಯದ ಸಮಯ ವ್ಯರ್ಥವಾಗುತ್ತದೆ ಎಂದು  ನ್ಯಾಯಾಲಯದ ಗಮನಕ್ಕೆ ತಂದಿದ್ದು, ಇದರಿಂದ ಪ್ರಕರಣವನ್ನು ಹಿಂಪಡೆಯಲು ನ್ಯಾಯಾಲಯವು ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

ಮುಂಬೈ ಪೊಲೀಸರ ಎಫ್‌ಐಆರ್ ಆಧರಿಸಿ, ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು. ತನ್ನ ತನಿಖಾ ವರದಿಯಲ್ಲಿ ಪ್ರಕರಣದಲ್ಲಿ ಟಿಆರ್‌ಪಿ ಸಂಖ್ಯೆಗಳನ್ನು ದುರ್ಬಳಕೆ ಮಾಡಿದ ಆರೋಪದಿಂದ ರಿಪಬ್ಲಿಕ್ ಟಿವಿ ಮತ್ತು ರಿಪಬ್ಲಿಕ್ ಭಾರತ್‌ನ್ನು ಜಾರಿ ನಿರ್ದೇಶನಾಲಯವು ಈಗಾಗಲೇ ಮುಕ್ತಗೊಳಿಸಿದೆ.

2021ರಲ್ಲಿ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿತ್ತು. ಈ ಹಗರಣದಿಂದ ರಿಪಬ್ಲಿಕ್ ಟಿವಿ ಚಾನೆಲ್‌ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಹೆಚ್ಚಿನ ಆದಾಯವನ್ನು ಗಳಿಸಿದೆ ಎಂದು ಉಲ್ಲೇಖಿಸಿತ್ತು. 2023ರಲ್ಲಿ ರಾಜ್ಯ ಗೃಹ ಇಲಾಖೆ ಅಧಿಕಾರಿಗಳು ಮುಂಬೈ ಪೊಲೀಸರಿಂದ ದಾಖಲೆಗಳನ್ನು ಪಡೆದರು ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಝೆ ಮತ್ತು ತಂಡವು ನಡೆಸಿದ ತನಿಖೆಯಲ್ಲಿ ಹಲವಾರು ನ್ಯೂನತೆಗಳಿವೆ ಎಂದು ಮರು ತನಿಖೆಯಲ್ಲಿ ಹೇಳಿದೆ. ವಝೆ ಅವರು ಪ್ರಕರಣದ ತನಿಖೆ ನಡೆಸಿದ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥರಾಗಿದ್ದರು.

ನಿರ್ದಿಷ್ಟ ಟಿವಿ ಚಾನೆಲ್‌ಗಳನ್ನು ವೀಕ್ಷಿಸಲು ಜನರಿಗೆ ಹಣ ಪಾವತಿಸುವ ಮೂಲಕ ಟಿಆರ್‌ಪಿಯಲ್ಲಿ ಹಗರಣ ನಡೆಯುತ್ತಿದೆ ಎಂದು 2020ರಲ್ಲಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ಹಂಸಾ ರಿಸರ್ಚ್ ಗ್ರೂಪ್ ಮೂಲಕ ದೂರು ದಾಖಲಿಸಿದೆ. ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಅರ್ನಬ್‌ ಗೋಸ್ವಾಮಿಯನ್ನು ಆರೋಪಿ ಎಂದು ಹೆಸರಿಸಿದ್ದರು. ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಎಲ್ಲ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

ಇದನ್ನು ಓದಿ: ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಿದ ಟಿಎಂಸಿಯ ಹಿರಿಯ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...