Homeಕರೋನಾ ತಲ್ಲಣಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

- Advertisement -
- Advertisement -

ಏಷ್ಯಾದ ಅತಿ ದೊಡ್ಡ ಕೊಳೆಗೇರಿ ಮುಂಬೈನ ಧಾರಾವಿಯಲ್ಲಿ ಸತತ ಎರಡನೇ ದಿನವೂ ಒಂದೂ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾದಿಂದ ತತ್ತರಿಸಿದ್ದ ಮಹಾರಾಷ್ಟ, ಅದರಲ್ಲೂ ಮುಂಬೈನಲ್ಲಿ ಸದ್ಯ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ.

ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕೃತ ಮಾಹಿತಿಯ ಪ್ರಕಾರ, “ಮುಂಬೈನ ಧಾರಾವಿ ಎರಡನೇ ದಿನವೂ ಸೊನ್ನೆ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಪ್ರಕರಣಗಳು 11 ಕ್ಕೆ ನಿಂತಿದ್ದು, ಸದ್ಯ ಧಾರವಿಯಲ್ಲಿರುವ ಒಟ್ಟು ಪ್ರಕರಣಗಳು 6,861” ಎಂದು ಮಾಹಿತಿ ನೀಡಿದೆ.

ಈ ವರ್ಷದ ಫೆಬ್ರವರಿ 2 ರ ನಂತರ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ ಧಾರವಿಯಲ್ಲಿ ಸೋಮವಾರ ಒಂದು ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಮಂಗಳವಾರವು ಒಂದು ಪ್ರಕರಣ ವರದಿಯಾಗಿಲ್ಲ.

ಧಾರವಿಯ ಸಹಾಯಕ ಮುನ್ಸಿಪಲ್ ಕಮಿಷನರ್ ಕಿರಣ್ ದಿಘಾವ್ಕರ್, “ಈ ವರ್ಷದ ಫೆಬ್ರವರಿಯಲ್ಲಿ ಕೊನೆಯದಾಗಿ ಧಾರಾವಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದ್ದವು. ಇದಾದ ಬಳಿಕ ಈಗ ಮತ್ತೆ ಯಾವುದೇ ಪ್ರಕರಣ ವರದಿಯಾಗಿಲ್ಲ.ಕೊರೊನಾ ಆರಂಭದಲ್ಲಿ ಈ ಪ್ರದೇಶದಲ್ಲಿ ಅದನ್ನು ನಿಯಂತ್ರಿಸುವುದು ಕಠಿಣವಾಗಿತ್ತು. ಇಲ್ಲಿ ಕಿರಿದಾದ ಪ್ರದೇಶದಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ಹಲವಾರು ಸಣ್ಣ ಪ್ರಮಾಣದ ಕೈಗಾರಿಕೆಗಳು, ಜವಳಿ ಕಾರ್ಖಾನೆಗಳು ಇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

“ಧಾರವಿ ನಿವಾಸಿಗಳು ಸಾರ್ವಜನಿಕ ಶೌಚಾಲಯಗಳನ್ನು ಸಹ ಬಳಸುತ್ತಾರೆ, ಆದ್ದರಿಂದ ಕೊರೊನಾ ನಿಯಂತ್ರಣ ನಿಜವಾಗಿಯೂ ಸವಾಲಿನದ್ದಾಗಿತ್ತು. ಮೊದಲ ಮತ್ತು ಎರಡನೆಯ ಅಲೆಗಳ ಸಮಯದಲ್ಲಿ ನಾವು ಕ್ವಾರಂಟೈನ್  ಕೇಂದ್ರಗಳು ಮತ್ತು ಐಸೋಲೇಷನ್ ಸೌಲಭ್ಯಗಳ ವ್ಯವಸ್ಥೆ ಮಾಡಿದ್ದೇವೆ. ಮನೆ ಮನೆಗೆ ತೆರಳಿ ನಿಯಮಿತವಾಗಿ ಕೊರೊನಾ ಪರೀಕ್ಷೆ ನಡೆಸುತ್ತಿದ್ದೇವು “ಎಂದು ಹೇಳಿದ್ದಾರೆ.

ಸುಮಾರು 10 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಧಾರವಿ ಕೊಳೆಗೇರಿ ಇರುವುದು 2.1 ಚದರ ಕಿಲೋಮೀಟರ್ ಪ್ರದೇಶದಲ್ಲಿ. ಕಳೆದ ವರ್ಷ ಏಪ್ರಿಲ್ 1 ರಂದು ಧಾರಾವಿಯಲ್ಲಿ ಮೊದಲ ಕೊರೊನಾ ಪ್ರಕರಣ  ವರದಿಯಾಗಿತ್ತು. ಎರಡನೇ ಅಲೆಯಲ್ಲಿ ಈ ವರ್ಷದ ಏಪ್ರಿಲ್ 8 ರಂದು ಏಕಾಏಕಿ 99 ಪ್ರಕರಣಗಳು ವರದಿಯಾಗಿ ಆತಂಕಕ್ಕೆ ಕಾರಣವಾಗಿತ್ತು.

“ಧಾರವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ. ಒಂದೇ ದಿನದಲ್ಲಿ ಕೊರೊನಾ ಶೂನ್ಯ ಪ್ರಕರಣಗಳನ್ನು ದಾಖಲಿಸಿದ್ದು, ಮುಂಬೈ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ” ಎಂದು ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ರಾಜ್ಯ ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಮೊದಲ ಅಲೆಯಲ್ಲಿ 2020 ರ ಸೆಪ್ಟೆಂಬರ್ ನಂತರ ದೈನಂದಿನ ಪ್ರಕರಣಗಳ ಸಂಖ್ಯೆ 30 ಕ್ಕಿಂತ ಕಡಿಮೆಯಾಗಿದೆ. ಧಾರಾವಿಯಲ್ಲಿ ಆರು ಬಾರಿ 24 ಗಂಟೆಗಳ ಅವಧಿಯಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. 2020 ರ ಡಿಸೆಂಬರ್‌ನಲ್ಲಿ ಒಂದು ದಿನ, ಜನವರಿಯಲ್ಲಿ ನಾಲ್ಕು ದಿನಗಳು ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಒಮ್ಮೆ ಯಾವುದೇ ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಸೋಮವಾರ ಮತ್ತು ಮಂಗಳವಾರ ಸತತ ಎರಡು ದಿನಗಳು ಶೂನ್ಯ ಪ್ರಕರಣಗಳು ವರದಿಯಾಗಿರುವುದು ಅಧಿಕಾರಿಗಳಲ್ಲಿ ಸಂತೋಷಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...