Homeಕರೋನಾ ತಲ್ಲಣಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

- Advertisement -
- Advertisement -

ಏಷ್ಯಾದ ಅತಿ ದೊಡ್ಡ ಕೊಳೆಗೇರಿ ಮುಂಬೈನ ಧಾರಾವಿಯಲ್ಲಿ ಸತತ ಎರಡನೇ ದಿನವೂ ಒಂದೂ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾದಿಂದ ತತ್ತರಿಸಿದ್ದ ಮಹಾರಾಷ್ಟ, ಅದರಲ್ಲೂ ಮುಂಬೈನಲ್ಲಿ ಸದ್ಯ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ.

ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕೃತ ಮಾಹಿತಿಯ ಪ್ರಕಾರ, “ಮುಂಬೈನ ಧಾರಾವಿ ಎರಡನೇ ದಿನವೂ ಸೊನ್ನೆ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಪ್ರಕರಣಗಳು 11 ಕ್ಕೆ ನಿಂತಿದ್ದು, ಸದ್ಯ ಧಾರವಿಯಲ್ಲಿರುವ ಒಟ್ಟು ಪ್ರಕರಣಗಳು 6,861” ಎಂದು ಮಾಹಿತಿ ನೀಡಿದೆ.

ಈ ವರ್ಷದ ಫೆಬ್ರವರಿ 2 ರ ನಂತರ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ ಧಾರವಿಯಲ್ಲಿ ಸೋಮವಾರ ಒಂದು ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಮಂಗಳವಾರವು ಒಂದು ಪ್ರಕರಣ ವರದಿಯಾಗಿಲ್ಲ.

ಧಾರವಿಯ ಸಹಾಯಕ ಮುನ್ಸಿಪಲ್ ಕಮಿಷನರ್ ಕಿರಣ್ ದಿಘಾವ್ಕರ್, “ಈ ವರ್ಷದ ಫೆಬ್ರವರಿಯಲ್ಲಿ ಕೊನೆಯದಾಗಿ ಧಾರಾವಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದ್ದವು. ಇದಾದ ಬಳಿಕ ಈಗ ಮತ್ತೆ ಯಾವುದೇ ಪ್ರಕರಣ ವರದಿಯಾಗಿಲ್ಲ.ಕೊರೊನಾ ಆರಂಭದಲ್ಲಿ ಈ ಪ್ರದೇಶದಲ್ಲಿ ಅದನ್ನು ನಿಯಂತ್ರಿಸುವುದು ಕಠಿಣವಾಗಿತ್ತು. ಇಲ್ಲಿ ಕಿರಿದಾದ ಪ್ರದೇಶದಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ಹಲವಾರು ಸಣ್ಣ ಪ್ರಮಾಣದ ಕೈಗಾರಿಕೆಗಳು, ಜವಳಿ ಕಾರ್ಖಾನೆಗಳು ಇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

“ಧಾರವಿ ನಿವಾಸಿಗಳು ಸಾರ್ವಜನಿಕ ಶೌಚಾಲಯಗಳನ್ನು ಸಹ ಬಳಸುತ್ತಾರೆ, ಆದ್ದರಿಂದ ಕೊರೊನಾ ನಿಯಂತ್ರಣ ನಿಜವಾಗಿಯೂ ಸವಾಲಿನದ್ದಾಗಿತ್ತು. ಮೊದಲ ಮತ್ತು ಎರಡನೆಯ ಅಲೆಗಳ ಸಮಯದಲ್ಲಿ ನಾವು ಕ್ವಾರಂಟೈನ್  ಕೇಂದ್ರಗಳು ಮತ್ತು ಐಸೋಲೇಷನ್ ಸೌಲಭ್ಯಗಳ ವ್ಯವಸ್ಥೆ ಮಾಡಿದ್ದೇವೆ. ಮನೆ ಮನೆಗೆ ತೆರಳಿ ನಿಯಮಿತವಾಗಿ ಕೊರೊನಾ ಪರೀಕ್ಷೆ ನಡೆಸುತ್ತಿದ್ದೇವು “ಎಂದು ಹೇಳಿದ್ದಾರೆ.

ಸುಮಾರು 10 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಧಾರವಿ ಕೊಳೆಗೇರಿ ಇರುವುದು 2.1 ಚದರ ಕಿಲೋಮೀಟರ್ ಪ್ರದೇಶದಲ್ಲಿ. ಕಳೆದ ವರ್ಷ ಏಪ್ರಿಲ್ 1 ರಂದು ಧಾರಾವಿಯಲ್ಲಿ ಮೊದಲ ಕೊರೊನಾ ಪ್ರಕರಣ  ವರದಿಯಾಗಿತ್ತು. ಎರಡನೇ ಅಲೆಯಲ್ಲಿ ಈ ವರ್ಷದ ಏಪ್ರಿಲ್ 8 ರಂದು ಏಕಾಏಕಿ 99 ಪ್ರಕರಣಗಳು ವರದಿಯಾಗಿ ಆತಂಕಕ್ಕೆ ಕಾರಣವಾಗಿತ್ತು.

“ಧಾರವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ. ಒಂದೇ ದಿನದಲ್ಲಿ ಕೊರೊನಾ ಶೂನ್ಯ ಪ್ರಕರಣಗಳನ್ನು ದಾಖಲಿಸಿದ್ದು, ಮುಂಬೈ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ” ಎಂದು ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ರಾಜ್ಯ ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಮೊದಲ ಅಲೆಯಲ್ಲಿ 2020 ರ ಸೆಪ್ಟೆಂಬರ್ ನಂತರ ದೈನಂದಿನ ಪ್ರಕರಣಗಳ ಸಂಖ್ಯೆ 30 ಕ್ಕಿಂತ ಕಡಿಮೆಯಾಗಿದೆ. ಧಾರಾವಿಯಲ್ಲಿ ಆರು ಬಾರಿ 24 ಗಂಟೆಗಳ ಅವಧಿಯಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. 2020 ರ ಡಿಸೆಂಬರ್‌ನಲ್ಲಿ ಒಂದು ದಿನ, ಜನವರಿಯಲ್ಲಿ ನಾಲ್ಕು ದಿನಗಳು ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಒಮ್ಮೆ ಯಾವುದೇ ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಸೋಮವಾರ ಮತ್ತು ಮಂಗಳವಾರ ಸತತ ಎರಡು ದಿನಗಳು ಶೂನ್ಯ ಪ್ರಕರಣಗಳು ವರದಿಯಾಗಿರುವುದು ಅಧಿಕಾರಿಗಳಲ್ಲಿ ಸಂತೋಷಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...