Homeಕರೋನಾ ತಲ್ಲಣಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

ಮುಂಬೈ :ಏಷ್ಯಾದ ಅತಿ ದೊಡ್ಡ ಸ್ಲಂ ಧಾರಾವಿಯಲ್ಲಿ 2ನೇ ದಿನವು ಕೊರೊನಾ ಪ್ರಕರಣಗಳಿಲ್ಲ!

- Advertisement -
- Advertisement -

ಏಷ್ಯಾದ ಅತಿ ದೊಡ್ಡ ಕೊಳೆಗೇರಿ ಮುಂಬೈನ ಧಾರಾವಿಯಲ್ಲಿ ಸತತ ಎರಡನೇ ದಿನವೂ ಒಂದೂ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಕೊರೊನಾದಿಂದ ತತ್ತರಿಸಿದ್ದ ಮಹಾರಾಷ್ಟ, ಅದರಲ್ಲೂ ಮುಂಬೈನಲ್ಲಿ ಸದ್ಯ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ.

ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕೃತ ಮಾಹಿತಿಯ ಪ್ರಕಾರ, “ಮುಂಬೈನ ಧಾರಾವಿ ಎರಡನೇ ದಿನವೂ ಸೊನ್ನೆ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಪ್ರಕರಣಗಳು 11 ಕ್ಕೆ ನಿಂತಿದ್ದು, ಸದ್ಯ ಧಾರವಿಯಲ್ಲಿರುವ ಒಟ್ಟು ಪ್ರಕರಣಗಳು 6,861” ಎಂದು ಮಾಹಿತಿ ನೀಡಿದೆ.

ಈ ವರ್ಷದ ಫೆಬ್ರವರಿ 2 ರ ನಂತರ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ ಧಾರವಿಯಲ್ಲಿ ಸೋಮವಾರ ಒಂದು ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಮಂಗಳವಾರವು ಒಂದು ಪ್ರಕರಣ ವರದಿಯಾಗಿಲ್ಲ.

ಧಾರವಿಯ ಸಹಾಯಕ ಮುನ್ಸಿಪಲ್ ಕಮಿಷನರ್ ಕಿರಣ್ ದಿಘಾವ್ಕರ್, “ಈ ವರ್ಷದ ಫೆಬ್ರವರಿಯಲ್ಲಿ ಕೊನೆಯದಾಗಿ ಧಾರಾವಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದ್ದವು. ಇದಾದ ಬಳಿಕ ಈಗ ಮತ್ತೆ ಯಾವುದೇ ಪ್ರಕರಣ ವರದಿಯಾಗಿಲ್ಲ.ಕೊರೊನಾ ಆರಂಭದಲ್ಲಿ ಈ ಪ್ರದೇಶದಲ್ಲಿ ಅದನ್ನು ನಿಯಂತ್ರಿಸುವುದು ಕಠಿಣವಾಗಿತ್ತು. ಇಲ್ಲಿ ಕಿರಿದಾದ ಪ್ರದೇಶದಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ಹಲವಾರು ಸಣ್ಣ ಪ್ರಮಾಣದ ಕೈಗಾರಿಕೆಗಳು, ಜವಳಿ ಕಾರ್ಖಾನೆಗಳು ಇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

“ಧಾರವಿ ನಿವಾಸಿಗಳು ಸಾರ್ವಜನಿಕ ಶೌಚಾಲಯಗಳನ್ನು ಸಹ ಬಳಸುತ್ತಾರೆ, ಆದ್ದರಿಂದ ಕೊರೊನಾ ನಿಯಂತ್ರಣ ನಿಜವಾಗಿಯೂ ಸವಾಲಿನದ್ದಾಗಿತ್ತು. ಮೊದಲ ಮತ್ತು ಎರಡನೆಯ ಅಲೆಗಳ ಸಮಯದಲ್ಲಿ ನಾವು ಕ್ವಾರಂಟೈನ್  ಕೇಂದ್ರಗಳು ಮತ್ತು ಐಸೋಲೇಷನ್ ಸೌಲಭ್ಯಗಳ ವ್ಯವಸ್ಥೆ ಮಾಡಿದ್ದೇವೆ. ಮನೆ ಮನೆಗೆ ತೆರಳಿ ನಿಯಮಿತವಾಗಿ ಕೊರೊನಾ ಪರೀಕ್ಷೆ ನಡೆಸುತ್ತಿದ್ದೇವು “ಎಂದು ಹೇಳಿದ್ದಾರೆ.

ಸುಮಾರು 10 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಧಾರವಿ ಕೊಳೆಗೇರಿ ಇರುವುದು 2.1 ಚದರ ಕಿಲೋಮೀಟರ್ ಪ್ರದೇಶದಲ್ಲಿ. ಕಳೆದ ವರ್ಷ ಏಪ್ರಿಲ್ 1 ರಂದು ಧಾರಾವಿಯಲ್ಲಿ ಮೊದಲ ಕೊರೊನಾ ಪ್ರಕರಣ  ವರದಿಯಾಗಿತ್ತು. ಎರಡನೇ ಅಲೆಯಲ್ಲಿ ಈ ವರ್ಷದ ಏಪ್ರಿಲ್ 8 ರಂದು ಏಕಾಏಕಿ 99 ಪ್ರಕರಣಗಳು ವರದಿಯಾಗಿ ಆತಂಕಕ್ಕೆ ಕಾರಣವಾಗಿತ್ತು.

“ಧಾರವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ. ಒಂದೇ ದಿನದಲ್ಲಿ ಕೊರೊನಾ ಶೂನ್ಯ ಪ್ರಕರಣಗಳನ್ನು ದಾಖಲಿಸಿದ್ದು, ಮುಂಬೈ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ” ಎಂದು ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ರಾಜ್ಯ ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಮೊದಲ ಅಲೆಯಲ್ಲಿ 2020 ರ ಸೆಪ್ಟೆಂಬರ್ ನಂತರ ದೈನಂದಿನ ಪ್ರಕರಣಗಳ ಸಂಖ್ಯೆ 30 ಕ್ಕಿಂತ ಕಡಿಮೆಯಾಗಿದೆ. ಧಾರಾವಿಯಲ್ಲಿ ಆರು ಬಾರಿ 24 ಗಂಟೆಗಳ ಅವಧಿಯಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ. 2020 ರ ಡಿಸೆಂಬರ್‌ನಲ್ಲಿ ಒಂದು ದಿನ, ಜನವರಿಯಲ್ಲಿ ನಾಲ್ಕು ದಿನಗಳು ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಒಮ್ಮೆ ಯಾವುದೇ ಕೊರೊನಾ ಪ್ರಕರಣಗಳು ವರದಿಯಾಗಿರಲಿಲ್ಲ. ಸೋಮವಾರ ಮತ್ತು ಮಂಗಳವಾರ ಸತತ ಎರಡು ದಿನಗಳು ಶೂನ್ಯ ಪ್ರಕರಣಗಳು ವರದಿಯಾಗಿರುವುದು ಅಧಿಕಾರಿಗಳಲ್ಲಿ ಸಂತೋಷಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....