Homeಮುಖಪುಟಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.

ಪ್ರಕರಣದಲ್ಲಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿರುದ್ಧ ಆರ್ಯನ್ ಖಾನ್‌ಗೆ ಮತ್ತು ಸಹ-ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಮೂರು ದಿನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಇದನ್ನೂ ಓದಿ: ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

ಆರ್ಯನ್ ಖಾನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಆರ್ಯನ್ ಖಾನ್ ಬಳಿ ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ ಎಂಬುದನ್ನು ಒತ್ತಿ ಹೇಳಿದ್ದರು.

ಆದರೆ, ಎನ್‌ಸಿಬಿ ಮಾತ್ರ ಆರ್ಯನ್ ಖಾನ್ ಕೂಡ ಈ ಪಿತೂರಿಯ ಭಾಗವಾಗಿದ್ದರು. ಅವರ ವಾಟ್ಸಾಪ್ ಚಾಟ್‌ಗಳು ಅಕ್ರಮ ಡ್ರಗ್ ದಂಧೆಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ವಾದಿಸಿದ್ದರು.

ಗುರುವಾರ ಹೈಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಆರ್ಯನ್ ಜಾಮೀನು ಅರ್ಜಿಯನ್ನು ವಿರೋಧಿಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಕೀಲ ಎಎಸ್‌ಜಿ ಅನಿಲ್ ಸಿಂಗ್, ’ಅರ್ಜಿದಾರ ಆರ್ಯನ್ ಖಾನ್ ಮೊದಲ ಗ್ರಾಹಕರಲ್ಲ, ಆದರೆ ಕಳೆದ ಎರಡು ವರ್ಷಗಳಿಂದ ನಿಯಮಿತವಾಗಿ ಡ್ರಗ್ಸ್ ಸೇವಿಸುತ್ತಿದ್ದಾರೆ” ಎಂದರು.

“ಒಬ್ಬ ವ್ಯಕ್ತಿಯು ಮಾದಕ ದ್ರವ್ಯವನ್ನು ಸೇವಿಸದಿರುವ ಪ್ರಕರಣವಿದೆ. ಆದರೆ, ಅವರು ಅದನ್ನು ಹೊಂದಿದ್ದಲ್ಲಿ, ಅವರ ಮೇಲೆ NDPS ಕಾಯಿದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು. ಆರೋಪಿ ಆರ್ಯನ್ ಪ್ರಜ್ಞಾಪೂರ್ವಕವಾಗಿ ಕಳ್ಳಸಾಗಣೆಯನ್ನು ಮಾಡಿರುವುದು ಕಂಡುಬಂದಿದೆ” ಎಂದು ಸಿಂಗ್ ವಾದಿಸಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ನಾಳೆಯೊಳಗೆ ಲಭ್ಯವಾಗುವುದರಿಂದ ಆರೋಪಿಗಳು ಇಂದು ರಾತ್ರಿ ಜೈಲಿನಲ್ಲೆ ಉಳಿಯಬೇಕಾಗುತ್ತದೆ.


ಇದನ್ನೂ ಓದಿ: ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...