Homeಮುಖಪುಟಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿ, ಜೊತೆಗೆ ಒಂದು ವರ್ಷದೊಳಗೆ ಪತ್ತೆಯಾದಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂಬ ಷರತ್ತು ವಿಧಿಸಿದೆ. ಆದಾಗ್ಯೂ, ಆರೋಪಿಗೆ ವಿಧಿಸಿದ ಈ ಷರತ್ತಿನ ಅವಧಿ ಒಂದು ವರ್ಷ ಆಗಿದ್ದು, ಅದರ ನಂತರ ಷರತ್ತು ಇರುವುದಿಲ್ಲ ಎಂದು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ಏಕ ಪೀಠವು ಅಕ್ಟೋಬರ್ 12 ರಂದು ನೀಡಿದ ಆದೇಶದಲ್ಲಿ ಹೇಳಿದೆ.

ಆರೋಪಿ ಮತ್ತು 22 ವರ್ಷದ ಯುವತಿ ಒಪ್ಪಿತ ಸಂಬಂಧದಲ್ಲಿದ್ದರು, ಆದರೆ ಆ ಯುವತಿ ಗರ್ಭಿಣಿ ಎಂದು ತಿಳಿದ ನಂತರ ಆರೋಪಿಯು ಅವರಿಂದ ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ಈ ವೇಳೆ ಅತ್ಯಾಚಾರ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯು 2020 ರ ಫೆಬ್ರವರಿಯಲ್ಲಿ ಯುವಕನ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ನಂತರ ಆತನನ್ನು ಬಂಧಿಸಲಾಯಿತು. ಯುವತಿ ತಮ್ಮ ದೂರಿನಲ್ಲಿ, ತಾವಿಬ್ಬರು 2018 ರಿಂದ ಸಂಬಂಧ ಹೊಂದಿದ್ದಾಗಿ ಮತ್ತು ತಮ್ಮ ಸಂಬಂಧಗಳ ಬಗ್ಗೆ ಇಬ್ಬರ ಕುಟುಂಬಗಳಿಗೆ ತಿಳಿದಿತ್ತು, ಜೊತೆಗೆ ಅವರು ಅದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

2019 ರಲ್ಲಿ, ಯುವತಿಯು ತಾನು ಗರ್ಭಿಣಿ ಎಂಬುವುದನ್ನು ಆರೋಪಿ ಯುವಕನಿಗೆ ತಿಳಿಸಿದ್ದು, ಆದರೆ ಯುವಕನು ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ತನ್ನ ಗರ್ಭಧಾರಣೆಯ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲು ಇಷ್ಟಪಡದ ಕಾರಣ ಮಹಿಳೆ ತನ್ನ ಮನೆಯನ್ನು ತೊರೆದಿದ್ದರು. ಜನವರಿ 27, 2020 ರಂದು, ಅವರು ನಗರದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು.

ಜನವರಿ 30 ರಂದು ಯುವತಿಯು ಮಗುವನ್ನು ಕಟ್ಟಡದ ಮುಂದೆ ಬಿಟ್ಟು ಹೋಗಿದ್ದು, ನಂತರ ಮಗುವನ್ನು ತ್ಯಜಿಸಿದ್ದಕ್ಕಾಗಿ ಆಕೆಯ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಮೂರ್ತಿ ಡಾಂಗ್ರೆ ಅವರು ತಮ್ಮ ಆದೇಶದಲ್ಲಿ, “ಯುವತಿ ನ್ಯಾಯಾಲಯದ ಮುಂದೆ ಬರದೆ ಇರಲು ಇದೇ ಕಾರಣಕ್ಕೆ ಇರಬಹುದು” ಎಂದು ಹೇಳಿದ್ದಾರೆ.

ಈ ನಡುವೆ ಯುವತಿಯನ್ನು ತಾನು ಮದುವೆಯಾಗುವುದಾಗಿ ಮತ್ತು ಮಗುವಿನ ಪಿತೃತ್ವವನ್ನು ಸ್ವೀಕರಿಸಲು ತಾನು ಸಿದ್ಧನಿರುವುದಾಗಿ ಆರೋಪಿ ಯುವಕ ಹೈಕೋರ್ಟ್‌ಗೆ ಭರವಸೆ ನೀಡಿದ್ದಾನೆ. ಆದರೆ ಯುವತಿ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು, ಶಿಶುಪಾಲನಾ ಕೇಂದ್ರಕ್ಕೆ ದಾಖಲಾಗಿದ್ದ ಮಗುವನ್ನು ಈಗಾಗಲೇ ದತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ಮೇಲೆ ಮತ್ತೊಂದು ಪ್ರಕರಣ: ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

“ಇಂತಹ ಸಂದರ್ಭಗಳಲ್ಲಿ ಘಟನೆ ವರದಿಯಾದಾಗ, ಸಂತ್ರಸ್ತೆ ಯುವತಿ ವಯಸ್ಕರಾಗಿದ್ದರು ಮತ್ತು ಸಂಬಂಧವು ಒಮ್ಮತದಿಂದ ಕೂಡಿತ್ತು ಎಂದು ಅವರು ಈಗಾಗಲೇ ಹೇಳಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.

“ಅರ್ಜಿದಾರ ಯುವಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಸಂತ್ರಸ್ತೆ ಒಂದು ವರ್ಷದೊಳಗೆ ಪತ್ತೆಯಾದರೆ, ಯುವಕ ಅವರನ್ನು ವಿವಾಹವಾಗಬೇಕು ಮತ್ತು ವರ್ಷದ ನಂತರ ಈ ಷರತ್ತಿಗೆ ಬದ್ದರಾಗಬೇಕಿಲ್ಲ” ಆದೇಶವು ಹೇಳಿದ್ದು, 25 ಸಾವಿರ ರೂ.ಗಳ ಬಾಂಡ್‌ನಲ್ಲಿ ನ್ಯಾಯಾಲಯವು ಯುವಕನಿಗೆ ಜಾಮೀನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...