Homeಮುಖಪುಟಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿ, ಜೊತೆಗೆ ಒಂದು ವರ್ಷದೊಳಗೆ ಪತ್ತೆಯಾದಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂಬ ಷರತ್ತು ವಿಧಿಸಿದೆ. ಆದಾಗ್ಯೂ, ಆರೋಪಿಗೆ ವಿಧಿಸಿದ ಈ ಷರತ್ತಿನ ಅವಧಿ ಒಂದು ವರ್ಷ ಆಗಿದ್ದು, ಅದರ ನಂತರ ಷರತ್ತು ಇರುವುದಿಲ್ಲ ಎಂದು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ಏಕ ಪೀಠವು ಅಕ್ಟೋಬರ್ 12 ರಂದು ನೀಡಿದ ಆದೇಶದಲ್ಲಿ ಹೇಳಿದೆ.

ಆರೋಪಿ ಮತ್ತು 22 ವರ್ಷದ ಯುವತಿ ಒಪ್ಪಿತ ಸಂಬಂಧದಲ್ಲಿದ್ದರು, ಆದರೆ ಆ ಯುವತಿ ಗರ್ಭಿಣಿ ಎಂದು ತಿಳಿದ ನಂತರ ಆರೋಪಿಯು ಅವರಿಂದ ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ಈ ವೇಳೆ ಅತ್ಯಾಚಾರ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯು 2020 ರ ಫೆಬ್ರವರಿಯಲ್ಲಿ ಯುವಕನ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ನಂತರ ಆತನನ್ನು ಬಂಧಿಸಲಾಯಿತು. ಯುವತಿ ತಮ್ಮ ದೂರಿನಲ್ಲಿ, ತಾವಿಬ್ಬರು 2018 ರಿಂದ ಸಂಬಂಧ ಹೊಂದಿದ್ದಾಗಿ ಮತ್ತು ತಮ್ಮ ಸಂಬಂಧಗಳ ಬಗ್ಗೆ ಇಬ್ಬರ ಕುಟುಂಬಗಳಿಗೆ ತಿಳಿದಿತ್ತು, ಜೊತೆಗೆ ಅವರು ಅದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

2019 ರಲ್ಲಿ, ಯುವತಿಯು ತಾನು ಗರ್ಭಿಣಿ ಎಂಬುವುದನ್ನು ಆರೋಪಿ ಯುವಕನಿಗೆ ತಿಳಿಸಿದ್ದು, ಆದರೆ ಯುವಕನು ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದನು. ತನ್ನ ಗರ್ಭಧಾರಣೆಯ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲು ಇಷ್ಟಪಡದ ಕಾರಣ ಮಹಿಳೆ ತನ್ನ ಮನೆಯನ್ನು ತೊರೆದಿದ್ದರು. ಜನವರಿ 27, 2020 ರಂದು, ಅವರು ನಗರದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು.

ಜನವರಿ 30 ರಂದು ಯುವತಿಯು ಮಗುವನ್ನು ಕಟ್ಟಡದ ಮುಂದೆ ಬಿಟ್ಟು ಹೋಗಿದ್ದು, ನಂತರ ಮಗುವನ್ನು ತ್ಯಜಿಸಿದ್ದಕ್ಕಾಗಿ ಆಕೆಯ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ನ್ಯಾಯಮೂರ್ತಿ ಡಾಂಗ್ರೆ ಅವರು ತಮ್ಮ ಆದೇಶದಲ್ಲಿ, “ಯುವತಿ ನ್ಯಾಯಾಲಯದ ಮುಂದೆ ಬರದೆ ಇರಲು ಇದೇ ಕಾರಣಕ್ಕೆ ಇರಬಹುದು” ಎಂದು ಹೇಳಿದ್ದಾರೆ.

ಈ ನಡುವೆ ಯುವತಿಯನ್ನು ತಾನು ಮದುವೆಯಾಗುವುದಾಗಿ ಮತ್ತು ಮಗುವಿನ ಪಿತೃತ್ವವನ್ನು ಸ್ವೀಕರಿಸಲು ತಾನು ಸಿದ್ಧನಿರುವುದಾಗಿ ಆರೋಪಿ ಯುವಕ ಹೈಕೋರ್ಟ್‌ಗೆ ಭರವಸೆ ನೀಡಿದ್ದಾನೆ. ಆದರೆ ಯುವತಿ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು, ಶಿಶುಪಾಲನಾ ಕೇಂದ್ರಕ್ಕೆ ದಾಖಲಾಗಿದ್ದ ಮಗುವನ್ನು ಈಗಾಗಲೇ ದತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರ ಮೇಲೆ ಮತ್ತೊಂದು ಪ್ರಕರಣ: ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

“ಇಂತಹ ಸಂದರ್ಭಗಳಲ್ಲಿ ಘಟನೆ ವರದಿಯಾದಾಗ, ಸಂತ್ರಸ್ತೆ ಯುವತಿ ವಯಸ್ಕರಾಗಿದ್ದರು ಮತ್ತು ಸಂಬಂಧವು ಒಮ್ಮತದಿಂದ ಕೂಡಿತ್ತು ಎಂದು ಅವರು ಈಗಾಗಲೇ ಹೇಳಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.

“ಅರ್ಜಿದಾರ ಯುವಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಸಂತ್ರಸ್ತೆ ಒಂದು ವರ್ಷದೊಳಗೆ ಪತ್ತೆಯಾದರೆ, ಯುವಕ ಅವರನ್ನು ವಿವಾಹವಾಗಬೇಕು ಮತ್ತು ವರ್ಷದ ನಂತರ ಈ ಷರತ್ತಿಗೆ ಬದ್ದರಾಗಬೇಕಿಲ್ಲ” ಆದೇಶವು ಹೇಳಿದ್ದು, 25 ಸಾವಿರ ರೂ.ಗಳ ಬಾಂಡ್‌ನಲ್ಲಿ ನ್ಯಾಯಾಲಯವು ಯುವಕನಿಗೆ ಜಾಮೀನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...