Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...