Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...