Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...