Homeಸಿನಿಮಾಕ್ರೀಡೆಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

ಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 6 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಒಂದು ವೇಳೆ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 15 ಅಂಕ ಪಡೆದಿರುವ ಲಕ್ನೋ 3ನೇ ಸ್ಥಾನದಲ್ಲಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿದ್ದರೆ 12 ಅಂಕ ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ.

ಆರ್‌ಸಿಬಿ ಎರಡನೇ ಸ್ಥಾನಕ್ಕೂ ತಲುಪಬಹುದು!

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಲ್ಲಿ 16 ಗಳಿಸುತ್ತದೆ. ಅದೇ ರೀತಿ ಚನ್ನೈ ಮತ್ತು ಲಕ್ನೋ ತಂಡಗಳು ತಮ್ಮ ಕಡೆಯ ಪಂದ್ಯಗಳಲ್ಲಿ ಸೋತರೆ ಅವು 15 ಅಂಕಗಳಿಗೆ ಸೀಮತವಾಗುತ್ತವೆ. ಆಘ ಆರ್‌ಸಿಬಿ ತಂಡ ಎರಡನೇ ಸ್ಥಾನಕ್ಕೆ ಲಗ್ಗೆ ಇಡಬಹುದಾಗಿದೆ. ಆಗ ಅದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತರೂ ಫೈನಲ್ ತಲುಪಲು ಮತ್ತೊಂದು ಅವಕಾಶವಿರುತ್ತದೆ. ಆದರೆ 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ ಆ ಅವಕಾಶ ಇರುವುದಿಲ್ಲ. ಆ ತಂಡಗಳು ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ ಎರಡೂ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಬೇಕಿರುತ್ತದೆ.

ಈ ತಂಡಗಳಿಗೂ ಅವಕಾಶವಿದೆ

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತು ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮುಂಬೈ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. 15 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ಸಹ ಪ್ಲೇ ಆಫ್ ಪ್ರವೇಶಿಸುತ್ತವೆ. ಆಗ ಆರ್‌ಸಿಬಿ ಹೊರಬೀಳುತ್ತದೆ.

ಆರ್‌ಸಿಬಿ ಮತ್ತು ಮುಂಬೈ ತಂಡಗಳು ತನ್ನ ಕಡೆಯ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಸೋತರೆ ಎರಡೂ ಸಹ ಹೋರಬೀಳುತ್ತವೆ. ಆಗ 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭಾರೀ ವಿಜಯದಿಂದ ತನ್ನ ಕೊನೆಯ ಪಂದ್ಯ ಗೆದ್ದು 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ ರೇಟ್ ಪಡೆದು ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಲು ಯತ್ನಿಸುತ್ತಿದೆ. ಆದರೆ ಆ ಸಾಧ್ಯತೆ ತೀರಾ ಕಡಿಮೆ ಇದೆ. ಏಕೆಂದರೆ ಕೋಲ್ಕತ್ತ ತಂಡದ ನೆಟ್‌ ರನ್‌ ರೇಟ್ -0.256 ಇದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...