Homeಸಿನಿಮಾಕ್ರೀಡೆಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

ಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 6 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಒಂದು ವೇಳೆ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 15 ಅಂಕ ಪಡೆದಿರುವ ಲಕ್ನೋ 3ನೇ ಸ್ಥಾನದಲ್ಲಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿದ್ದರೆ 12 ಅಂಕ ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ.

ಆರ್‌ಸಿಬಿ ಎರಡನೇ ಸ್ಥಾನಕ್ಕೂ ತಲುಪಬಹುದು!

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಲ್ಲಿ 16 ಗಳಿಸುತ್ತದೆ. ಅದೇ ರೀತಿ ಚನ್ನೈ ಮತ್ತು ಲಕ್ನೋ ತಂಡಗಳು ತಮ್ಮ ಕಡೆಯ ಪಂದ್ಯಗಳಲ್ಲಿ ಸೋತರೆ ಅವು 15 ಅಂಕಗಳಿಗೆ ಸೀಮತವಾಗುತ್ತವೆ. ಆಘ ಆರ್‌ಸಿಬಿ ತಂಡ ಎರಡನೇ ಸ್ಥಾನಕ್ಕೆ ಲಗ್ಗೆ ಇಡಬಹುದಾಗಿದೆ. ಆಗ ಅದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತರೂ ಫೈನಲ್ ತಲುಪಲು ಮತ್ತೊಂದು ಅವಕಾಶವಿರುತ್ತದೆ. ಆದರೆ 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ ಆ ಅವಕಾಶ ಇರುವುದಿಲ್ಲ. ಆ ತಂಡಗಳು ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ ಎರಡೂ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಬೇಕಿರುತ್ತದೆ.

ಈ ತಂಡಗಳಿಗೂ ಅವಕಾಶವಿದೆ

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತು ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮುಂಬೈ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. 15 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ಸಹ ಪ್ಲೇ ಆಫ್ ಪ್ರವೇಶಿಸುತ್ತವೆ. ಆಗ ಆರ್‌ಸಿಬಿ ಹೊರಬೀಳುತ್ತದೆ.

ಆರ್‌ಸಿಬಿ ಮತ್ತು ಮುಂಬೈ ತಂಡಗಳು ತನ್ನ ಕಡೆಯ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಸೋತರೆ ಎರಡೂ ಸಹ ಹೋರಬೀಳುತ್ತವೆ. ಆಗ 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭಾರೀ ವಿಜಯದಿಂದ ತನ್ನ ಕೊನೆಯ ಪಂದ್ಯ ಗೆದ್ದು 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ ರೇಟ್ ಪಡೆದು ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಲು ಯತ್ನಿಸುತ್ತಿದೆ. ಆದರೆ ಆ ಸಾಧ್ಯತೆ ತೀರಾ ಕಡಿಮೆ ಇದೆ. ಏಕೆಂದರೆ ಕೋಲ್ಕತ್ತ ತಂಡದ ನೆಟ್‌ ರನ್‌ ರೇಟ್ -0.256 ಇದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...