Homeಸಿನಿಮಾಕ್ರೀಡೆಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

ಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 6 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಒಂದು ವೇಳೆ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 15 ಅಂಕ ಪಡೆದಿರುವ ಲಕ್ನೋ 3ನೇ ಸ್ಥಾನದಲ್ಲಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿದ್ದರೆ 12 ಅಂಕ ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ.

ಆರ್‌ಸಿಬಿ ಎರಡನೇ ಸ್ಥಾನಕ್ಕೂ ತಲುಪಬಹುದು!

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಲ್ಲಿ 16 ಗಳಿಸುತ್ತದೆ. ಅದೇ ರೀತಿ ಚನ್ನೈ ಮತ್ತು ಲಕ್ನೋ ತಂಡಗಳು ತಮ್ಮ ಕಡೆಯ ಪಂದ್ಯಗಳಲ್ಲಿ ಸೋತರೆ ಅವು 15 ಅಂಕಗಳಿಗೆ ಸೀಮತವಾಗುತ್ತವೆ. ಆಘ ಆರ್‌ಸಿಬಿ ತಂಡ ಎರಡನೇ ಸ್ಥಾನಕ್ಕೆ ಲಗ್ಗೆ ಇಡಬಹುದಾಗಿದೆ. ಆಗ ಅದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತರೂ ಫೈನಲ್ ತಲುಪಲು ಮತ್ತೊಂದು ಅವಕಾಶವಿರುತ್ತದೆ. ಆದರೆ 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ ಆ ಅವಕಾಶ ಇರುವುದಿಲ್ಲ. ಆ ತಂಡಗಳು ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ ಎರಡೂ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಬೇಕಿರುತ್ತದೆ.

ಈ ತಂಡಗಳಿಗೂ ಅವಕಾಶವಿದೆ

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತು ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮುಂಬೈ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. 15 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ಸಹ ಪ್ಲೇ ಆಫ್ ಪ್ರವೇಶಿಸುತ್ತವೆ. ಆಗ ಆರ್‌ಸಿಬಿ ಹೊರಬೀಳುತ್ತದೆ.

ಆರ್‌ಸಿಬಿ ಮತ್ತು ಮುಂಬೈ ತಂಡಗಳು ತನ್ನ ಕಡೆಯ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಸೋತರೆ ಎರಡೂ ಸಹ ಹೋರಬೀಳುತ್ತವೆ. ಆಗ 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭಾರೀ ವಿಜಯದಿಂದ ತನ್ನ ಕೊನೆಯ ಪಂದ್ಯ ಗೆದ್ದು 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ ರೇಟ್ ಪಡೆದು ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಲು ಯತ್ನಿಸುತ್ತಿದೆ. ಆದರೆ ಆ ಸಾಧ್ಯತೆ ತೀರಾ ಕಡಿಮೆ ಇದೆ. ಏಕೆಂದರೆ ಕೋಲ್ಕತ್ತ ತಂಡದ ನೆಟ್‌ ರನ್‌ ರೇಟ್ -0.256 ಇದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...