Homeಸಿನಿಮಾಕ್ರೀಡೆಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

ಮುಂಬೈ ಇಂಡಿಯನ್ಸ್ ಸೋತರೂ RCB ಪ್ಲೇಆಫ್ ಪ್ರವೇಶ ಸಾಧ್ಯ: ಏನಿದು ಲೆಕ್ಕಾಚಾರ?

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 6 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಒಂದು ವೇಳೆ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 15 ಅಂಕ ಪಡೆದಿರುವ ಲಕ್ನೋ 3ನೇ ಸ್ಥಾನದಲ್ಲಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿದ್ದರೆ 12 ಅಂಕ ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ.

ಆರ್‌ಸಿಬಿ ಎರಡನೇ ಸ್ಥಾನಕ್ಕೂ ತಲುಪಬಹುದು!

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಲ್ಲಿ 16 ಗಳಿಸುತ್ತದೆ. ಅದೇ ರೀತಿ ಚನ್ನೈ ಮತ್ತು ಲಕ್ನೋ ತಂಡಗಳು ತಮ್ಮ ಕಡೆಯ ಪಂದ್ಯಗಳಲ್ಲಿ ಸೋತರೆ ಅವು 15 ಅಂಕಗಳಿಗೆ ಸೀಮತವಾಗುತ್ತವೆ. ಆಘ ಆರ್‌ಸಿಬಿ ತಂಡ ಎರಡನೇ ಸ್ಥಾನಕ್ಕೆ ಲಗ್ಗೆ ಇಡಬಹುದಾಗಿದೆ. ಆಗ ಅದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತರೂ ಫೈನಲ್ ತಲುಪಲು ಮತ್ತೊಂದು ಅವಕಾಶವಿರುತ್ತದೆ. ಆದರೆ 3ನೇ ಮತ್ತು 4ನೇ ಸ್ಥಾನ ಪಡೆದ ತಂಡಗಳಿಗೆ ಆ ಅವಕಾಶ ಇರುವುದಿಲ್ಲ. ಆ ತಂಡಗಳು ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ ಎರಡೂ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಬೇಕಿರುತ್ತದೆ.

ಈ ತಂಡಗಳಿಗೂ ಅವಕಾಶವಿದೆ

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಸೋತು ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮುಂಬೈ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. 15 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ಸಹ ಪ್ಲೇ ಆಫ್ ಪ್ರವೇಶಿಸುತ್ತವೆ. ಆಗ ಆರ್‌ಸಿಬಿ ಹೊರಬೀಳುತ್ತದೆ.

ಆರ್‌ಸಿಬಿ ಮತ್ತು ಮುಂಬೈ ತಂಡಗಳು ತನ್ನ ಕಡೆಯ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಸೋತರೆ ಎರಡೂ ಸಹ ಹೋರಬೀಳುತ್ತವೆ. ಆಗ 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ. ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭಾರೀ ವಿಜಯದಿಂದ ತನ್ನ ಕೊನೆಯ ಪಂದ್ಯ ಗೆದ್ದು 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ ರೇಟ್ ಪಡೆದು ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಿ ಪ್ಲೇ ಆಫ್ ಪ್ರವೇಶಿಸಲು ಯತ್ನಿಸುತ್ತಿದೆ. ಆದರೆ ಆ ಸಾಧ್ಯತೆ ತೀರಾ ಕಡಿಮೆ ಇದೆ. ಏಕೆಂದರೆ ಕೋಲ್ಕತ್ತ ತಂಡದ ನೆಟ್‌ ರನ್‌ ರೇಟ್ -0.256 ಇದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ₹ 2,000 ನೋಟುಗಳ ಹಿಂತೆಗೆತ: ಮೋದಿ ಸರ್ಕಾರದ ವೈಫಲ್ಯದ ವಿರುದ್ಧ ವಿಪಕ್ಷಗಳ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...