Homeಮುಖಪುಟಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಭಾರತದಲ್ಲಿಯೇ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅದರ ವಿರುದ್ಧ ಲಕ್ಷಾಂತರ ಜನ ಹೋರಾಡುತ್ತಿದ್ದಾರೆ. ಮುಂಬೈ ಮೇಯರ್‌ ಕಿಶೋರಿ ಪೆಡ್ನೆಕರ್ ಅಂತಹವರ ಸಾಲಿಗೆ ಹೊಸ ಸೇರ್ಪಡೆಯಾಗಿದ್ದಾರೆ.

ಕೊರೊನಾ ರಾಜ್ಯದಲ್ಲಿ ಅತಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಕೆಲವು ಡಾಕ್ಟರ್‌, ನರ್ಸ್ ಮತ್ತು ಪೊಲೀಸರು ಸಹ ಸೋಂಕಿಗೆ ಒಳಗಾಗಿದ್ದರು. ಹಲವರು ಕರ್ತವ್ಯಕ್ಕೆ ಹಾಜರಾಗಲು ಭಯಪಡುತ್ತಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿರುವವರಿಗೆ ಸ್ಫೂರ್ತಿ ತುಂಬಲು ಮೇಯರ್ ಪೆಡ್ನಕರ್‌ ಮಾಡಿದ್ದು ಇಷ್ಟೆ. ಹತಾಶೆ ಮತ್ತು ಅನಿಶ್ಚಿತತೆಯ ಸಮಯದಲ್ಲಿ, ಅವರು ತನ್ನ ಹಳೆಯ ನರ್ಸಿಂಗ್ ಸೂಟ್ ಅನ್ನು ಧರಿಸಿ ಆಸ್ಪತ್ರೆಗೆ ನಡೆದರು. ಅವರು ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ಸಿದ್ಧರಾದರು.

ಇದು ಉಳಿದ ನರ್ಸ್‌ ಮತ್ತು ವೈದ್ಯರುಗಳಿಗೆ ಪ್ರೇರಣೆ ನೀಡಿತು. ಅವರೆಲ್ಲರೂ ದೃಢವಾಗಿ ಕೆಲಸ ಮಾಡಲು ತೀರ್ಮಾನಿಸಿದರು. ಈ ಮಾದರಿ ಎಲ್ಲೆಡೆ ಹಬ್ಬಿತು.

ಇತ್ತೀಚೆಗೆ, ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಈ ಕಥೆಯನ್ನು ಇನ್‌ಸ್ಟಾಗ್ರಾಮ್ ಹಂಚಿಕೊಂಡರು. ಆ ಮೂಲಕ‌ ಅವರ ಕೆಲಸ ಮತ್ತು ಸಾರ್ವಜನಿಕ ಸೇವೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು. “ಇಂದು ನಾವು ನಮ್ಮ ಮುಂಚೂಣಿಯ ಯೋಧರು, ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಿರುದ್ಧ ಹೋರಾಡಲು ಹೇಗೆ ಸಹಾಯ ಮಾಡುತ್ತಿದ್ದಾರೆ ಎಂಬ ಕಥೆಗಳನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ಅದೇ ರೀತಿ ನಾಯರ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿರುವವರು ನಮ್ಮ ಮುಂಬೈನ ಮೇಯರ್‌ ಆಗಿದ್ದಾರೆ. ಅವರು ತಮ್ಮ ಹಳೆಯ ಉದ್ಯೋಗಕ್ಕೆ ಮರಳಿ ಈಗ ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಇಚ್ಛಾಶಕ್ತಿಯಿಂದ ಅಲ್ಲಿ ರಾತ್ರಿ ಪಾಳಿ ಕೆಲಸ ಮಾಡಲಿದ್ದಾರೆ” ಎಂದು ಬರೆದರು!

View this post on Instagram

Who said we are short of people to fight Covid? While every one of us, as citizens, is doing our bit fighting covid by staying indoors, this person here, is @kishoripednekar ji. Currently the Mayor of Mumbai, she had started off her career as a nurse. Today as we here stories of how our frontline warriors, the medical staff, are helping us fight covid, she has donned on her original job description to stand side by side with the medical staff at Nair Hospital, now a designated covid hospital and will do the night shift there! There’s no less of such heroes and no less of the fighting spirit! Just till 48 hours ago, she was in self quarantine, absolutely safe but as a precaution since she was visiting every single hot spot and covid clinic from morning to night. Now, as she will serve the city and it’s people as the Mayor during the day and her night shift as medical staff at Nair Hospital begins tonight. Let’s pray for the safety and success of these heroes and many more like her, who are helping us defeat the virus!

A post shared by Aaditya Thackeray (@adityathackeray) on

ಕೊರೊನಾ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ಯಾರು ಹೇಳಿದರು? ನಮ್ಮ ಮೇಯರ್‌ ಬೆಳಗ್ಗಿನಿಂದ ರಾತ್ರಿಯವರೆಗೂ ಎಲ್ಲಾ ಆಸ್ಪತ್ರೆಗಳಿಗೂ, ಹಾಟ್‌ಸ್ಪಾಟ್‌ಗಳಿಗೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ಇವರ ಸುರಕ್ಷೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದು ಆದಿತ್ಯ ಠಾಕ್ರೆ ಬರೆದುಕೊಂಡಿದ್ದಾರೆ.

“ನಮ್ಮ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದ್ದಾರೆ. ಅವರು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರನ್ನು ಪ್ರೇರೇಪಿಸಲು ನಾನು ಅವರೊಂದಿಗೆ ನಿಲ್ಲಲು ಬಯಸುತ್ತೇನೆ ”
– ಕಿಶೋರಿ ಪೆಡ್ನೇಕರ್

ವರದಿಗಳ ಪ್ರಕಾರ, ಮೇಯರ್ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಗೆ ಭೇಟಿ ನೀಡಿ ದಾದಿಯರೊಂದಿಗೆ ಸಂವಹನ ನಡೆಸಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು, ಕೆಚ್ಚೆದೆಯ ಹೋರಾಟವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು, ಉನ್ನತ ಸಾಧಕರಿಗೆ ಮೇಯರ್ ಕಪ್ ನೀಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....