Homeಮುಖಪುಟಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಭಾರತದಲ್ಲಿಯೇ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅದರ ವಿರುದ್ಧ ಲಕ್ಷಾಂತರ ಜನ ಹೋರಾಡುತ್ತಿದ್ದಾರೆ. ಮುಂಬೈ ಮೇಯರ್‌ ಕಿಶೋರಿ ಪೆಡ್ನೆಕರ್ ಅಂತಹವರ ಸಾಲಿಗೆ ಹೊಸ ಸೇರ್ಪಡೆಯಾಗಿದ್ದಾರೆ.

ಕೊರೊನಾ ರಾಜ್ಯದಲ್ಲಿ ಅತಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಕೆಲವು ಡಾಕ್ಟರ್‌, ನರ್ಸ್ ಮತ್ತು ಪೊಲೀಸರು ಸಹ ಸೋಂಕಿಗೆ ಒಳಗಾಗಿದ್ದರು. ಹಲವರು ಕರ್ತವ್ಯಕ್ಕೆ ಹಾಜರಾಗಲು ಭಯಪಡುತ್ತಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿರುವವರಿಗೆ ಸ್ಫೂರ್ತಿ ತುಂಬಲು ಮೇಯರ್ ಪೆಡ್ನಕರ್‌ ಮಾಡಿದ್ದು ಇಷ್ಟೆ. ಹತಾಶೆ ಮತ್ತು ಅನಿಶ್ಚಿತತೆಯ ಸಮಯದಲ್ಲಿ, ಅವರು ತನ್ನ ಹಳೆಯ ನರ್ಸಿಂಗ್ ಸೂಟ್ ಅನ್ನು ಧರಿಸಿ ಆಸ್ಪತ್ರೆಗೆ ನಡೆದರು. ಅವರು ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ಸಿದ್ಧರಾದರು.

ಇದು ಉಳಿದ ನರ್ಸ್‌ ಮತ್ತು ವೈದ್ಯರುಗಳಿಗೆ ಪ್ರೇರಣೆ ನೀಡಿತು. ಅವರೆಲ್ಲರೂ ದೃಢವಾಗಿ ಕೆಲಸ ಮಾಡಲು ತೀರ್ಮಾನಿಸಿದರು. ಈ ಮಾದರಿ ಎಲ್ಲೆಡೆ ಹಬ್ಬಿತು.

ಇತ್ತೀಚೆಗೆ, ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಈ ಕಥೆಯನ್ನು ಇನ್‌ಸ್ಟಾಗ್ರಾಮ್ ಹಂಚಿಕೊಂಡರು. ಆ ಮೂಲಕ‌ ಅವರ ಕೆಲಸ ಮತ್ತು ಸಾರ್ವಜನಿಕ ಸೇವೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು. “ಇಂದು ನಾವು ನಮ್ಮ ಮುಂಚೂಣಿಯ ಯೋಧರು, ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಿರುದ್ಧ ಹೋರಾಡಲು ಹೇಗೆ ಸಹಾಯ ಮಾಡುತ್ತಿದ್ದಾರೆ ಎಂಬ ಕಥೆಗಳನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ಅದೇ ರೀತಿ ನಾಯರ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿರುವವರು ನಮ್ಮ ಮುಂಬೈನ ಮೇಯರ್‌ ಆಗಿದ್ದಾರೆ. ಅವರು ತಮ್ಮ ಹಳೆಯ ಉದ್ಯೋಗಕ್ಕೆ ಮರಳಿ ಈಗ ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಇಚ್ಛಾಶಕ್ತಿಯಿಂದ ಅಲ್ಲಿ ರಾತ್ರಿ ಪಾಳಿ ಕೆಲಸ ಮಾಡಲಿದ್ದಾರೆ” ಎಂದು ಬರೆದರು!

View this post on Instagram

Who said we are short of people to fight Covid? While every one of us, as citizens, is doing our bit fighting covid by staying indoors, this person here, is @kishoripednekar ji. Currently the Mayor of Mumbai, she had started off her career as a nurse. Today as we here stories of how our frontline warriors, the medical staff, are helping us fight covid, she has donned on her original job description to stand side by side with the medical staff at Nair Hospital, now a designated covid hospital and will do the night shift there! There’s no less of such heroes and no less of the fighting spirit! Just till 48 hours ago, she was in self quarantine, absolutely safe but as a precaution since she was visiting every single hot spot and covid clinic from morning to night. Now, as she will serve the city and it’s people as the Mayor during the day and her night shift as medical staff at Nair Hospital begins tonight. Let’s pray for the safety and success of these heroes and many more like her, who are helping us defeat the virus!

A post shared by Aaditya Thackeray (@adityathackeray) on

ಕೊರೊನಾ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ಯಾರು ಹೇಳಿದರು? ನಮ್ಮ ಮೇಯರ್‌ ಬೆಳಗ್ಗಿನಿಂದ ರಾತ್ರಿಯವರೆಗೂ ಎಲ್ಲಾ ಆಸ್ಪತ್ರೆಗಳಿಗೂ, ಹಾಟ್‌ಸ್ಪಾಟ್‌ಗಳಿಗೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ಇವರ ಸುರಕ್ಷೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದು ಆದಿತ್ಯ ಠಾಕ್ರೆ ಬರೆದುಕೊಂಡಿದ್ದಾರೆ.

“ನಮ್ಮ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದ್ದಾರೆ. ಅವರು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರನ್ನು ಪ್ರೇರೇಪಿಸಲು ನಾನು ಅವರೊಂದಿಗೆ ನಿಲ್ಲಲು ಬಯಸುತ್ತೇನೆ ”
– ಕಿಶೋರಿ ಪೆಡ್ನೇಕರ್

ವರದಿಗಳ ಪ್ರಕಾರ, ಮೇಯರ್ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಗೆ ಭೇಟಿ ನೀಡಿ ದಾದಿಯರೊಂದಿಗೆ ಸಂವಹನ ನಡೆಸಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು, ಕೆಚ್ಚೆದೆಯ ಹೋರಾಟವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು, ಉನ್ನತ ಸಾಧಕರಿಗೆ ಮೇಯರ್ ಕಪ್ ನೀಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....