Homeಮುಖಪುಟಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ - ಸಂಜಯ್ ರಾವತ್

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ – ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಿಂದ ಹೊರಬರದೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಸುಳಿವು ನೀಡಿದ್ದಾರೆ. ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಮುಂಬೈ ಪಾಲಿಕೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜತ್ ರಾವತ್, “ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ಪಕ್ಷದ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಬಿಎಂಸಿ ಚುನಾವಣೆಗೆ ಉದ್ಧವ್ ಠಾಕ್ರೆ ಮತ್ತು ಇತರ ಪಕ್ಷದ ನಾಯಕರ ನಡುವೆ (ಏಕಾಂಗಿಗೆ ಸ್ಪರ್ಧಿಸಬೇಕೆ ಎಂಬುದರ ಕುರಿತು) ಮಾತುಕತೆ ನಡೆಯುತ್ತಿದೆ. ಕಾರ್ಯಕರ್ತರು ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವಂತೆ ಬಯಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಬಿಎಂಸಿಯ ಹಿಂದಿನ ಚುನಾಯಿತ ಪ್ರತಿನಿಧಿಗಳ ಅವಧಿಯು ಮಾರ್ಚ್ 2022 ರ ಆರಂಭದಲ್ಲಿ ಕೊನೆಗೊಂಡಿದೆ. ಸುಮಾರು ಮೂರು ವರ್ಷಗಳವರೆಗೆ ಅಲ್ಲಿ ಚುನಾವಣೆಗಳು ನಡೆದಿಲ್ಲ. ಮುಂಬೈ ಪಾಲಿಕೆ

“ಬಿಜೆಪಿಯೊಂದಿಗೆ ಅವಿಭಜಿತ ಶಿವಸೇನೆ ಮೈತ್ರಿಯಲ್ಲಿದ್ದಾಗ ಕೂಡಾ ನಾವು ಬಿಎಂಸಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ.” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನಲ್ಲಿ ಪಕ್ಷದ ಶಕ್ತಿ ಬಲಷ್ಠವಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದಾರೆ. “ನಮಗೆ ಮುಂಬೈನಲ್ಲಿ ಸ್ಪರ್ಧಿಸಲು ಹೆಚ್ಚಿನ ಸ್ಥಾನಗಳು ಬಂದಿದ್ದರೆ (ವಿಧಾನಸಭಾ ಚುನಾವಣೆಯ ಸಮಯದಲ್ಲಿ) ಮೈತ್ರಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿತ್ತು” ಎಂದು ಅವರು ಹೇಳಿದ್ದಾರೆ. ಮುಂಬೈಯನ್ನು ಗೆಲ್ಲುವುದು ಅಗತ್ಯವಾಗಿದ್ದು, ಇಲ್ಲದಿದ್ದರೆ ನಗರವನ್ನು ಮಹಾರಾಷ್ಟ್ರದಿಂದ ಬೇರ್ಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಮುಂಬೈನಲ್ಲಿ ಶಿವಸೇನೆ 24 ಸ್ಥಾನಗಳಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 10 ಸ್ಥಾನಗಳಿಗೆ ಅಭ್ಯರ್ಥಿಗಳಲ್ಲಿ ಸ್ಪರ್ಧಿಸಿ 4 ಸ್ಥಾನಗಳನ್ನು ಗೆದ್ದುಕೊಂಡಿತ್ತು ಹಾಗೂ NCP (SP) ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ ಸ್ಥಾನಗೆಲ್ಲಲು ವಿಫಲವಾಗಿದೆ.

ಕಳೆದ ವಾರ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಡಳಿತಾರೂಢ ಮಹಾಯುತಿಯ ಭಾಗವಾಗಿ ಮುಂದಿನ ವರ್ಷ ನಡೆಯಲಿರುವ ಬಿಎಂಸಿ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಹೇಳಿದ್ದರು. “ಬಿಎಂಸಿ ಚುನಾವಣೆಯಲ್ಲಿ ಎಲ್ಲಾ 227 ವಾರ್ಡ್‌ಗಳಲ್ಲಿ ಮಹಾಯುತಿ (ಮೈತ್ರಿಕೂಟ) ಆಗಿ ಸ್ಪರ್ಧಿಸಲಾಗುವುದು” ಎಂದು ಶಿವಸೇನೆಯ ಮುಖ್ಯಸ್ಥ ಶಿಂಧೆ ಹೇಳಿದ್ದಾರೆ. ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಮಹಾಯುತಿ ಮೈತ್ರಿಕೂಟದ ಭಾಗವಾಗಿದೆ.

ಇದನ್ನೂ ಓದಿ: ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...