Homeಮುಖಪುಟಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ - ಸಂಜಯ್ ರಾವತ್

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಏಕಾಂಗಿ ಸ್ಪರ್ಧೆ – ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ವಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಿಂದ ಹೊರಬರದೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಸುಳಿವು ನೀಡಿದ್ದಾರೆ. ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಮುಂಬೈ ಪಾಲಿಕೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜತ್ ರಾವತ್, “ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ಪಕ್ಷದ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂಬುವುದು ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಬಿಎಂಸಿ ಚುನಾವಣೆಗೆ ಉದ್ಧವ್ ಠಾಕ್ರೆ ಮತ್ತು ಇತರ ಪಕ್ಷದ ನಾಯಕರ ನಡುವೆ (ಏಕಾಂಗಿಗೆ ಸ್ಪರ್ಧಿಸಬೇಕೆ ಎಂಬುದರ ಕುರಿತು) ಮಾತುಕತೆ ನಡೆಯುತ್ತಿದೆ. ಕಾರ್ಯಕರ್ತರು ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವಂತೆ ಬಯಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಪದ್ಭರಿತ ಬಿಎಂಸಿಯನ್ನು ಅವಿಭಜಿತ ಶಿವಸೇನೆಯು 1997 ರಿಂದ 2022 ರವರೆಗೆ ಸತತ 25 ವರ್ಷಗಳ ಕಾಲ ಆಡಳಿತ ನಡೆಸಿದೆ. ಬಿಎಂಸಿಯ ಹಿಂದಿನ ಚುನಾಯಿತ ಪ್ರತಿನಿಧಿಗಳ ಅವಧಿಯು ಮಾರ್ಚ್ 2022 ರ ಆರಂಭದಲ್ಲಿ ಕೊನೆಗೊಂಡಿದೆ. ಸುಮಾರು ಮೂರು ವರ್ಷಗಳವರೆಗೆ ಅಲ್ಲಿ ಚುನಾವಣೆಗಳು ನಡೆದಿಲ್ಲ. ಮುಂಬೈ ಪಾಲಿಕೆ

“ಬಿಜೆಪಿಯೊಂದಿಗೆ ಅವಿಭಜಿತ ಶಿವಸೇನೆ ಮೈತ್ರಿಯಲ್ಲಿದ್ದಾಗ ಕೂಡಾ ನಾವು ಬಿಎಂಸಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ.” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನಲ್ಲಿ ಪಕ್ಷದ ಶಕ್ತಿ ಬಲಷ್ಠವಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದಾರೆ. “ನಮಗೆ ಮುಂಬೈನಲ್ಲಿ ಸ್ಪರ್ಧಿಸಲು ಹೆಚ್ಚಿನ ಸ್ಥಾನಗಳು ಬಂದಿದ್ದರೆ (ವಿಧಾನಸಭಾ ಚುನಾವಣೆಯ ಸಮಯದಲ್ಲಿ) ಮೈತ್ರಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿತ್ತು” ಎಂದು ಅವರು ಹೇಳಿದ್ದಾರೆ. ಮುಂಬೈಯನ್ನು ಗೆಲ್ಲುವುದು ಅಗತ್ಯವಾಗಿದ್ದು, ಇಲ್ಲದಿದ್ದರೆ ನಗರವನ್ನು ಮಹಾರಾಷ್ಟ್ರದಿಂದ ಬೇರ್ಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಮುಂಬೈನಲ್ಲಿ ಶಿವಸೇನೆ 24 ಸ್ಥಾನಗಳಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 10 ಸ್ಥಾನಗಳಿಗೆ ಅಭ್ಯರ್ಥಿಗಳಲ್ಲಿ ಸ್ಪರ್ಧಿಸಿ 4 ಸ್ಥಾನಗಳನ್ನು ಗೆದ್ದುಕೊಂಡಿತ್ತು ಹಾಗೂ NCP (SP) ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ ಸ್ಥಾನಗೆಲ್ಲಲು ವಿಫಲವಾಗಿದೆ.

ಕಳೆದ ವಾರ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆಡಳಿತಾರೂಢ ಮಹಾಯುತಿಯ ಭಾಗವಾಗಿ ಮುಂದಿನ ವರ್ಷ ನಡೆಯಲಿರುವ ಬಿಎಂಸಿ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ ಎಂದು ಹೇಳಿದ್ದರು. “ಬಿಎಂಸಿ ಚುನಾವಣೆಯಲ್ಲಿ ಎಲ್ಲಾ 227 ವಾರ್ಡ್‌ಗಳಲ್ಲಿ ಮಹಾಯುತಿ (ಮೈತ್ರಿಕೂಟ) ಆಗಿ ಸ್ಪರ್ಧಿಸಲಾಗುವುದು” ಎಂದು ಶಿವಸೇನೆಯ ಮುಖ್ಯಸ್ಥ ಶಿಂಧೆ ಹೇಳಿದ್ದಾರೆ. ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಮಹಾಯುತಿ ಮೈತ್ರಿಕೂಟದ ಭಾಗವಾಗಿದೆ.

ಇದನ್ನೂ ಓದಿ: ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ಎಂಬಿಬಿಎಸ್ ಟ್ರೈನಿಗಳಿಗೆ ಲೈಂಗಿಕ ಕಿರುಕುಳ: ವೈದ್ಯಕೀಯ ಕಾಲೇಜು ಪ್ರಾಧ್ಯಾಪಕನಿಗೆ ಮೂರು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...