Homeಮುಖಪುಟಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -
- Advertisement -

ಕೋಮು ದ್ವೇಷ ಪ್ರಚೋದನಾಕಾರಿ ಸುದ್ದಿ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್‌ ಟಿ.ವಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಅರ್ನಾಬ್‌ ಗೋಸ್ವಾಮಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್‌ ವಿರುದ್ಧ ಪ್ಯಾಡೋನಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಐಪಿಸಿ 153, 153ಎ, 295ಎ, 500, 505(2), 501(1)(ಬಿ)(ಸಿ), 511, 120(ಬಿ) ಸೆಕ್ಷನ್‌ಗಳ ಕುರಿತು ಹೆಚ್ಚಿನ ವಿಚಾರಣೆಗಾಗಿ ತನಿಖಾಧಿಕಾರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಗಾಯಕ್‌ವಾಡ್‌ರವರ ಎದುರು ಜೂನ್‌ 10ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಮೊದಲು ಪಾಲ್ಘಾರ್‌ ಲಿಂಚಿಂಗ್‌ ಪ್ರಕರಣದಲ್ಲಿ ಪ್ರಚೋದನಾಕಾರಿ ಸುದ್ದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಅರ್ನಾಬ್‌ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗಿದ್ದವು.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

14 ಪುಟಗಳ ದೂರಿನಲ್ಲಿ ಪಾಲ್ಗರ್ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೈಮ್‌ಟೈಮ್ ಶೋನಲ್ಲಿ ಗೋಸ್ವಾಮಿ ಸೋನಿಯಾ ಗಾಂಧಿ ಮೇಲೆ ಆಧಾರ ರಹಿತ ಆರೋಪ ಹೊರಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...