Homeಮುಖಪುಟಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -
- Advertisement -

ಕೋಮು ದ್ವೇಷ ಪ್ರಚೋದನಾಕಾರಿ ಸುದ್ದಿ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್‌ ಟಿ.ವಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಅರ್ನಾಬ್‌ ಗೋಸ್ವಾಮಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್‌ ವಿರುದ್ಧ ಪ್ಯಾಡೋನಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಐಪಿಸಿ 153, 153ಎ, 295ಎ, 500, 505(2), 501(1)(ಬಿ)(ಸಿ), 511, 120(ಬಿ) ಸೆಕ್ಷನ್‌ಗಳ ಕುರಿತು ಹೆಚ್ಚಿನ ವಿಚಾರಣೆಗಾಗಿ ತನಿಖಾಧಿಕಾರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಗಾಯಕ್‌ವಾಡ್‌ರವರ ಎದುರು ಜೂನ್‌ 10ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಮೊದಲು ಪಾಲ್ಘಾರ್‌ ಲಿಂಚಿಂಗ್‌ ಪ್ರಕರಣದಲ್ಲಿ ಪ್ರಚೋದನಾಕಾರಿ ಸುದ್ದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಅರ್ನಾಬ್‌ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗಿದ್ದವು.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

14 ಪುಟಗಳ ದೂರಿನಲ್ಲಿ ಪಾಲ್ಗರ್ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೈಮ್‌ಟೈಮ್ ಶೋನಲ್ಲಿ ಗೋಸ್ವಾಮಿ ಸೋನಿಯಾ ಗಾಂಧಿ ಮೇಲೆ ಆಧಾರ ರಹಿತ ಆರೋಪ ಹೊರಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...