Homeಮುಖಪುಟಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

- Advertisement -
- Advertisement -

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ ಕಾರ್ಯಕರ್ತರಿಂದ ಟೀಕೆಗೆ ಗುರಿಯಾದ ನಂತರ ಮುಂಬೈ ಪೊಲೀಸರು ಅವರಿಗೆ ಕಾನೂನು ನೋಟಿಸ್ ಜಾರಿ ಮಾಡಿರುವುದಾಗಿ ಮಕ್ತೂಬ್ ಮೀಡಿಯಾ ವರದಿ ಮಾಡಿದೆ. 

ಜನವರಿ 3 ರಂದು ಗೋವಂಡಿಯ ಭುಜಬಲವಾಡಿಯಲ್ಲಿ ನಡೆದ ಪ್ರಚಾರ ರ್ಯಾಲಿಯ ನಂತರ ನೋಟಿಸ್ ನೀಡಲಾಗಿದೆ ಎಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 140 ರ ಆರ್‌ಡಬ್ಲ್ಯೂಪಿಐ ಅಭ್ಯರ್ಥಿ ಪ್ರದ್ನ್ಯಾ ಪ್ರಭುಲ್ಕರ್ ಹೇಳಿದ್ದಾರೆ.

ಪ್ರಭುಲ್ಕರ್ ಅವರ ಪ್ರಕಾರ, ರ್ಯಾಲಿಯ ಸಮಯದಲ್ಲಿ ಅವರೊಂದಿಗೆ ಬಂದ ಮಹಿಳೆಯರಲ್ಲಿ ಒಬ್ಬರು ಪ್ಯಾಲೇಸ್ಟಿನಿಯನ್ ಧ್ವಜದ ಕಲಾಕೃತಿಯನ್ನು ಹೊಂದಿರುವ ಚೀಲವನ್ನು ಹೊತ್ತಿದ್ದರು, ಅದನ್ನು ಆ ಮಹಿಳೆ ನಿಯಮಿತವಾಗಿ ಬಳಸುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಈ ಬ್ಯಾಗ್ ಬಳಸುವುದು “ಕಾನೂನುಬಾಹಿರ” ಎಂದು ಕರೆದರು ಮತ್ತು ಇದು ಸಾರ್ವಜನಿಕ ಶಾಂತಿಗೆ ಭಂಗ ತರಬಹುದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದ ಜೊತೆ ಮಾತನಾಡಿರುವ ಪ್ರಭುಲ್ಕರ್, ಸ್ಥಳೀಯ ಪೊಲೀಸ್ ಅಧಿಕಾರಿಗಳು ರ್ಯಾಲಿಯ ಛಾಯಾಚಿತ್ರ ತೆಗೆದರು, ಆರಂಭದಲ್ಲಿ ಪ್ರಚಾರ ಸದಸ್ಯರಿಗೆ ಚಿತ್ರಗಳನ್ನು ನಿಯಮಿತ ದಾಖಲೆಗಳಿಗಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. ರ್ಯಾಲಿ ಮುಗಿದ ನಂತರ, ದಿಯೋನಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಯಾದವ್ ಅವರನ್ನು ಠಾಣೆಗೆ ಕರೆಸಿ, ಒಂದು ಪ್ರಮುಖ ವಿಷಯವನ್ನು ಚರ್ಚಿಸಬೇಕಾಗಿದೆ ಎಂದು ಹೇಳಿದರು.

ಠಾಣೆಯಲ್ಲಿ, ಪೊಲೀಸರು ಪ್ರಭುಲ್ಕರ್ ಅವರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ಸೆಕ್ಷನ್ 168 ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅವರು ಹೇಳಿದರು. 

ಅಭಿಯಾನವು ಸುಗಮವಾಗಿ ನಡೆಯುತ್ತಿರುವಾಗ, ಬ್ಯಾಗ್‌ನಲ್ಲಿರುವ ಪ್ಯಾಲೇಸ್ಟಿನಿಯನ್ ಧ್ವಜವನ್ನು ಉಲ್ಲೇಖಿಸಿ “ಕಾನೂನುಬಾಹಿರ ಚಟುವಟಿಕೆ”ಯನ್ನು ಗಮನಿಸಿದ್ದೇವೆ ಎಂದು ಅಧಿಕಾರಿಗಳು ಅವರಿಗೆ ತಿಳಿಸಿದರು, ಇದು ಪ್ರದೇಶದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಅವರು ಹೇಳಿಕೊಂಡರು.

ಇದೇ ರೀತಿಯ ಘಟನೆ ಮತ್ತೆ ಸಂಭವಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ ಎಂದು ಪ್ರಭುಲ್ಕರ್ ಹೇಳಿದರು.

ಇಂತಹ ಕ್ರಮಗಳು ಮುಂಬೈನಲ್ಲಿ ಪ್ಯಾಲೆಸ್ಟೀನಿಯನ್ ಪರ ಕಾರ್ಯಕರ್ತರ ಮೇಲಿನ ಕಿರುಕುಳ ಎಂದು ಅವರು ವಿವರಿಸಿದ ವಿಶಾಲ ಮಾದರಿಯ ಭಾಗವಾಗಿದೆ ಎಂದು ಅವರು ಹೇಳಿದರು. “ಈ ರೀತಿಯ ದಬ್ಬಾಳಿಕೆಯ ಕ್ರಮ ಹೊಸದಲ್ಲ” ಎಂದು ಹೇಳಿದ ಅವರು “ಇದು ತುಂಬಾ ನಾಚಿಕೆಗೇಡಿನ ಸಂಗತಿ” ಎಂದಿದ್ದು, ನಮ್ಮ ಕಾರ್ಯಕರ್ತರು ನೋಟಿಸ್ ಅನ್ನು ಖಂಡಿಸುತ್ತಾರೆ ಎಂದಿದ್ದಾರೆ. 

ಇನ್ನು ಮುಂಬೈನ ಹಲವಾರು ಪ್ಯಾಲೆಸ್ಟೈನ್ ಪರ ಕಾರ್ಯಕರ್ತರು ಪೊಲೀಸ್ ಕ್ರಮವನ್ನು ಖಂಡಿಸಿದ್ದು, ಬಾಯ್ಕಾಟ್, ಡಿವೆಸ್ಟ್‌ಮೆಂಟ್ ಮತ್ತು ನಿರ್ಬಂಧಗಳ ಆಂದೋಲನ ಮತ್ತು ಪ್ಯಾಲೆಸ್ಟೈನ್‌ನೊಂದಿಗೆ ಒಗ್ಗಟ್ಟಿನಲ್ಲಿರುವ ಭಾರತೀಯ ಜನರ ಕಾರ್ಯಕರ್ತೆ ಡಾ. ಪೂಜಾ ವೃಶಾಲಿ, ಪ್ಯಾಲೆಸ್ಟೈನ್‌ನೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವುದನ್ನು ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಹೇಗೆ ಪರಿಗಣಿಸಬಹುದು ಎಂದು ಪ್ರಶ್ನಿಸಿದ್ದಾರೆ. 

ಇತ್ತೀಚೆಗೆ ಗೋವಂಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ನಾಯಕಿ ಕಿರೀಟ್ ಸೋಮಯ್ಯ ಮಾಡಿದ ಪ್ರಚೋದನಕಾರಿ ಭಾಷಣಗಳ ಬಗ್ಗೆ ನಿಷ್ಕ್ರಿಯತೆ ತೋರಿರುವ ಪೊಲೀಸರು ಇಂಥ ವಿಚಾರದಲ್ಲಿ ಕಾರ್ಯಪ್ರವೃತ್ತರಾಗುವ ಬಗ್ಗೆ ಟೀಕಿಸಿದರು. 

ಪ್ರಚೋದನಾಕಾರಿ ಭಾಷಣಗಳನ್ನು ಮಾಡುವ ಪ್ರಕರಣಗಳಲ್ಲಿ ಪೊಲೀಸರು ಏಕೆ ಕ್ರಮ ಕೈಗೊಳ್ಳುವುದಿಲ್ಲ?” ಎಂದು ಅವರು ಕೇಳಿದರು.

ಈ ನೋಟಿಸ್ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ವೃಶಾಲಿ ಆರೋಪಿಸಿದ್ದಾರೆ ಮತ್ತು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಇಸ್ರೇಲ್ ಜೊತೆಗಿನ ಪಾಲುದಾರಿಕೆಯು ಪೊಲೀಸ್ ಕ್ರಮದ ಮೇಲೆ ಪ್ರಭಾವ ಬೀರಿರಬಹುದು ಎಂದು ಹೇಳಿದ್ದಾರೆ. ಪೊಲೀಸರು ಸರ್ಕಾರದ ಒತ್ತಡದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಇಂಡಿಯಾ ಪ್ಯಾಲೆಸ್ಟೈನ್ ಸಾಲಿಡಾರಿಟಿ ಫೋರಂನ ಫಿರೋಜ್ ಮಿಥಿಬೋರ್ವಾಲಾ ಕೂಡ ಈ ಸೂಚನೆಯನ್ನು ಖಂಡಿಸಿ, ಇದು ದ್ವಂದ್ವ ನೀತಿಯ ಉದಾಹರಣೆ ಎಂದು ಕರೆದಿದ್ದಾರೆ. ಪ್ಯಾಲೆಸ್ಟೈನ್‌ಗೆ ಅಧಿಕೃತವಾಗಿ ಬೆಂಬಲ ವ್ಯಕ್ತಪಡಿಸುವ ಸರ್ಕಾರಗಳು ಪ್ಯಾಲೆಸ್ಟೈನ್ ಉದ್ದೇಶದೊಂದಿಗೆ ಒಗ್ಗಟ್ಟನ್ನು ತೋರಿಸುವ ನಾಗರಿಕರನ್ನು ಹೆಚ್ಚಾಗಿ ಹತ್ತಿಕ್ಕುತ್ತವೆ ಎಂದು ಅವರು ಹೇಳಿದರು.

ಇದೇ ವೇಳೆ “ಇದು ನಮ್ಮ ವಿದೇಶಾಂಗ ನೀತಿಯ ದೌರ್ಬಲ್ಯವನ್ನು ಬಹಿರಂಗಪಡಿಸುತ್ತದೆ” ಎಂದರು. ಮುಂಬೈನ ಫ್ರೆಂಡ್ಸ್ ಆಫ್ ಪ್ಯಾಲೆಸ್ಟೈನ್‌ನ ಕಾರ್ಯಕರ್ತೆ ಡಾ. ಕಾಶಿಫ್ ಈ ಘಟನೆಯನ್ನು “ಖಂಡನೀಯ” ಎಂದು ಬಣ್ಣಿಸಿದ್ದಾರೆ, ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ರಕ್ಷಣೆಗಳನ್ನು ಉಲ್ಲಂಘಿಸುತ್ತದೆ ಮತ್ತು ಪೊಲೀಸ್ ವ್ಯವಸ್ಥೆಯೊಳಗಿನ ಪಕ್ಷಪಾತವನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. 

ಚುನಾವಣಾ ಪ್ರಚಾರದ ಸಮಯದಲ್ಲಿ ಎತ್ತಲಾದ ರಾಜಕೀಯ ವಿಷಯಗಳಿಗೆ ಆಕ್ಷೇಪಿಸಲು ಪೊಲೀಸರಿಗೆ ಯಾವುದೇ ಕಾನೂನು ಅಧಿಕಾರವಿಲ್ಲ ಎಂದು ಪ್ರಭುಲ್ಕರ್ ಹೇಳಿದ್ದು, ಪ್ಯಾಲೆಸ್ಟೈನ್‌ಗೆ ಬೆಂಬಲವು ಧಾರ್ಮಿಕ ವಿಷಯವಲ್ಲ ಆದರೆ ರಾಷ್ಟ್ರೀಯ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು.

ಜೊತೆಗೆ ನಾನು ಪ್ಯಾಲಸ್ಟೈನ್ ಗೆ ಬೆಂಬಲಿಸುವುದನ್ನು ಮುಂದುವರೆಸುತ್ತೇವೆ ಎಂದು ಸಹ ಹೇಳಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆಗಾಗಿ ಮಾಧ್ಯಮಗಳು ದಿಯೋನಾರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಪಾಂಡುರಂಗ್ ಯಾದವ್ ಅವರನ್ನು ಸಂಪರ್ಕಿಸಲು ಪದೇ ಪದೇ ಪ್ರಯತ್ನಿಸಿದರೂ ವಿಫಲವಾಯಿತು. ಬ್ಯಾಗಿನ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜವನ್ನು ಪ್ರದರ್ಶಿಸುವುದನ್ನು ಕಾನೂನುಬಾಹಿರ ಎಂದು ವಿವರಿಸಲು ಕಾನೂನು ಆಧಾರಗಳ ಕುರಿತಾದ ಪ್ರಶ್ನೆಗಳಿಗೆ ಪೊಲೀಸರು ಪ್ರತಿಕ್ರಿಯಿಸಲಿಲ್ಲ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...