Homeಮುಖಪುಟನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

ನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

- Advertisement -
- Advertisement -

ಮುಂಬೈ ಪೊಲೀಸರು ನಿನ್ನೆ ನಿಧನರಾದ ನಟ ಇರ್ಫಾನ್ ಖಾನ್ ಅವರಿಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಪರೂಪದ ಕ್ಯಾನ್ಸರ್‌ನೊಂದಿಗೆ ಎರಡು ವರ್ಷಗಳ ಹೋರಾಟದ ನಂತರ ಅವರು ನಿನ್ನೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಮುಂಬೈ ಪೊಲೀಸರು ನಟನನ್ನು ಸ್ಮರಿಸಲು ಸೃಜನಶೀಲ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇಂದು ಮುಂಜಾನೆ ಮುಂಬೈ ಪೊಲೀಸರು ಟ್ವಿಟ್ಟರ್‌ನಲ್ಲಿ ನಟನಿಗೆ ಗೌರವ ಸಲ್ಲಿಸುವುದರ ಜೊತೆಗೆ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇರಲು ಸಂದೇಶವನ್ನು ರವಾನಿಸಿದ್ದಾರೆ.

“ನಮ್ಮ ನೆನಪುಗಳಲ್ಲಿ ನೀವು ಜೀವಂತವಾಗಿರಲು ಜಗತ್ತಿಗೆ ಹಲವು ಮಾರ್ಗಗಳನ್ನು ಮತ್ತು ಸಾಧನಗಳನ್ನು ನೀಡಿದ್ದೀರಿ!” ಎಂದ ಮುಂಬೈ ಪೊಲೀಸ್ ತನ್ನ ಟ್ವೀಟ್ ಹೇಳಿ, ಅದನ್ನು #RememberingIrrfan #StayHome #StaySafe #TributeToTheLegend #RIPIrrfanKhan ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಪೋಸ್ಟ್ ಮಾಡಲಾಗಿದೆ.

ಟ್ವೀಟ್‌ನಲ್ಲಿ ಇರ್ಫಾನ್ ಖಾನ್ ಅವರ ಎರಡು ಚಿತ್ರಗಳಿದ್ದು, ಅದರಲ್ಲಿ ಇರ್ಫಾನ್ ಖಾನ್ ‘ಲಾಕ್‌ಡೌನ್ ಸಮಯದಲ್ಲಿ ಸುಳ್ಳು’ ಎಂಬ ಸಂದೇಶಕ್ಕೆ ಬೇಡ ಎಂಬಂತೆ ಸೂಚಿಸುತ್ತಾರೆ, ಮತ್ತೊಂದು ಚಿತ್ರದಲ್ಲಿ ‘ಇರ್ಫಾನ್ ಖಾನ್ ಮೂವಿ ಮ್ಯಾರಥಾನ್ ಮನೆಯಲ್ಲೇ’ ಎಂಬ ಸಂದೇಶವನ್ನು ನೋಡಿ ನಗುತ್ತಾರೆ.


ಇದನ್ನೂ ಓದಿ: ಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ


ಭಾರತದ ಅತ್ಯುತ್ತಮ ಮತ್ತು ಬಹುಮುಖ ಪ್ರತಿಭೆಯ ನಟರಲ್ಲಿ ಒಬ್ಬರಾದ ಖಾನ್ ಅವರ ಪತ್ನಿ ಸುತಪಾ ಮತ್ತು ಅವರ ಪುತ್ರರಾದ ಬಾಬಿಲ್ ಮತ್ತು ಅಯಾನ್ ಅವರನ್ನು ಅಗಲಿದ್ದಾರೆ.

ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದ ನಟನನ್ನು ಅವರ ಕುಟುಂಬ ಹಾಗೂ ಸ್ನೇಹಿತರಾದ ನಿರ್ದೇಶಕ ಟಿಗ್ಮಂಶು ಧುಲಿಯಾ ಮತ್ತು ವಿಶಾಲ್ ಭರದ್ವಾಜ್ ಅವರ ಸಮ್ಮುಖದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ವರ್ಸೋವಾ ಸ್ಮಶಾನದಲ್ಲಿ ಸಮಾಧಿ ಮಾಡಲಾಯಿತು.

ಇವರಿಗೆ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತಯಾಗಿತ್ತು. ರಾಜಕಾರಣಿಗಳು, ಕ್ರೀಡಾ ತಾರೆಗಳು, ಪೌರಕಾರ್ಮಿಕರು ಮತ್ತು ಅವರ ಸಹೋದ್ಯೋಗಿಗಳು ಮತ್ತು ಭಾರತ ಮತ್ತು ವಿದೇಶಗಳಲ್ಲಿ ಅನೇಕ ಅಭಿಮಾನಿಗಳು ಸೇರಿದಂತೆ ಎಲ್ಲಾ ಭಾಗಗಳಿಂದಲೂ ಇರ್ಫಾನ್ ಖಾನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ನಟ “ಅಪರೂಪದ ಪ್ರತಿಭೆ” ಮತ್ತು ಅವರ ಪಾತ್ರಗಳನ್ನು ಯಾವಾಗಲೂ ಪ್ರೇಕ್ಷಕರು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿವಿಧ ಮಾಧ್ಯಮಗಳಲ್ಲಿ ಇರ್ಫಾನ್ ಖಾನ್ ಅವರ ಬಹುಮುಖ ಪ್ರತಿಭೆಗಾಗಿ ಸ್ಮರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರಲ್ಲದೆ, ಅವರ ನಿಧನವು ಸಿನಿಮಾ ಮತ್ತು ರಂಗಭೂಮಿ ಜಗತ್ತಿಗೆ ನಷ್ಟವಾಗಿದೆ ಎಂದು  ಟ್ವಿಟರ್‌ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...