Homeಮುಖಪುಟನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

ನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

- Advertisement -
- Advertisement -

ಮುಂಬೈ ಪೊಲೀಸರು ನಿನ್ನೆ ನಿಧನರಾದ ನಟ ಇರ್ಫಾನ್ ಖಾನ್ ಅವರಿಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಪರೂಪದ ಕ್ಯಾನ್ಸರ್‌ನೊಂದಿಗೆ ಎರಡು ವರ್ಷಗಳ ಹೋರಾಟದ ನಂತರ ಅವರು ನಿನ್ನೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಮುಂಬೈ ಪೊಲೀಸರು ನಟನನ್ನು ಸ್ಮರಿಸಲು ಸೃಜನಶೀಲ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇಂದು ಮುಂಜಾನೆ ಮುಂಬೈ ಪೊಲೀಸರು ಟ್ವಿಟ್ಟರ್‌ನಲ್ಲಿ ನಟನಿಗೆ ಗೌರವ ಸಲ್ಲಿಸುವುದರ ಜೊತೆಗೆ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇರಲು ಸಂದೇಶವನ್ನು ರವಾನಿಸಿದ್ದಾರೆ.

“ನಮ್ಮ ನೆನಪುಗಳಲ್ಲಿ ನೀವು ಜೀವಂತವಾಗಿರಲು ಜಗತ್ತಿಗೆ ಹಲವು ಮಾರ್ಗಗಳನ್ನು ಮತ್ತು ಸಾಧನಗಳನ್ನು ನೀಡಿದ್ದೀರಿ!” ಎಂದ ಮುಂಬೈ ಪೊಲೀಸ್ ತನ್ನ ಟ್ವೀಟ್ ಹೇಳಿ, ಅದನ್ನು #RememberingIrrfan #StayHome #StaySafe #TributeToTheLegend #RIPIrrfanKhan ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಪೋಸ್ಟ್ ಮಾಡಲಾಗಿದೆ.

ಟ್ವೀಟ್‌ನಲ್ಲಿ ಇರ್ಫಾನ್ ಖಾನ್ ಅವರ ಎರಡು ಚಿತ್ರಗಳಿದ್ದು, ಅದರಲ್ಲಿ ಇರ್ಫಾನ್ ಖಾನ್ ‘ಲಾಕ್‌ಡೌನ್ ಸಮಯದಲ್ಲಿ ಸುಳ್ಳು’ ಎಂಬ ಸಂದೇಶಕ್ಕೆ ಬೇಡ ಎಂಬಂತೆ ಸೂಚಿಸುತ್ತಾರೆ, ಮತ್ತೊಂದು ಚಿತ್ರದಲ್ಲಿ ‘ಇರ್ಫಾನ್ ಖಾನ್ ಮೂವಿ ಮ್ಯಾರಥಾನ್ ಮನೆಯಲ್ಲೇ’ ಎಂಬ ಸಂದೇಶವನ್ನು ನೋಡಿ ನಗುತ್ತಾರೆ.


ಇದನ್ನೂ ಓದಿ: ಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ


ಭಾರತದ ಅತ್ಯುತ್ತಮ ಮತ್ತು ಬಹುಮುಖ ಪ್ರತಿಭೆಯ ನಟರಲ್ಲಿ ಒಬ್ಬರಾದ ಖಾನ್ ಅವರ ಪತ್ನಿ ಸುತಪಾ ಮತ್ತು ಅವರ ಪುತ್ರರಾದ ಬಾಬಿಲ್ ಮತ್ತು ಅಯಾನ್ ಅವರನ್ನು ಅಗಲಿದ್ದಾರೆ.

ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದ ನಟನನ್ನು ಅವರ ಕುಟುಂಬ ಹಾಗೂ ಸ್ನೇಹಿತರಾದ ನಿರ್ದೇಶಕ ಟಿಗ್ಮಂಶು ಧುಲಿಯಾ ಮತ್ತು ವಿಶಾಲ್ ಭರದ್ವಾಜ್ ಅವರ ಸಮ್ಮುಖದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ವರ್ಸೋವಾ ಸ್ಮಶಾನದಲ್ಲಿ ಸಮಾಧಿ ಮಾಡಲಾಯಿತು.

ಇವರಿಗೆ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತಯಾಗಿತ್ತು. ರಾಜಕಾರಣಿಗಳು, ಕ್ರೀಡಾ ತಾರೆಗಳು, ಪೌರಕಾರ್ಮಿಕರು ಮತ್ತು ಅವರ ಸಹೋದ್ಯೋಗಿಗಳು ಮತ್ತು ಭಾರತ ಮತ್ತು ವಿದೇಶಗಳಲ್ಲಿ ಅನೇಕ ಅಭಿಮಾನಿಗಳು ಸೇರಿದಂತೆ ಎಲ್ಲಾ ಭಾಗಗಳಿಂದಲೂ ಇರ್ಫಾನ್ ಖಾನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ನಟ “ಅಪರೂಪದ ಪ್ರತಿಭೆ” ಮತ್ತು ಅವರ ಪಾತ್ರಗಳನ್ನು ಯಾವಾಗಲೂ ಪ್ರೇಕ್ಷಕರು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿವಿಧ ಮಾಧ್ಯಮಗಳಲ್ಲಿ ಇರ್ಫಾನ್ ಖಾನ್ ಅವರ ಬಹುಮುಖ ಪ್ರತಿಭೆಗಾಗಿ ಸ್ಮರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರಲ್ಲದೆ, ಅವರ ನಿಧನವು ಸಿನಿಮಾ ಮತ್ತು ರಂಗಭೂಮಿ ಜಗತ್ತಿಗೆ ನಷ್ಟವಾಗಿದೆ ಎಂದು  ಟ್ವಿಟರ್‌ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...