Homeಮುಖಪುಟನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

ನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

- Advertisement -
- Advertisement -

ಮುಂಬೈ ಪೊಲೀಸರು ನಿನ್ನೆ ನಿಧನರಾದ ನಟ ಇರ್ಫಾನ್ ಖಾನ್ ಅವರಿಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಪರೂಪದ ಕ್ಯಾನ್ಸರ್‌ನೊಂದಿಗೆ ಎರಡು ವರ್ಷಗಳ ಹೋರಾಟದ ನಂತರ ಅವರು ನಿನ್ನೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಮುಂಬೈ ಪೊಲೀಸರು ನಟನನ್ನು ಸ್ಮರಿಸಲು ಸೃಜನಶೀಲ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇಂದು ಮುಂಜಾನೆ ಮುಂಬೈ ಪೊಲೀಸರು ಟ್ವಿಟ್ಟರ್‌ನಲ್ಲಿ ನಟನಿಗೆ ಗೌರವ ಸಲ್ಲಿಸುವುದರ ಜೊತೆಗೆ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇರಲು ಸಂದೇಶವನ್ನು ರವಾನಿಸಿದ್ದಾರೆ.

“ನಮ್ಮ ನೆನಪುಗಳಲ್ಲಿ ನೀವು ಜೀವಂತವಾಗಿರಲು ಜಗತ್ತಿಗೆ ಹಲವು ಮಾರ್ಗಗಳನ್ನು ಮತ್ತು ಸಾಧನಗಳನ್ನು ನೀಡಿದ್ದೀರಿ!” ಎಂದ ಮುಂಬೈ ಪೊಲೀಸ್ ತನ್ನ ಟ್ವೀಟ್ ಹೇಳಿ, ಅದನ್ನು #RememberingIrrfan #StayHome #StaySafe #TributeToTheLegend #RIPIrrfanKhan ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಪೋಸ್ಟ್ ಮಾಡಲಾಗಿದೆ.

ಟ್ವೀಟ್‌ನಲ್ಲಿ ಇರ್ಫಾನ್ ಖಾನ್ ಅವರ ಎರಡು ಚಿತ್ರಗಳಿದ್ದು, ಅದರಲ್ಲಿ ಇರ್ಫಾನ್ ಖಾನ್ ‘ಲಾಕ್‌ಡೌನ್ ಸಮಯದಲ್ಲಿ ಸುಳ್ಳು’ ಎಂಬ ಸಂದೇಶಕ್ಕೆ ಬೇಡ ಎಂಬಂತೆ ಸೂಚಿಸುತ್ತಾರೆ, ಮತ್ತೊಂದು ಚಿತ್ರದಲ್ಲಿ ‘ಇರ್ಫಾನ್ ಖಾನ್ ಮೂವಿ ಮ್ಯಾರಥಾನ್ ಮನೆಯಲ್ಲೇ’ ಎಂಬ ಸಂದೇಶವನ್ನು ನೋಡಿ ನಗುತ್ತಾರೆ.


ಇದನ್ನೂ ಓದಿ: ಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ


ಭಾರತದ ಅತ್ಯುತ್ತಮ ಮತ್ತು ಬಹುಮುಖ ಪ್ರತಿಭೆಯ ನಟರಲ್ಲಿ ಒಬ್ಬರಾದ ಖಾನ್ ಅವರ ಪತ್ನಿ ಸುತಪಾ ಮತ್ತು ಅವರ ಪುತ್ರರಾದ ಬಾಬಿಲ್ ಮತ್ತು ಅಯಾನ್ ಅವರನ್ನು ಅಗಲಿದ್ದಾರೆ.

ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದ ನಟನನ್ನು ಅವರ ಕುಟುಂಬ ಹಾಗೂ ಸ್ನೇಹಿತರಾದ ನಿರ್ದೇಶಕ ಟಿಗ್ಮಂಶು ಧುಲಿಯಾ ಮತ್ತು ವಿಶಾಲ್ ಭರದ್ವಾಜ್ ಅವರ ಸಮ್ಮುಖದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ವರ್ಸೋವಾ ಸ್ಮಶಾನದಲ್ಲಿ ಸಮಾಧಿ ಮಾಡಲಾಯಿತು.

ಇವರಿಗೆ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತಯಾಗಿತ್ತು. ರಾಜಕಾರಣಿಗಳು, ಕ್ರೀಡಾ ತಾರೆಗಳು, ಪೌರಕಾರ್ಮಿಕರು ಮತ್ತು ಅವರ ಸಹೋದ್ಯೋಗಿಗಳು ಮತ್ತು ಭಾರತ ಮತ್ತು ವಿದೇಶಗಳಲ್ಲಿ ಅನೇಕ ಅಭಿಮಾನಿಗಳು ಸೇರಿದಂತೆ ಎಲ್ಲಾ ಭಾಗಗಳಿಂದಲೂ ಇರ್ಫಾನ್ ಖಾನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ನಟ “ಅಪರೂಪದ ಪ್ರತಿಭೆ” ಮತ್ತು ಅವರ ಪಾತ್ರಗಳನ್ನು ಯಾವಾಗಲೂ ಪ್ರೇಕ್ಷಕರು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿವಿಧ ಮಾಧ್ಯಮಗಳಲ್ಲಿ ಇರ್ಫಾನ್ ಖಾನ್ ಅವರ ಬಹುಮುಖ ಪ್ರತಿಭೆಗಾಗಿ ಸ್ಮರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರಲ್ಲದೆ, ಅವರ ನಿಧನವು ಸಿನಿಮಾ ಮತ್ತು ರಂಗಭೂಮಿ ಜಗತ್ತಿಗೆ ನಷ್ಟವಾಗಿದೆ ಎಂದು  ಟ್ವಿಟರ್‌ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...