Homeಮುಖಪುಟನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

ನಟ ಇರ್ಫಾನ್‌ ಖಾನ್‌ಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ ಮುಂಬೈ ಪೊಲೀಸರು

- Advertisement -
- Advertisement -

ಮುಂಬೈ ಪೊಲೀಸರು ನಿನ್ನೆ ನಿಧನರಾದ ನಟ ಇರ್ಫಾನ್ ಖಾನ್ ಅವರಿಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ. ಅಪರೂಪದ ಕ್ಯಾನ್ಸರ್‌ನೊಂದಿಗೆ ಎರಡು ವರ್ಷಗಳ ಹೋರಾಟದ ನಂತರ ಅವರು ನಿನ್ನೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಮುಂಬೈ ಪೊಲೀಸರು ನಟನನ್ನು ಸ್ಮರಿಸಲು ಸೃಜನಶೀಲ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇಂದು ಮುಂಜಾನೆ ಮುಂಬೈ ಪೊಲೀಸರು ಟ್ವಿಟ್ಟರ್‌ನಲ್ಲಿ ನಟನಿಗೆ ಗೌರವ ಸಲ್ಲಿಸುವುದರ ಜೊತೆಗೆ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇರಲು ಸಂದೇಶವನ್ನು ರವಾನಿಸಿದ್ದಾರೆ.

“ನಮ್ಮ ನೆನಪುಗಳಲ್ಲಿ ನೀವು ಜೀವಂತವಾಗಿರಲು ಜಗತ್ತಿಗೆ ಹಲವು ಮಾರ್ಗಗಳನ್ನು ಮತ್ತು ಸಾಧನಗಳನ್ನು ನೀಡಿದ್ದೀರಿ!” ಎಂದ ಮುಂಬೈ ಪೊಲೀಸ್ ತನ್ನ ಟ್ವೀಟ್ ಹೇಳಿ, ಅದನ್ನು #RememberingIrrfan #StayHome #StaySafe #TributeToTheLegend #RIPIrrfanKhan ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಪೋಸ್ಟ್ ಮಾಡಲಾಗಿದೆ.

ಟ್ವೀಟ್‌ನಲ್ಲಿ ಇರ್ಫಾನ್ ಖಾನ್ ಅವರ ಎರಡು ಚಿತ್ರಗಳಿದ್ದು, ಅದರಲ್ಲಿ ಇರ್ಫಾನ್ ಖಾನ್ ‘ಲಾಕ್‌ಡೌನ್ ಸಮಯದಲ್ಲಿ ಸುಳ್ಳು’ ಎಂಬ ಸಂದೇಶಕ್ಕೆ ಬೇಡ ಎಂಬಂತೆ ಸೂಚಿಸುತ್ತಾರೆ, ಮತ್ತೊಂದು ಚಿತ್ರದಲ್ಲಿ ‘ಇರ್ಫಾನ್ ಖಾನ್ ಮೂವಿ ಮ್ಯಾರಥಾನ್ ಮನೆಯಲ್ಲೇ’ ಎಂಬ ಸಂದೇಶವನ್ನು ನೋಡಿ ನಗುತ್ತಾರೆ.


ಇದನ್ನೂ ಓದಿ: ಹಿಂದಿ ಚಿತ್ರರಂಗದ ಹಿರಿಯ ನಟ ರಿಷಿ ಕಪೂರ್ ನಿಧನ


ಭಾರತದ ಅತ್ಯುತ್ತಮ ಮತ್ತು ಬಹುಮುಖ ಪ್ರತಿಭೆಯ ನಟರಲ್ಲಿ ಒಬ್ಬರಾದ ಖಾನ್ ಅವರ ಪತ್ನಿ ಸುತಪಾ ಮತ್ತು ಅವರ ಪುತ್ರರಾದ ಬಾಬಿಲ್ ಮತ್ತು ಅಯಾನ್ ಅವರನ್ನು ಅಗಲಿದ್ದಾರೆ.

ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದ ನಟನನ್ನು ಅವರ ಕುಟುಂಬ ಹಾಗೂ ಸ್ನೇಹಿತರಾದ ನಿರ್ದೇಶಕ ಟಿಗ್ಮಂಶು ಧುಲಿಯಾ ಮತ್ತು ವಿಶಾಲ್ ಭರದ್ವಾಜ್ ಅವರ ಸಮ್ಮುಖದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ವರ್ಸೋವಾ ಸ್ಮಶಾನದಲ್ಲಿ ಸಮಾಧಿ ಮಾಡಲಾಯಿತು.

ಇವರಿಗೆ 2018 ರಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ ಇರುವುದು ಪತ್ತಯಾಗಿತ್ತು. ರಾಜಕಾರಣಿಗಳು, ಕ್ರೀಡಾ ತಾರೆಗಳು, ಪೌರಕಾರ್ಮಿಕರು ಮತ್ತು ಅವರ ಸಹೋದ್ಯೋಗಿಗಳು ಮತ್ತು ಭಾರತ ಮತ್ತು ವಿದೇಶಗಳಲ್ಲಿ ಅನೇಕ ಅಭಿಮಾನಿಗಳು ಸೇರಿದಂತೆ ಎಲ್ಲಾ ಭಾಗಗಳಿಂದಲೂ ಇರ್ಫಾನ್ ಖಾನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ನಟ “ಅಪರೂಪದ ಪ್ರತಿಭೆ” ಮತ್ತು ಅವರ ಪಾತ್ರಗಳನ್ನು ಯಾವಾಗಲೂ ಪ್ರೇಕ್ಷಕರು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿವಿಧ ಮಾಧ್ಯಮಗಳಲ್ಲಿ ಇರ್ಫಾನ್ ಖಾನ್ ಅವರ ಬಹುಮುಖ ಪ್ರತಿಭೆಗಾಗಿ ಸ್ಮರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರಲ್ಲದೆ, ಅವರ ನಿಧನವು ಸಿನಿಮಾ ಮತ್ತು ರಂಗಭೂಮಿ ಜಗತ್ತಿಗೆ ನಷ್ಟವಾಗಿದೆ ಎಂದು  ಟ್ವಿಟರ್‌ನಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: Irrfan Khan Passes Away: ಪ್ರಸಿದ್ಧ ಹಿಂದಿ ನಟ ಇರ್ಫಾನ್ ಖಾನ್ ಇನ್ನಿಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...