Homeಮುಖಪುಟಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ಮೊದಲ ನೋಟಿಸ್‌ಗೆ ನಟಿ ಕಂಗನಾ ಮದುವೆ ಇದೆ ಎಂಬ ನೆಪ ನೀಡಿ ವಿಚಾರಣೆ ತಪ್ಪಿಸಿಕೊಂಡಿದ್ದರು. ಈ ತಿಂಗಳ 10 ಮತ್ತು 11ರಂದು ವಿಚಾರಣೆಗೆ ಹಾಜರಾಗಲು ಮತ್ತೊಂದು ನೋಟಿಸ್ ನೀಡಲಾಗಿದೆ.

- Advertisement -
- Advertisement -

ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಮತ್ತೆ ನೋಟಿಸ್ ಕಳುಹಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣ ಸಂಬಂಧ ನೋಟಿಸ್ ನೀಡಲಾಗಿದೆ.

ಇಬ್ಬರು ಸಹೋದರಿಯರು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದರು. ಕಳೆದ ತಿಂಗಳು ಕೂಡ ವಿಚಾರಣೆಗಾಗಿ ಪೊಲೀಸರು ಕಂಗನಾ ರಣಾವತ್ ಮತ್ತು ರಂಗೋಲಿ ಅವರಿಗೆ ನೋಟಿಸ್ ನೀಡಿದ್ದರು.

ಇತ್ತೀಚೆಗೆ, ಬಾಂದ್ರಾ ಪೊಲೀಸರು ನಟಿ ಕಂಗನಾ ಮತ್ತು ಅವರ ಸಹೋದರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಕಂಗನಾ ರಣಾವತ್ ವಿರುದ್ಧ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿತ್ತು.

ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ಕಂಗನಾ ರಣಾವತ್‌ಗೆ ನೋಟಿಸ್!

ಮೊದಲ ನೋಟಿಸ್‌ನಲ್ಲಿ, ನಟಿ ಕಂಗನಾ ಮದುವೆ ಇದೆ ಎಂಬ ನೆಪ ನೀಡಿ ವಿಚಾರಣೆಗೆ ಬರುವುದನ್ನು ತಪ್ಪಿಸಿಕೊಂಡಿದ್ದರು. ಈ ಹಿನ್ನೆಲೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ನವೆಂಬರ್ 10 ಮತ್ತು 11 ನೇ ದಿನಾಂಕದಂದು ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

ಬಾಲಿವುಡ್ ಕಾಸ್ಟಿಂಗ್ ನಿರ್ದೇಶಕ ಮತ್ತು ಫಿಟ್ನೆಸ್ ತರಬೇತುದಾರ ಮುನಾವರ್ ಅಲಿ ಸಯ್ಯದ್ ಅವರು ಸಲ್ಲಿಸಿದ ದೂರಿನ ಬಗ್ಗೆ ತನಿಖೆ ನಡೆಸುವಂತೆ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿಯ ಟ್ವೀಟ್ ಮತ್ತು ಇತರ ಹೇಳಿಕೆಗಳನ್ನು ಉಲ್ಲೇಖಿಸಿ ಪೊಲೀಸರಿಗೆ ಆದೇಶಿಸಿತ್ತು.

ನಟಿ ಮತ್ತು ಆಕೆಯ ಸಹೋದರಿ ಹೆಚ್ಚು ಆಕ್ಷೇಪಾರ್ಹ ಹೇಳಿಕೆ‌ಗಳನ್ನು ಟ್ವೀಟ್ ಮಾಡಿದ್ದಾರೆ. ಇದು ದೂರುದಾರರ ಧಾರ್ಮಿಕ ಭಾವನೆಗಳನ್ನು ಮಾತ್ರವಲ್ಲದೆ ಅನೇಕ ಕಲಾವಿದರ ಭಾವನೆಗಳನ್ನು ಸಹ ನೋಯಿಸುತ್ತದೆ. ಅವರು ಕಲಾವಿದರನ್ನು ಕೋಮುವಾದಿ ವರ್ಗಗಳಾಗಿ ವಿಂಗಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನ್ಯಾಯಾಲಯದ ನಿರ್ದೇಶನದ ಮೇರೆಗೆ, ಬಾಂದ್ರಾ ಪೊಲೀಸರು ರಣಾವತ್ ಮತ್ತು ಆಕೆಯ ಸಹೋದರಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), ಮತ್ತೆ 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...