Homeಎಕಾನಮಿಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

ಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರ ವಹಿಸಲು ಮನವಿ ಮಾಡಲಾಗಿದೆ.

- Advertisement -
- Advertisement -

ನಿನ್ನೆ ಸಂಜೆಯಿಂದ ಮುಂಬೈ ಮಹಾನಗರಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿಹೋಗಿವೆ. ಕೇಂದ್ರ ರೈಲ್ವೇ ಮತ್ತು ಸಬ್ ಅರ್ಬನ್ ರೈಲು ಸಂಚಾರಕ್ಕೂ ಮಳೆ ಅಡ್ಡಗಾಲು ಹಾಕ್ಕಿದ್ದು, ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ, ಪಶ್ಚಿಮ ಉಪನಗರಗಳಲ್ಲಿ 280 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗಿದೆ ಎಂದು ಭಾರತದ ಹವಾಮಾನ ಇಲಾಖೆ (IMD-India Meteorological Department) ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಮೂರು ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಧಾರುಣ ಸಾವು

ನಗರದ ಭೆಂಡಿ ಬಜಾರ್, ಗೋಲ್ ಟೆಂಪಲ್, ನಾನಾ ಚೌಕ್, ಮುಂಬೈ ಸೆಂಟ್ರಲ್ ಜಂಕ್ಷನ್, ಬಾವ್ಲಾ ಕಾಂಪೌಂಡ್, ಜೆ.ಜೆ.ಜಂಕ್ಷನ್,ಹಿಂದ್ಮಾತಾ, ಕಾಲಾ ಚೌಕಿ, ಸರ್ತಿ ಬಾರ್, ವರ್ಲಿ ಸೀ ಫೇಸ್‌ಗಳಲ್ಲಿ ಮಳೆ ನೀರು ನುಗ್ಗಿದ್ದು, ನೀರು ಹೊರಹಾಕಲು ವಾರ್ಡ್‌ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಂಬೈ ಕಾಪೋರೇಷನ್ ಟ್ವೀಟ್ ಮಾಡಿದೆ.

ಮಳೆಯಿಂದ ಸಂಚಾರ ವ್ಯವಸ್ಥೆ ಹದಗೆಟ್ಟಿದ್ದು, ಜನ ಕಚೇರಿಗೆ ತೆರಳಲು ಆಗದ ಕಾರಣ ಮುಂಬೈನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೂ ರಜೆ ಘೋಷಿಸಲಾಗಿದೆ. ಜನರಿಗೆ ಅಗತ್ಯವಿದ್ದರೇ ಮಾತ್ರ ಮನೆಗಳಿಂದ ಹೊರ ಬರುವಂತೆ ಬೃಹತ್‌ಮುಂಬೈ ಕಾರ್ಪೊರೇಷನ್ ಮನವಿ ಮಾಡಿದೆ.

ಮಹಾಮಳೆಯಿಂದಾಗಿ ಮುಂಬೈನ ಚಾರಿಟಿ ಆಸ್ಪತ್ರೆ ನಾಯರ್‌‌‌‌ ಆಸ್ಪತ್ರೆ ನೀರಿನಿಂದ ತುಂಬಿದೆ. ಕೊರೊನಾ ರೋಗಿಗಳಿದ್ದ ಕೊವೀಡ್ ವಾರ್ಡ್‌‌ ಸಂಪೂರ್ಣ ಮಳೆ ನೀರಿನಿಂದ ತುಂಬಿದ್ದು ರೋಗಿಗಳ ಜೊತೆಗೆ ಆಸ್ಪತ್ರೆ ಸಿಬ್ಬಂದಿ ಕೂಡ ಪರದಾಡಿದ್ದಾರೆ.  ಕೊರೊನಾ ಸೋಂಕಿತರಲ್ಲಿ ಪ್ರಥಮ ಸ್ಥಾನದಲ್ಲಿರುವ ಮುಂಬೈನಲ್ಲಿ ಮಳೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಹಳೆಯ ಕಟ್ಟಡಗಳು ಮತ್ತು ಸರಿಯಾಗಿ ನಿರ್ವಹಿಸದೆ ಇರುವ ಕಟ್ಟಡಗಳಿಂದ ಅಪಾಯದ ಸಾಧ್ಯತೆ ಇದೆ ಎಂದು ಹವಾಮಾನ ಕಚೇರಿ ಎಚ್ಚರಿಕೆ  ನೀಡಿದೆ. ಈ ವಾರದ ಆರಂಭದಲ್ಲಿ ಮುಂಬೈ ಬಳಿಯ ಭಿವಾಂಡಿಯಲ್ಲಿ ಕಟ್ಟಡ ಕುಸಿದು 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷಗಳ ನಂತರ ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...