Homeಎಕಾನಮಿಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

ಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರ ವಹಿಸಲು ಮನವಿ ಮಾಡಲಾಗಿದೆ.

- Advertisement -
- Advertisement -

ನಿನ್ನೆ ಸಂಜೆಯಿಂದ ಮುಂಬೈ ಮಹಾನಗರಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿಹೋಗಿವೆ. ಕೇಂದ್ರ ರೈಲ್ವೇ ಮತ್ತು ಸಬ್ ಅರ್ಬನ್ ರೈಲು ಸಂಚಾರಕ್ಕೂ ಮಳೆ ಅಡ್ಡಗಾಲು ಹಾಕ್ಕಿದ್ದು, ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ, ಪಶ್ಚಿಮ ಉಪನಗರಗಳಲ್ಲಿ 280 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗಿದೆ ಎಂದು ಭಾರತದ ಹವಾಮಾನ ಇಲಾಖೆ (IMD-India Meteorological Department) ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಮೂರು ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಧಾರುಣ ಸಾವು

ನಗರದ ಭೆಂಡಿ ಬಜಾರ್, ಗೋಲ್ ಟೆಂಪಲ್, ನಾನಾ ಚೌಕ್, ಮುಂಬೈ ಸೆಂಟ್ರಲ್ ಜಂಕ್ಷನ್, ಬಾವ್ಲಾ ಕಾಂಪೌಂಡ್, ಜೆ.ಜೆ.ಜಂಕ್ಷನ್,ಹಿಂದ್ಮಾತಾ, ಕಾಲಾ ಚೌಕಿ, ಸರ್ತಿ ಬಾರ್, ವರ್ಲಿ ಸೀ ಫೇಸ್‌ಗಳಲ್ಲಿ ಮಳೆ ನೀರು ನುಗ್ಗಿದ್ದು, ನೀರು ಹೊರಹಾಕಲು ವಾರ್ಡ್‌ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಂಬೈ ಕಾಪೋರೇಷನ್ ಟ್ವೀಟ್ ಮಾಡಿದೆ.

ಮಳೆಯಿಂದ ಸಂಚಾರ ವ್ಯವಸ್ಥೆ ಹದಗೆಟ್ಟಿದ್ದು, ಜನ ಕಚೇರಿಗೆ ತೆರಳಲು ಆಗದ ಕಾರಣ ಮುಂಬೈನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೂ ರಜೆ ಘೋಷಿಸಲಾಗಿದೆ. ಜನರಿಗೆ ಅಗತ್ಯವಿದ್ದರೇ ಮಾತ್ರ ಮನೆಗಳಿಂದ ಹೊರ ಬರುವಂತೆ ಬೃಹತ್‌ಮುಂಬೈ ಕಾರ್ಪೊರೇಷನ್ ಮನವಿ ಮಾಡಿದೆ.

ಮಹಾಮಳೆಯಿಂದಾಗಿ ಮುಂಬೈನ ಚಾರಿಟಿ ಆಸ್ಪತ್ರೆ ನಾಯರ್‌‌‌‌ ಆಸ್ಪತ್ರೆ ನೀರಿನಿಂದ ತುಂಬಿದೆ. ಕೊರೊನಾ ರೋಗಿಗಳಿದ್ದ ಕೊವೀಡ್ ವಾರ್ಡ್‌‌ ಸಂಪೂರ್ಣ ಮಳೆ ನೀರಿನಿಂದ ತುಂಬಿದ್ದು ರೋಗಿಗಳ ಜೊತೆಗೆ ಆಸ್ಪತ್ರೆ ಸಿಬ್ಬಂದಿ ಕೂಡ ಪರದಾಡಿದ್ದಾರೆ.  ಕೊರೊನಾ ಸೋಂಕಿತರಲ್ಲಿ ಪ್ರಥಮ ಸ್ಥಾನದಲ್ಲಿರುವ ಮುಂಬೈನಲ್ಲಿ ಮಳೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಹಳೆಯ ಕಟ್ಟಡಗಳು ಮತ್ತು ಸರಿಯಾಗಿ ನಿರ್ವಹಿಸದೆ ಇರುವ ಕಟ್ಟಡಗಳಿಂದ ಅಪಾಯದ ಸಾಧ್ಯತೆ ಇದೆ ಎಂದು ಹವಾಮಾನ ಕಚೇರಿ ಎಚ್ಚರಿಕೆ  ನೀಡಿದೆ. ಈ ವಾರದ ಆರಂಭದಲ್ಲಿ ಮುಂಬೈ ಬಳಿಯ ಭಿವಾಂಡಿಯಲ್ಲಿ ಕಟ್ಟಡ ಕುಸಿದು 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷಗಳ ನಂತರ ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...