Homeಮುಖಪುಟಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

ಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಶನಿವಾರ ಸಂಜೆ ಬಾಂದ್ರಾದ ನಿರ್ಮಲ್ ನಗರದಲ್ಲಿರುವ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ದಿಕ್ ಅವರ ಮೇಲೆ ಮೂವರು ಅಪರಿಚಿತ ದಾಳಿಕೋರರು ಆರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ವರದಿ ಹೇಳಿದೆ. ಮುಂಬೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಾಳಿ ನಡೆದ ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಅಲ್ಲಿ ಘೋಷಿಸಲಾಯಿತು. ದಾಳಿಕೋರರು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಶಂಕಿಸಲಾಗಿದೆ ಎಂದು ಹಲವು ವರದಿಗಳು ಉಲ್ಲೇಖಿಸಿವೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ.

ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿರುವ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರಿದ್ದರು. ಅವರ ಪುತ್ರ ಜೀಶನ್ ಸಿದ್ದಿಕ್ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

ಇದನ್ನೂಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಸಿದ್ದಿಕ್ ಮೇಲೆ ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿದ್ದು, ತಲೆ ಮತ್ತು ಎದೆಗೆ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ. ಕಳೆದ 15 ದಿನಗಳ ಹಿಂದಿನಿಂದ ಅವರಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ವರದಿಯಾಗಿದೆ. ಹಾಗಾಗಿ ಅವರಿಗೆ ವೈ ಭದ್ರತೆ ಒದಗಿಸಿಸಲಾಗಿತ್ತು. ಮುಂಬೈ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ದುರಂತ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ. ಬಾಬಾ ಸಿದ್ದಿಕ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.

ಮೂರನೇ ದಾಳಿಕೋರ ಪರಾರಿಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಒತ್ತಿ ಹೇಳಿದ ಶಿಂಧೆ ಹೇಳಿದ್ದಾರೆ. ಶೀಘ್ರ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಇದನ್ನೂಓದಿ: ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರು ದಾಳಿಯನ್ನು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ಬಣ್ಣಿಸಿದ್ದಾರೆ. “ಈ ಘಟನೆಯಲ್ಲಿ ಅವರು ಸಾವನ್ನಪ್ಪಿದ್ದಾರೆಂದು ತಿಳಿದ ನಂತರ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ. ತಾನು ಉತ್ತಮ ಸ್ನೇಹಿತ ಮತ್ತು ಸಹೋದ್ಯೋಗಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಹೋರಾಡಿದ ಮತ್ತು ಜಾತ್ಯತೀತತೆಯನ್ನು ಪ್ರತಿಪಾದಿಸಿದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ, ದಾಳಿಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಸಿದ್ದಿಕಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಸಿದ್ದಿಕಿ ಅವರು ಆತ್ಮೀಯ ಸ್ನೇಹಿತನಾಗಿದ್ದು, ತಾನು ಮಾತುಗಳನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಇದನ್ನೂಓದಿ: ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಮಾಜಿ ಕೇಂದ್ರ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಅವರು ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾಮಾನ್ಯ ಜನರಿಗೆ ಆತಂಕಕಾರಿಯಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ಗೃಹ ಸಚಿವರು ಈ ಪರಿಸ್ಥಿತಿಯ ಹೊಣೆಗಾರರಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಾಬಾ ಸಿದ್ದಿಕ್ ಅವರು ಗ್ರ್ಯಾಂಡ್ ಇಫ್ತಾರ್ ಪಾರ್ಟಿಗಳನ್ನು ಆಯೋಜಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಅವರ ಇಫ್ತಾರ್ ಪಾರ್ಟಿಗಳಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖ ಬಾಲಿವುಡ್ ತಾರೆಯರು ಭಾಗವಹಿಸುತ್ತಿದ್ದರು.

ಅಕ್ಟೋಬರ್ 4 ರಂದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಬೈಕುಲ್ಲಾ ತಾಲೂಕು ಅಧ್ಯಕ್ಷ ಸಚಿನ್ ಕುರ್ಮಿ ​​ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆಂತರಿಕ ಕಲಹದ ಪರಿಣಾಮವಾಗಿ ಅವರ ಮನೆಯ ಸಮೀಪವೇ ಚಾಕುವಿನಿಂದ ಇರಿಯಲಾಗಿತ್ತು. ಕುರ್ಮಿ ​​ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...