Homeಮುಖಪುಟಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

ಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಶನಿವಾರ ಸಂಜೆ ಬಾಂದ್ರಾದ ನಿರ್ಮಲ್ ನಗರದಲ್ಲಿರುವ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ದಿಕ್ ಅವರ ಮೇಲೆ ಮೂವರು ಅಪರಿಚಿತ ದಾಳಿಕೋರರು ಆರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ವರದಿ ಹೇಳಿದೆ. ಮುಂಬೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಾಳಿ ನಡೆದ ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಅಲ್ಲಿ ಘೋಷಿಸಲಾಯಿತು. ದಾಳಿಕೋರರು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಶಂಕಿಸಲಾಗಿದೆ ಎಂದು ಹಲವು ವರದಿಗಳು ಉಲ್ಲೇಖಿಸಿವೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ.

ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿರುವ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರಿದ್ದರು. ಅವರ ಪುತ್ರ ಜೀಶನ್ ಸಿದ್ದಿಕ್ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

ಇದನ್ನೂಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಸಿದ್ದಿಕ್ ಮೇಲೆ ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿದ್ದು, ತಲೆ ಮತ್ತು ಎದೆಗೆ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ. ಕಳೆದ 15 ದಿನಗಳ ಹಿಂದಿನಿಂದ ಅವರಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ವರದಿಯಾಗಿದೆ. ಹಾಗಾಗಿ ಅವರಿಗೆ ವೈ ಭದ್ರತೆ ಒದಗಿಸಿಸಲಾಗಿತ್ತು. ಮುಂಬೈ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ದುರಂತ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ. ಬಾಬಾ ಸಿದ್ದಿಕ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.

ಮೂರನೇ ದಾಳಿಕೋರ ಪರಾರಿಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಒತ್ತಿ ಹೇಳಿದ ಶಿಂಧೆ ಹೇಳಿದ್ದಾರೆ. ಶೀಘ್ರ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಇದನ್ನೂಓದಿ: ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರು ದಾಳಿಯನ್ನು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ಬಣ್ಣಿಸಿದ್ದಾರೆ. “ಈ ಘಟನೆಯಲ್ಲಿ ಅವರು ಸಾವನ್ನಪ್ಪಿದ್ದಾರೆಂದು ತಿಳಿದ ನಂತರ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ. ತಾನು ಉತ್ತಮ ಸ್ನೇಹಿತ ಮತ್ತು ಸಹೋದ್ಯೋಗಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಹೋರಾಡಿದ ಮತ್ತು ಜಾತ್ಯತೀತತೆಯನ್ನು ಪ್ರತಿಪಾದಿಸಿದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ, ದಾಳಿಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಸಿದ್ದಿಕಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಸಿದ್ದಿಕಿ ಅವರು ಆತ್ಮೀಯ ಸ್ನೇಹಿತನಾಗಿದ್ದು, ತಾನು ಮಾತುಗಳನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಇದನ್ನೂಓದಿ: ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಮಾಜಿ ಕೇಂದ್ರ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಅವರು ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾಮಾನ್ಯ ಜನರಿಗೆ ಆತಂಕಕಾರಿಯಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ಗೃಹ ಸಚಿವರು ಈ ಪರಿಸ್ಥಿತಿಯ ಹೊಣೆಗಾರರಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಾಬಾ ಸಿದ್ದಿಕ್ ಅವರು ಗ್ರ್ಯಾಂಡ್ ಇಫ್ತಾರ್ ಪಾರ್ಟಿಗಳನ್ನು ಆಯೋಜಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಅವರ ಇಫ್ತಾರ್ ಪಾರ್ಟಿಗಳಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖ ಬಾಲಿವುಡ್ ತಾರೆಯರು ಭಾಗವಹಿಸುತ್ತಿದ್ದರು.

ಅಕ್ಟೋಬರ್ 4 ರಂದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಬೈಕುಲ್ಲಾ ತಾಲೂಕು ಅಧ್ಯಕ್ಷ ಸಚಿನ್ ಕುರ್ಮಿ ​​ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆಂತರಿಕ ಕಲಹದ ಪರಿಣಾಮವಾಗಿ ಅವರ ಮನೆಯ ಸಮೀಪವೇ ಚಾಕುವಿನಿಂದ ಇರಿಯಲಾಗಿತ್ತು. ಕುರ್ಮಿ ​​ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...