Homeಮುಖಪುಟಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

- Advertisement -
- Advertisement -

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ ಕೇಳಿರುವ ಬಗ್ಗೆ ವರದಿಯಾಗಿದೆ.

ವರದಿಗಳ ಪ್ರಕಾರ,  OpIndia ಎಂಬ ಹಿಂದುತ್ವಪರ ಪೋರ್ಟಲ್‌ವೊಂದು ಏಪ್ರಿಲ್ 24ರಂದು ಶೇಖ್ ಅವರನ್ನು “ಹಮಾಸ್ ಸಹಾನುಭೂತಿ” ಮತ್ತು “ಹಿಂದೂ ವಿರೋಧಿ” ಎಂದು ಆರೋಪಿಸಿ ಸ್ಟೋರಿಯನ್ನು ಪ್ರಕಟಿಸಿತ್ತು. ಅವರು ಪ್ರಾಂಶುಪಾಲರಾಗುವುದಕ್ಕೆ ಅನರ್ಹರು ಎಂದು ಟೀಕಿಸಿತ್ತು.

ಶೇಖ್ ಅವರು ತನ್ನ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ, ನನ್ನನ್ನು ಮೌನಗೊಳಿಸುವ ಉದ್ದೇಶದಿಂದ ಮಾಡಿದ “ದುರುದ್ದೇಶಪೂರಿತ ಪ್ರತಿಕ್ರಿಯೆ”ಗೆ ಬಲಿಯಾಗಿದ್ದೇನೆ. ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ, ನಾನು ವಾಕ್ ಸ್ವಾತಂತ್ರ್ಯದ ತತ್ವವನ್ನು ಹೆಚ್ಚು ಗೌರವಿಸುತ್ತೇನೆ ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನನ್ನ ಅಭಿವ್ಯಕ್ತಿ ಈ ರೀತಿ ಕ್ರಮಕ್ಕೆ ಪ್ರಚೋದಿಸುತ್ತದೆ ಎಂದು ಊಹಿಸಿರಲಿಲ್ಲ ಎಂದು ಹೇಳಿದ್ದಾರೆ.

ಕಾಲೇಜು ಆಡಳಿತ ಮಂಡಳಿಯು ಯಾವಾಗಲೂ ನನಗೆ ಬೆಂಬಲ ನೀಡಿದೆ ಮತ್ತು ಧನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಶಾಲೆಯ ಬೆಳವಣಿಗೆ ಮತ್ತು ಯಶಸ್ಸಿನಲ್ಲಿ ನನ್ನ ಪಾತ್ರವನ್ನು ಅವರು ಒಪ್ಪಿಕೊಂಡಿದ್ದಾರೆ ಮತ್ತು ನನ್ನ ಕೆಲಸದಿಂದ ಸಂತೋಷಪಟ್ಟಿದ್ದಾರೆ. ಇದು ಅವರಿಗೆ ಕಠಿಣ ನಿರ್ಧಾರ ಎಂದು ಅವರು ಹೇಳುತ್ತಾರೆ ಎಂದು ಪರ್ವೀನ್ ಶೇಖ್ ಹೇಳಿದ್ದಾರೆ.

ನೌಕರರ ರಾಜಕೀಯ ಹೇಳಿಕೆಗಳ ಬಗ್ಗೆ ಶಾಲಾ ಆಡಳಿತವು ಯಾವುದೇ ಔಪಚಾರಿಕ ನೀತಿಯನ್ನು ಹೊಂದಿಲ್ಲ. ಆದರೆ ಮಾರ್ಚ್‌ನಲ್ಲಿ ನಡೆದ ಸಭೆಯಲ್ಲಿ, ಉದ್ಯೋಗಿಗಳು ತಮ್ಮ ಖಾಸಗಿ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿಸಲಾಗಿದೆ, ಇವುಗಳು ವೈಯಕ್ತಿಕ ಅಭಿಪ್ರಾಯಗಳು ಎಂದು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.

ಎಕ್ಸ್‌ನಲ್ಲಿ ಅಪರೂಪವಾಗಿ ಪೋಸ್ಟ್ ಮಾಡುವ ಶೇಖ್, ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಖಂಡಿಸುವ ಪೋಸ್ಟ್‌ಗಳಿಗೆ ಲೈಕ್‌ ಮಾಡಿದ್ದಾರೆ. ಇದಲ್ಲದೆ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ಮೋದಿ ಅವರನ್ನು ಟೀಕಿಸುವ ಹಲವಾರು ಪೋಸ್ಟ್‌ಗಳಿಗೆ ಅವರು ಲೈಕ್‌ ಹಾಕಿದ್ದರು.

ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಹೇಳಿಕೆಯಲ್ಲಿ ಶೇಖ್, ನನ್ನ ಬಗ್ಗೆ ಲೇಖನವನ್ನು ಪ್ರಕಟಿಸಿದ ಸುದ್ದಿ ಪೋರ್ಟಲ್ ಜಾತ್ಯತೀತ ಸಾಂವಿಧಾನಿಕ ನೀತಿ ಮತ್ತು ಪ್ಯಾಲೆಸ್ತೀನ್ ವಿರುದ್ಧ ಪಕ್ಷಪಾತಕ್ಕೆ ಹೆಸರುವಾಸಿಯಾಗಿದೆ. ನನ್ನನ್ನು ಟ್ರೋಲ್ ಮಾಡಿದ ಅದರ ಅನುಯಾಯಿಗಳು ಕೂಡ ಅದೇ ರೀತಿಯ ಪಕ್ಷಪಾತೀಯ ನಿಲುವನ್ನು ಹೊಂದಿರುವವರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...