Homeಮುಖಪುಟಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

- Advertisement -
- Advertisement -

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಮಾಡಿದ ಕಾರಣಕ್ಕೆ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್ ಶೇಖ್ ಅವರಲ್ಲಿ ಶಾಲಾ ಆಡಳಿತ ಮಂಡಳಿ ರಾಜೀನಾಮೆ ಕೇಳಿರುವ ಬಗ್ಗೆ ವರದಿಯಾಗಿದೆ.

ವರದಿಗಳ ಪ್ರಕಾರ,  OpIndia ಎಂಬ ಹಿಂದುತ್ವಪರ ಪೋರ್ಟಲ್‌ವೊಂದು ಏಪ್ರಿಲ್ 24ರಂದು ಶೇಖ್ ಅವರನ್ನು “ಹಮಾಸ್ ಸಹಾನುಭೂತಿ” ಮತ್ತು “ಹಿಂದೂ ವಿರೋಧಿ” ಎಂದು ಆರೋಪಿಸಿ ಸ್ಟೋರಿಯನ್ನು ಪ್ರಕಟಿಸಿತ್ತು. ಅವರು ಪ್ರಾಂಶುಪಾಲರಾಗುವುದಕ್ಕೆ ಅನರ್ಹರು ಎಂದು ಟೀಕಿಸಿತ್ತು.

ಶೇಖ್ ಅವರು ತನ್ನ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ, ನನ್ನನ್ನು ಮೌನಗೊಳಿಸುವ ಉದ್ದೇಶದಿಂದ ಮಾಡಿದ “ದುರುದ್ದೇಶಪೂರಿತ ಪ್ರತಿಕ್ರಿಯೆ”ಗೆ ಬಲಿಯಾಗಿದ್ದೇನೆ. ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ, ನಾನು ವಾಕ್ ಸ್ವಾತಂತ್ರ್ಯದ ತತ್ವವನ್ನು ಹೆಚ್ಚು ಗೌರವಿಸುತ್ತೇನೆ ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನನ್ನ ಅಭಿವ್ಯಕ್ತಿ ಈ ರೀತಿ ಕ್ರಮಕ್ಕೆ ಪ್ರಚೋದಿಸುತ್ತದೆ ಎಂದು ಊಹಿಸಿರಲಿಲ್ಲ ಎಂದು ಹೇಳಿದ್ದಾರೆ.

ಕಾಲೇಜು ಆಡಳಿತ ಮಂಡಳಿಯು ಯಾವಾಗಲೂ ನನಗೆ ಬೆಂಬಲ ನೀಡಿದೆ ಮತ್ತು ಧನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಶಾಲೆಯ ಬೆಳವಣಿಗೆ ಮತ್ತು ಯಶಸ್ಸಿನಲ್ಲಿ ನನ್ನ ಪಾತ್ರವನ್ನು ಅವರು ಒಪ್ಪಿಕೊಂಡಿದ್ದಾರೆ ಮತ್ತು ನನ್ನ ಕೆಲಸದಿಂದ ಸಂತೋಷಪಟ್ಟಿದ್ದಾರೆ. ಇದು ಅವರಿಗೆ ಕಠಿಣ ನಿರ್ಧಾರ ಎಂದು ಅವರು ಹೇಳುತ್ತಾರೆ ಎಂದು ಪರ್ವೀನ್ ಶೇಖ್ ಹೇಳಿದ್ದಾರೆ.

ನೌಕರರ ರಾಜಕೀಯ ಹೇಳಿಕೆಗಳ ಬಗ್ಗೆ ಶಾಲಾ ಆಡಳಿತವು ಯಾವುದೇ ಔಪಚಾರಿಕ ನೀತಿಯನ್ನು ಹೊಂದಿಲ್ಲ. ಆದರೆ ಮಾರ್ಚ್‌ನಲ್ಲಿ ನಡೆದ ಸಭೆಯಲ್ಲಿ, ಉದ್ಯೋಗಿಗಳು ತಮ್ಮ ಖಾಸಗಿ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿಸಲಾಗಿದೆ, ಇವುಗಳು ವೈಯಕ್ತಿಕ ಅಭಿಪ್ರಾಯಗಳು ಎಂದು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದರು.

ಎಕ್ಸ್‌ನಲ್ಲಿ ಅಪರೂಪವಾಗಿ ಪೋಸ್ಟ್ ಮಾಡುವ ಶೇಖ್, ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಖಂಡಿಸುವ ಪೋಸ್ಟ್‌ಗಳಿಗೆ ಲೈಕ್‌ ಮಾಡಿದ್ದಾರೆ. ಇದಲ್ಲದೆ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ಮೋದಿ ಅವರನ್ನು ಟೀಕಿಸುವ ಹಲವಾರು ಪೋಸ್ಟ್‌ಗಳಿಗೆ ಅವರು ಲೈಕ್‌ ಹಾಕಿದ್ದರು.

ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಹೇಳಿಕೆಯಲ್ಲಿ ಶೇಖ್, ನನ್ನ ಬಗ್ಗೆ ಲೇಖನವನ್ನು ಪ್ರಕಟಿಸಿದ ಸುದ್ದಿ ಪೋರ್ಟಲ್ ಜಾತ್ಯತೀತ ಸಾಂವಿಧಾನಿಕ ನೀತಿ ಮತ್ತು ಪ್ಯಾಲೆಸ್ತೀನ್ ವಿರುದ್ಧ ಪಕ್ಷಪಾತಕ್ಕೆ ಹೆಸರುವಾಸಿಯಾಗಿದೆ. ನನ್ನನ್ನು ಟ್ರೋಲ್ ಮಾಡಿದ ಅದರ ಅನುಯಾಯಿಗಳು ಕೂಡ ಅದೇ ರೀತಿಯ ಪಕ್ಷಪಾತೀಯ ನಿಲುವನ್ನು ಹೊಂದಿರುವವರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಯ್‌ ಬರೇಲಿ, ಅಮೇಥಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ: ರಾಹುಲ್‌ ಗಾಂಧಿ, ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...