Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...