Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...