Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...