Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...