Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...