Homeಮುಖಪುಟಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ...

ಮುಂಬೈ: ಮುಸ್ಲಿಂ ಬಾಲಕನೊಂದಿಗೆ ಬಾಲಕಿ ಸುತ್ತಾಡಲು ಹೋಗಿದ್ದಕ್ಕೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ ಇಬ್ಬರನ್ನೂ ಥಳಿಸಿದ ಗುಂಪು

- Advertisement -
- Advertisement -

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಹೊರಗಡೆ ಸುತ್ತಾಡಲು ಹೋಗಿದ್ದನೆಂದು ಪುರುಷರ ಗುಂಪೊಂದು ಆತನನ್ನು ಥಳಿಸಿರುವ ಘಟನೆ ಮುಂಬೈನ ಬಾಂದ್ರಾ ಟರ್ಮಿನಸ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು, ಆದರೆ ಮಂಗಳವಾರ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಪುರುಷರ ಗುಂಪು ”ಜೈ ಶ್ರೀ ರಾಮ್” ಮತ್ತು ”ಲವ್ ಜಿಹಾದ್ ನಿಲ್ಲಿಸಿ” ಎಂದು ಕೂಗುತ್ತಾ ಮುಸ್ಲಿಂ ಬಾಲಕನನ್ನು ರೈಲ್ವೇ ನಿಲ್ದಾಣದ ಹೊರಗೆ ಎಳೆದೊಯ್ದು ಹೊಡೆಯುವುದನ್ನು ಕಾಣಬಹುದು.

ಈ ವಿಡಿಯೋದಲ್ಲಿ ತನ್ನನ್ನು ಥಳಿಸಬೇಡಿ ಎಂದು ಬಾಲಕಿ ಹಲ್ಲೆಕೋರರ ಬಳಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು.

“ಲವ್ ಜಿಹಾದ್” ಎಂಬುದು ಹಿಂದುತ್ವ ವಿರೋಧಿಯ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಸಲುವಾಗಿ ಪ್ರೀತಿ-ಪ್ರೇಮ ಎಂದು ಬಲೆಗೆ ಬೀಲಿಸಿಕೊಳ್ಳುತ್ತಾರೆ ಎನ್ನುವುದು ಪುರುಷರ ಗುಂಪು ಆರೋಪವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ದೀಕ್ಷಿತ್ ಗೆಡಮ್ ಅವರು, ”ಜುಲೈ 21ರಂದು ಈ ಘಟನೆ  ನಡೆದಿದೆ. ನಾವು ಈ ವೀಡಿಯೊವನ್ನು ಮಂಗಳವಾರವಷ್ಟೇ ನೋಡಿದ್ದೇವೆ. ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿರುವುದರಿಂದ ನಾವು ಅದನ್ನು ಪರಿಶೀಲಿಸಲು GRP [ಸರ್ಕಾರಿ ರೈಲ್ವೆ ಪೊಲೀಸ್]ಗೆ ಸೂಚಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯು ರೈಲ್ವೇ ಪೊಲೀಸರ ಅಧಿಕಾರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲ್ವೆ ಪೊಲೀಸ್ ಉಪ ಆಯುಕ್ತ ಸಂದೀಪ್ ಭಾಜಿಭಾಕ್ರೆ ಮಾತನಾಡಿ, ”ವೈರಲ್ ಆದ ವೀಡಿಯೊಗಳ ಬಗ್ಗೆ ಮಂಗಳವಾರ ತಮ್ಮ ತಂಡಕ್ಕೆ ಸೂಚನೆ ನೀಡಲಾಗಿದೆ. ನಾವು ಈ ಪ್ರಕರಣವನ್ನು ದಾಖಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಇಲ್ಲಿಯವರೆಗೆ, ಯಾವುದೇ ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.

”ಆ ಬಾಲಕ ಹಾಗೂ ಬಾಲಕಿ ಇಬ್ಬರೂ ಅಪ್ರಾಪ್ತರಾಗಿದ್ದು, ಬಾಂದ್ರಾ ಟರ್ಮಿನಸ್‌ನಿಂದ ಸುಮಾರು 60 ಕಿಲೋಮೀಟರ್ ರಸ್ತೆಯ ಮೂಲಕ ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ” ಎಂದು ಭಜಿಭಾಕ್ರೆ ಸ್ಕ್ರಾಲ್‌ಗೆ ತಿಳಿಸಿದ್ದಾರೆ.

”ಅಂಬರನಾಥ್‌ನಲ್ಲಿ ಮುಸ್ಲಿಂ ಬಾಲಕನ ವಿರುದ್ಧವೇ ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಬಾಂದ್ರಾವರೆಗೂ ಆ ಗುಂಪು ಬೆನ್ನಟ್ಟಿಬಂದಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಪುರುಷರ ಗುಂಪು ಮೊದಲು ಬಾಲಕನ ಮೇಲೆ ಹಲ್ಲೆ ನಡೆಸಿ ನಂತರ ಬಾಂದ್ರಾದ ನಿರ್ಮಲ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ವಿಚಾರಣೆ ನಡೆಸಬೇಕಿದೆ. ಸ್ಥಳೀಯ ಶಾಸಕ ಮತ್ತು ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಜೀಶಾನ್ ಸಿದ್ದಿಕ್ ಅವರು ಸೂಕ್ತ ತನಿಖೆ ನಡೆಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ಭಿವಾಂಡಿ (ಪೂರ್ವ) ಶಾಸಕ ರೈಸ್ ಶೇಖ್ ಕೂಡ ವಿಡಿಯೋವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

”ಬಾಂದ್ರಾ ಟರ್ಮಿನಸ್‌ನಲ್ಲಿ ನಡೆದ ಭಯಾನಕ ಘಟನೆಯಿಂದ ವಿಚಲಿತನಾಗಿದ್ದೇನೆ. ಹಿಂಸೆ ಮತ್ತು ದ್ವೇಷಕ್ಕೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ. ಧರ್ಮ ಅಥವಾ ಇನ್ನಾವುದೇ ನೆಪವನ್ನು ಆಧರಿಸಿದ ಇಂತಹ ಹಿಂಸಾಚಾರಗಳು ಒಪ್ಪುವಂತವಲ್ಲ” ಎಂದು ಶಾಸಕ ರೈಸ್ ಶೇಖ್ ಹೇಳಿದ್ದಾರೆ.

ಇದನ್ನೂ ಓದಿ: ಬುರ್ಖಾಧಾರಿ ಮಹಿಳೆಗೆ ಗನ್ ತೋರಿಸಿ “ಹಿಂದೂ ದೇವತೆ”ಯ ಹೆಸರು ಕೂಗುವಂತೆ ಆಗ್ರಹಿಸಿದ್ದ RPF ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...