Homeಮುಖಪುಟ2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈನಲ್ಲಿ 2006ರಲ್ಲಿ ನಡೆದ ರೈಲು ಸ್ಫೋಟ ಪ್ರಕರಣದ 12 ಜನರ ಅಪರಾಧಿಗಳ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ ರದ್ದು ಮಾಡಿದ್ದು, ಅವರನ್ನು ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ.

ಮುಂಬೈ ನಗರದ ಪಶ್ಚಿಮ ರೈಲ್ವೆ ವಿಭಾಗವನ್ನು ನಡುಗಿಸಿದ್ದ ಈ ಘಟನೆಯಲ್ಲಿ 189 ಮಂದಿ ಪ್ರಾಣ ಕಳೆದುಕೊಂಡಿದ್ದರು. 820 ಜನರು ಗಾಯಗೊಂಡಿದ್ದರು. ಇದೀಗ ಘಟನೆ ನಡೆದು 19 ವರ್ಷಗಳ ನಂತರ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ಅವರ ವಿಶೇಷ ಪೀಠವು, ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿರುವ ಸಾಕ್ಷ್ಯಗಳು ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ನಿರ್ಣಾಯಕವಾಗಿಲ್ಲ ಎಂದು ಹೇಳಿದೆ.

“ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ. ಅವರು ಅಪರಾಧ ಮಾಡಿದ್ದಾರೆ ಎಂದು ನಂಬುವುದು ಕಷ್ಟ. ಆದ್ದರಿಂದ ಅವರ ಮೇಲಿನ ಅಪರಾಧವನ್ನು ರದ್ದುಗೊಳಿಸಲಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಐವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಮತ್ತು ಉಳಿದ ಏಳು ಜನರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸಿರುವ ನ್ಯಾಯಾಲಯ ಎಲ್ಲರನ್ನೂ ಖುಲಾಸೆಗೊಳಿಸಿದೆ.

ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ, ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ಸೂಚಿಸಿದೆ.

2015ರಲ್ಲಿ ವಿಶೇಷ ನ್ಯಾಯಾಲಯವು ಈ ಪ್ರಕರಣದ 12 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ಅವರಲ್ಲಿ ಐವರಿಗೆ ಮರಣದಂಡನೆ ಮತ್ತು ಉಳಿದ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸೋಮವಾರ ಹೈಕೋರ್ಟ್ ತೀರ್ಪು ಪ್ರಕಟವಾದ ನಂತರ, ರಾಜ್ಯದಾದ್ಯಂತದ ವಿವಿಧ ಜೈಲುಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಅವರು ತಮ್ಮ ವಕೀಲರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಜುಲೈ 11, 2006ರಂದು ಮುಂಬೈನ ಪಶ್ಚಿಮ ಮಾರ್ಗದ ವಿವಿಧ ಸ್ಥಳಗಳಲ್ಲಿ ಏಳು ಲೋಕಲ್ ರೈಲುಗಳಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಿತ್ತು. ಘಟನೆಯಲ್ಲಿ 189 ಮಂದಿ ಸಾವನ್ನಪ್ಪಿದ್ದರು ಮತ್ತು 820 ಜನರು ಗಾಯಗೊಂಡಿದ್ದರು.

ಗಮನಾರ್ಹವಾಗಿ, ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಗೊತ್ತುಪಡಿಸಿದ್ದ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 2015ರಲ್ಲಿ ಪ್ರಕರಣದ ತೀರ್ಪು ಪ್ರಕಟಿಸಿತ್ತು.

ಆರೋಪಿಗಳಾದ ಕಮಲ್ ಅನ್ಸಾರಿ, ಮೊಹಮ್ಮದ್ ಫೈಸಲ್ ಅತೌರ್ ರೆಹಮಾನ್ ಶೇಖ್, ಎಹ್ತೆಶಾಮ್ ಕುತುಬುದ್ದೀನ್ ಸಿದ್ದಿಕಿ, ನವೀದ್ ಹುಸೇನ್ ಖಾನ್ ಮತ್ತು ಆಸಿಫ್ ಖಾನ್ ಅವರಿಗೆ ಮರಣದಂಡನೆ ವಿಧಿಸಲಾಗಿದ್ದರೆ, ಇತರ ಆರೋಪಿಗಳಾದ ತನ್ವೀರ್ ಅಹಮ್ಮದ್ ಇಬ್ರಾಹಿಂ ಅನ್ಸಾರಿ, ಮೊಹಮ್ಮದ್ ಮಜೀದ್ ಮೊಹಮ್ಮದ್ ಶಫಿ, ಶೇಖ್ ಮೊಹಮ್ಮದ್ ಅಲಿ ಆಲಂ ಶೇಖ್, ಮೊಹಮ್ಮದ್ ಸಾಜಿದ್ ಮಾರ್ಗುಬ್ ಅನ್ಸಾರಿ, ಮುಜಮ್ಮಿಲ್ ಅತೌರ್ ರೆಹಮಾನ್ ಶೇಖ್, ಸುಹೈಲ್ ಮೆಹಮೂದ್ ಶೇಖ್ ಮತ್ತು ಜಮೀರ್ ಅಹ್ಮದ್ ಲತಿಯುರ್ ರೆಹಮಾನ್ ಶೇಖ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮತ್ತೊಬ್ಬ ಆರೋಪಿ ವಾಹಿದ್ ಶೇಖ್ ಒಂಬತ್ತು ವರ್ಷಗಳ ಜೈಲುವಾಸದ ನಂತರ ವಿಚಾರಣಾ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು.

ವಿಶೇಷ ನ್ಯಾಯಾಲಯದ ಆದೇಶದ ಬಳಿಕ ರಾಜ್ಯ ಸರ್ಕಾರ ಮತ್ತು ಅಪರಾಧಿಗಳು ಸಲ್ಲಿಸಿದ ಮೇಲ್ಮನವಿಗಳು 2015 ರಿಂದ ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇತ್ತು. ಕೆಲ ಅಪರಾಧಿಗಳು ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಒತ್ತಾಯಿಸಿದ ನಂತರ, ಅಂತಿಮವಾಗಿ ಜುಲೈ 2024ರಲ್ಲಿ ನ್ಯಾಯಮೂರ್ತಿಗಳಾದ ಕಿಲೋರ್ ಮತ್ತು ಚಂದಕ್ ಅವರನ್ನೊಳಗೊಂಡ ವಿಶೇಷ ಪೀಠವನ್ನು ರಚಿಸಲಾಗಿತ್ತು.

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...