Homeಮುಖಪುಟಮುಂಬೈ ರೈಲು ಸ್ಪೋಟ: 12 ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ ರೈಲು ಸ್ಪೋಟ: 12 ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಮುಂಬೈ ರೈಲು ಸ್ಪೋಟ ಪ್ರಕರಣದ ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಆದರೆ, ಆರೋಪಿಗಳು ಮತ್ತೆ ಜೈಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂದಿದೆ.

2006ರ ಮುಂಬೈ ಲೋಕಲ್ ರೈಲು ಸ್ಪೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯ ವಿಧಿಸಿದ್ದ 12 ಮಂದಿಯ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಜುಲೈ 21ರಂದು ರದ್ದು ಮಾಡಿತ್ತು. ಬಂಧಿತರನ್ನು ಬಿಡುಗಡೆ ಮಾಡುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ನ್ಯಾಯಮೂರ್ತಿಗಳಾದ ಎಂ. ಎಂ ನಾಗರೇಶ್ ಮತ್ತು ಎನ್ ಕೆ ಸಿಂಗ್ ಅವರ ಪೀಠವು ಈ ತೀರ್ಪನ್ನು ಬೇರೆ ಯಾವುದೇ ಪ್ರಕರಣದಲ್ಲಿ ಪೂರ್ವನಿದರ್ಶನವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.

ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ತಡೆಯಾಜ್ಞೆ ಎಂದರೆ ಬಿಡುಗಡೆಯಾದವರನ್ನು ಮತ್ತೆ ಜೈಲಿಗೆ ಕಳುಹಿಸಬೇಕು ಎಂದು ನಾವು ಕೋರುತ್ತಿಲ್ಲ. ಅವರು ಪ್ರಸ್ತುತ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹಾಗಾಗಿ, ಬಗ್ಗೆ ನ್ಯಾಯಾಲಯ ಸ್ಪಷ್ಟಪಡಿಸಬೇಕಿದೆ ಎಂದಿದ್ದಾರೆ.

ಮುಂದುವರಿದು, ನ್ಯಾಯಾಲಯದ ಅವಲೋಕನಗಳು ‘ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ'( MCOCA)ಯಡಿಯ ಎಲ್ಲಾ ಪ್ರಕರಣಗಳ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ಈ ಬಗ್ಗೆ ನಿರ್ಧರಿಸಬೇಕು ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಆದ್ದರಿಂದ, ಅವರನ್ನು ಮತ್ತೆ ಜೈಲಿಗೆ ಕಳಿಸುವ ಪ್ರಶ್ನೆಯೇ ಇಲ್ಲ. ಆದಾಗ್ಯೂ, ಕಾನೂನು ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಾಲಿಸಿಟರ್ ಜನರಲ್ ಮಾಡಿರುವ ಹೇಳಿಕೆಗಳನ್ನು ಗಮನಿಸಿ, ಈ ಪ್ರಶ್ನಾರ್ಹ ತೀರ್ಪನ್ನು ಬೇರೆ ಯಾವುದೇ ಪ್ರಕರಣದಲ್ಲಿ ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದು ನಾವು ಈ ಸಂದರ್ಭದಲ್ಲಿ ಹೇಳುತ್ತಿದ್ದೇವೆ. ಈ ನಿಟ್ಟಿನಲ್ಲಿ ಸದ್ಯ ಪ್ರಕರಣಕ್ಕೆ ತಡೆ ನೀಡಲಾಗಿದೆ” ಎಂದಿದೆ.

ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಗೊತ್ತುಪಡಿಸಿದ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 2015ರಲ್ಲಿ ಐವರು ಅಪರಾಧಿಗಳಿಗೆ ಮರಣದಂಡನೆ ಮತ್ತು ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನೀಡಿದ್ದ ತೀರ್ಪನ್ನು ಜುಲೈ 21ರಂದು ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿತ್ತು. ಇದಕ್ಕೂ ಮುನ್ನ ವಿಶೇಷ ನ್ಯಾಯಾಲಯ ಕೂಡ ಒಬ್ಬ ವ್ಯಕ್ತಿಯನ್ನು ಖುಲಾಸೆಗೊಳಿಸಿತ್ತು.

ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಅನಿಲ್ ಎಸ್. ಕಿಲೋರ್ ಮತ್ತು ಶ್ಯಾಮ್ ಸಿ ಚಂದಕ್ ಅವರ ವಿಶೇಷ ಪೀಠವು ಕೆಲವು ಪ್ರಾಸಿಕ್ಯೂಷನ್ ಸಾಕ್ಷಿಗಳ ವಿಶ್ವಾಸಾರ್ಹತೆಯನ್ನು ಮತ್ತು ಕೆಲವು ಆರೋಪಿಗಳ ಪರೀಕ್ಷಾ ಗುರುತಿನ ಪೆರೇಡ್ (ಟಿಐಪಿ) ಅನ್ನು ಪ್ರಶ್ನಿಸಿತ್ತು.

ಜುಲೈ 11, 2006ರಂದು, ಪಶ್ಚಿಮ ಉಪನಗರ ರೈಲ್ವೆ ಅಥವಾ ಮುಂಬೈ ಲೋಕಲ್ ರೈಲುಗಳ ಏಳು ಬೋಗಿಗಳಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ 189 ಜನರು ಸಾವನ್ನಪ್ಪಿದ್ದರು ಮತ್ತು 824 ಜನರು ಗಾಯಗೊಂಡಿದ್ದರು.

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಮತ ಕಳ್ಳತನ: ರಾಹುಲ್‌ ಗಾಂಧಿ ಗಂಭೀರ ಆರೋಪ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...