Homeಚಳವಳಿಮುಂಬೈನಲ್ಲಿ ಕೇವಲ 4 ಕಿ.ಮೀ ಅಂತರದಲ್ಲಿ CAA ಪರ ಮತ್ತು ವಿರುದ್ಧ ಜರುಗಿದ ಬೃಹತ್‌ ಶಾಂತಿಯುತ...

ಮುಂಬೈನಲ್ಲಿ ಕೇವಲ 4 ಕಿ.ಮೀ ಅಂತರದಲ್ಲಿ CAA ಪರ ಮತ್ತು ವಿರುದ್ಧ ಜರುಗಿದ ಬೃಹತ್‌ ಶಾಂತಿಯುತ ಪ್ರತಿಭಟನೆಗಳು!

- Advertisement -
- Advertisement -

ಮುಂಬೈನಲ್ಲಿ ಇಂದು ಆಶ್ಚರ್‍ಯವೊಂದು ಜರುಗಿದೆ. ಒಂದೇ ದಿನ ಪೌರತ್ವ ಕಾಯ್ದೆಯ ಪರ ಮತ್ತು ವಿರುದ್ಧ ಬೃಹತ್‌ ಪ್ರತಿಭಟನೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಅದೂ ಕೇವಲ ನಾಲ್ಕು ಕಿ.ಮೀ ಅಂತರದಲ್ಲಿರುವ ಮೈದಾನಗಳಲ್ಲಿ ಬೃಹತ್‌ ಪ್ರತಿಭಟನೆಗಳು ಜರುಗಿವೆ. ಇಷ್ಟಾದರೂ ಯಾವುದೇ ಹಿಂಸಾತ್ಮಕ ಘಟನೆಗಳು ನಡೆದ ವರದಿಯಾಗಿಲ್ಲ.

CAA ಪರ ಪ್ರತಿಭಟನೆ, ಆಗಸ್ಟ್ ಕ್ರಾಂತಿ ಮೈದಾನ

ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಪರವಾಗಿ ಮಾಜಿ ಮುಖ್ಯಮಂತ್ರಿಯ ದೇವೇಂದ್ರ ಫಡ್ನವಿಸ್‌ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅಲ್ಲಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಅಜಾದ್‌ ಮೈದಾನದಲ್ಲಿ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಜರುಗಿದೆ.

ಪೌರತ್ವ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ಸಂಯೋಜನೆಯು ನೋಟು ರದ್ಧತಿಯ ಪುನರಾವರ್ತನೆಯಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಕೇವಲ ಧಾರ್ಮಿಕ ವಿಷಯವಲ್ಲ, ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ. ನೋಟು ರದ್ಧತಿಯ ಭಾಗ 2 ನಮಗೆ ಬೇಡ” ಎಂದು ಕಾರ್ಯಕರ್ತರು ಆಜಾದ್ ಮೈದಾನದಲ್ಲಿ ಸಾರಿ ಹೇಳಿದ್ದಾರೆ.

“ಎನ್‌ಪಿಆರ್ ಎನ್‌ಆರ್‌ಸಿಗೆ ಮೊದಲ ಹೆಜ್ಜೆಯಾಗಿದೆ. ಸರ್ಕಾರ ನಮ್ಮನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಈ ಪ್ರತಿಭಟನೆ ನಿಲ್ಲುವುದಿಲ್ಲ, ಕಾಯ್ದೆ ವಾಪಸ್‌ ತೆಗೆದುಕೊಳ್ಳುವವರೆಗೂ ಇದು ಮುಂದುವರಿಯುತ್ತದೆ” ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ. “ಇದು ಸರ್ವಾಧಿಕಾರಿ ಆಡಳಿತ. ಅವರು ಏನು ಬೇಕಾದರೂ ಮಾಡಬಹುದು ಎಂದು ಅದು ಭಾವಿಸಿದಂತಿದೆ. ಸಂವಿಧಾನವನ್ನು ರಕ್ಷಿಸುವುದು ಈ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಸ್ವರ ಭಾಸ್ಕರ್‌ ಸೇರಿದಂತೆ ಅನೇಕ ನಟರು ಮತ್ತು ಸೆಲೆಬ್ರಿಟಿಗಳು ಸಹ ಆಜಾದ್ ಮೈದಾನದ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದಾರೆ.

ಸಿಎಎ ವಿರುದ್ಧದ ಪ್ರತಿಭಟನೆ. ಅಜಾದ್‌ ಮೈದಾನ

ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ಪರ ಇರುವ ವೇದಿಕೆಯಲ್ಲಿ, ಭಾರೀ ಭಾರತದ ಧ್ವಜ ಮತ್ತು ಸಾವರ್ಕರ್ ಅವರ ಪೋಸ್ಟರ್ ಇದೆ. ಪೌರತ್ವ ಪರ ಕಾಯ್ದೆ ರ್‍ಯಾಲಿಯಲ್ಲಿ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಉಪಸ್ಥಿತರಿದ್ದರು.

ಇಷ್ಟಾದರೂ ಸಹ ಹಿಂಸಾತ್ಮಕ ಘಟನೆಗಳು ನಡೆಯಲು ಮಹಾರಾಷ್ಟ್ರದ ನೂತನ ಸರ್ಕಾರ ಅವಕಾಶಕೊಟ್ಟಿಲ್ಲ. ಶಾಂತಿಯುತ ಪ್ರತಿಭಟನೆಗೆ ಅದು ಅನುವು ಮಾಡಿಕೊಡುವ ಮೂಲಕ ಮಾದರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...