Homeಮುಖಪುಟಭರೂಚ್ ಕ್ಷೇತ್ರ ಎಎಪಿಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಅಹ್ಮದ್ ಪಟೇಲ್ ಪುತ್ರಿ

ಭರೂಚ್ ಕ್ಷೇತ್ರ ಎಎಪಿಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಅಹ್ಮದ್ ಪಟೇಲ್ ಪುತ್ರಿ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಗುಜರಾತ್‌ನ ಭರೂಚ್ ಲೋಕಸಭಾ ಕ್ಷೇತ್ರವನ್ನು ಎಎಪಿಗೆ ಬಿಟ್ಟು ಕೊಡಲಾಗಿದೆ. ಇದಕ್ಕಾಗಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪುತ್ರಿ ಮುಮ್ತಾಝ್ ಪಟೇಲ್ ಕ್ಷೇತ್ರದ ಜನರ ಕ್ಷಮೆ ಕೋರಿದ್ದಾರೆ.

ಒಟ್ಟು 26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಭರೂಚ್ ಮತ್ತು ಭಾವನಗರಲ್ಲಿ ಎಎಪಿ ಸ್ಪರ್ಧಿಸಲಿದೆ. ಉಳಿದ 24 ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಲಾಗಿದೆ.

ಭರೂಚ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಹ್ಮದ್ ಪಟೇಲ್ ಅವರ ನಿಧನದ ನಂತರ ಅವರ ಪುತ್ರಿ ಮುಮ್ತಾಝ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಿರಿಯ ಕಾಂಗ್ರೆಸ್‌ ನಾಯಕನ ಪುತ್ರಿಯಾಗಿರುವುದರಿಂದ ಟಿಕೆಟ್ ಸಿಗುವ ಎಲ್ಲಾ ನಿರೀಕ್ಷೆಯಲ್ಲಿ ಇದ್ದರು. ಅದಕ್ಕಾಗಿ ತಯಾರಿಯನ್ನೂ ಮಾಡಿಕೊಂಡಿದ್ದರು. ಆದರೆ, ಹೈಕಮಾಂಡ್ ನಾಯಕರು ಕ್ಷೇತ್ರವನ್ನು ಎಎಪಿಗೆ ನೀಡಿದ್ದಾರೆ. ಇದು ಮುಮ್ತಾಝ್ ಅವರ ಬೇಸರಕ್ಕೆ ಕಾರಣವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಮೈತ್ರಿಯ ನಂತರವೂ ಭರೂಚ್ ಕ್ಷೇತ್ರವನ್ನು ಉಳಿಸಿಕೊಳ್ಳಲಾರದ್ದಕ್ಕೆ ಜಿಲ್ಲಾ ಮಟ್ಟದ ಪಕ್ಷದ ಮುಖಂಡರಲ್ಲಿ ಕ್ಷಮೆ ಕೋರುತ್ತೇನೆ. ನಿಮ್ಮ ಅಸಮಾಧಾನವನ್ನು ನಾನು ವರಿಷ್ಠರಿಗೆ ತಿಳಿಸುತ್ತೇನೆ. ಆದರೆ ಎಲ್ಲರೂ ಜೊತೆಗೂಡಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸೋಣ. ಅಹ್ಮದ್ ಪಟೇಲ್ ಅವರು 45 ವರ್ಷಗಳ ಕಾಲ ಹಾಕಿಕೊಟ್ಟ ಪರಂಪರೆಯನ್ನು ಮುಂದುವರಿಸೋಣ” ಎಂದಿದ್ದಾರೆ.

ಅಹ್ಮದ್ ಪಟೇಲ್ ಬಳಿಕ ಭರೂಚ್ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲ್ಲುತ್ತಾ ಬಂದಿದೆ. ಬಿಜೆಪಿಯ ಈ ಪ್ರಾಬಲ್ಯಕ್ಕೆ ಸವಾಲೆಸೆಯಲು ಅಹ್ಮದ್ ಪಟೇಲ್ ಅವರ ಮಕ್ಕಳಾದ ಫೈಝಲ್ ಪಟೇಲ್ ಅಥವಾ ಮುಮ್ತಾಝ್ ಪಟೇಲ್ ಅವರನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿತ್ತು. ಮುಮ್ತಾಝ್ ಪಟೇಲ್ ಮತ್ತು ಫೈಝಲ್ ಪಟೇಲ್ ಇಬ್ಬರೂ ಕಾಂಗ್ರೆಸ್‌ನಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು.

ಭರೂಚ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಹ್ಮದ್ ಪಟೇಲ್ ಅವರು 1977, 1980, 1984, 1989ರಲ್ಲಿ ಜಯ ಸಾಧಿಸಿದ್ದರು. ನಂತರ ಈ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆಯಿತು. 1998ರಿಂದ ಮುನ್ಸುಕ್‌ಭಾಯ್‌ ವಾಸವ ಅವರು ಈ ಕ್ಷೇತ್ರದ ಸಂಸದರಾಗಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಸೀಟು ಹಂಚಿಕೆ ಮಾಡಿಕೊಂಡ ಎಎಪಿ-ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...