Homeಮುಖಪುಟಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಉತ್ತರ ಕೊಚ್ಚಿಯ ಮುನಂಬಂ ಪ್ರದೇಶದಲ್ಲಿ ಹೆಚ್ಚಾಗಿ ಮೀನುಗಾರ ಸಮುದಾಯವೇ ನೆಲೆಸಿರುವ, ಪ್ರಸ್ತುತ ಅಲ್ಲಿಂದ ತೆರವು ಬಿಕ್ಕಟ್ಟನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ನೇಮಿಸಿದ್ದನ್ನು ರದ್ದುಗೊಳಿಸಿದ್ದ ಹಿಂದಿನ ಏಕಸದಸ್ಯರ ಆದೇಶಕ್ಕೆ ಕೇರಳ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಕೇರಳ ವಕ್ಫ್ ಮಂಡಳಿಯು ವಕ್ಫ್ ಭೂಮಿ ಎಂದು ಹೇಳಿಕೊಳ್ಳುವ ಸ್ಥಳವು ವಿವಾದದ ತಿರುಳಾಗಿದ್ದು, ಸುಮಾರು 600 ಕುಟುಂಬಗಳ ವಸತಿ ಭದ್ರತೆಗೆ ಅಪಾಯವನ್ನುಂಟುಮಾಡುವ ಆತಂಕ ಎದುರಾಗಿದೆ.

ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಮಾರ್ಚ್ 17 ರ ಆದೇಶದ ವಿರುದ್ಧ ರಾಜ್ಯ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸುವಾಗ ಮುಖ್ಯ ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಮತ್ತು ನ್ಯಾಯಮೂರ್ತಿ ಎಸ್ ಮನು ಅವರ ಪೀಠವು ತಡೆಯಾಜ್ಞೆ ನೀಡಿದೆ. ಈಗಾಗಲೇ ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡುವ ವಿಷಯಗಳನ್ನು ತನಿಖೆ ಮಾಡಲು ಆಯೋಗವನ್ನು ನೇಮಿಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಏಕಸದಸ್ಯ ನ್ಯಾಯಾಧೀಶರು ತೀರ್ಪು ನೀಡಿದ್ದರು.

ಈ ಪ್ರಕರಣವು ಮುನಂಬಂನಲ್ಲಿ ಮೂಲತಃ 400 ಎಕರೆಗಳಿಗಿಂತ ಹೆಚ್ಚು ವ್ಯಾಪಿಸಿರುವ; ಆದರೆ ಸಮುದ್ರ ಕೊರೆತದಿಂದಾಗಿ ಸುಮಾರು 135 ಎಕರೆಗಳಿಗೆ ಇಳಿಸಲಾದ ಭೂಮಿಯ ವಿಸ್ತೀರ್ಣಕ್ಕೆ ಸಂಬಂಧಿಸಿದೆ. 1950 ರಲ್ಲಿ, ಸಿದ್ದಿಕ್ ಸೇಠ್ ಎಂಬ ವ್ಯಕ್ತಿ ಈ ಆಸ್ತಿಯನ್ನು ಫಾರೂಕ್ ಕಾಲೇಜಿಗೆ ಉಡುಗೊರೆಯಾಗಿ ನೀಡಿದರು. ಆದರೂ, ಈ ಭೂಮಿಯನ್ನು ಈಗಾಗಲೇ ಹಲವಾರು ಕುಟುಂಬಗಳು ಆಕ್ರಮಿಸಿಕೊಂಡಿದ್ದು, ಕಾಲೇಜು ಮತ್ತು ನಿವಾಸಿಗಳ ನಡುವೆ ದೀರ್ಘಕಾಲದ ಕಾನೂನು ಜಗಳಕ್ಕೆ ಕಾರಣವಾಯಿತು.

ಮುಂದಿನ ವರ್ಷಗಳಲ್ಲಿ, ಕಾಲೇಜು ಈ ಕೆಲವು ನಿವಾಸಿಗಳಿಗೆ ಭೂಮಿಯ ಕೆಲವು ಭಾಗಗಳನ್ನು ಮಾರಾಟ ಮಾಡಿತು. ಆದರೆ, ಈ ವ್ಯವಹಾರಗಳು ಭೂಮಿಯನ್ನು ವಕ್ಫ್ ಆಸ್ತಿ ಎಂದು ಬಹಿರಂಗಪಡಿಸಲಿಲ್ಲ. 2019 ರಲ್ಲಿ, ಕೇರಳ ವಕ್ಫ್ ಮಂಡಳಿಯು ಭೂಮಿಯನ್ನು ವಕ್ಫ್ ಎಂದು ಔಪಚಾರಿಕವಾಗಿ ನೋಂದಾಯಿಸಿತು. ಇದು ಹಿಂದಿನ ಮಾರಾಟಗಳನ್ನು ಪರಿಣಾಮಕಾರಿಯಾಗಿ ಅಮಾನ್ಯಗೊಳಿಸಿತು. ನಿವಾಸಿಗಳು ವರ್ಗೀಕರಣವನ್ನು ವಿರೋಧಿಸಿದ್ದು, ಈಗ ಸಂಭಾವ್ಯ ತೆರವುಗೊಳಿಸುವ ಆತಂಕ ಎದುರಿಸುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಕೇರಳ ಸರ್ಕಾರವು ನವೆಂಬರ್ 2024 ರಲ್ಲಿ, ಬಾಧಿತ ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸಿಎನ್ ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗವನ್ನು ನೇಮಿಸಿತು.

ಆದರೂ, ವಕ್ಫ್ ಸಂರಕ್ಷಣಾ ಸಮಿತಿಯ (ರಕ್ಷಣಾ ಸಮಿತಿ) ಸದಸ್ಯರು ಈ ಕ್ರಮವನ್ನು ಪ್ರಶ್ನಿಸಿದರು. ಸರ್ಕಾರವು ವಕ್ಫ್ ವಿಷಯಗಳಲ್ಲಿ ನ್ಯಾಯವ್ಯಾಪ್ತಿಯ ಕೊರತೆಯನ್ನು ಹೊಂದಿದೆ ಎಂದು ಅವರು ವಾದಿಸಿದರು. ಏಕಸದಸ್ಯ ಪೀಠವು ಇದಕ್ಕೆ ಸಮ್ಮತಿ ಸೂಚಿಸಿ, ಯಾವುದೇ ತೀರ್ಪು ವಕ್ಫ್ ನ್ಯಾಯಮಂಡಳಿಯ ಮುಂದೆ ನಡೆಯಬೇಕು ಮತ್ತು ಆಯೋಗದ ನೇಮಕಾತಿಗೆ ಯಾವುದೇ ಕಾನೂನು ಆಧಾರವಿಲ್ಲ ಎಂದು ಹೇಳಿತ್ತು.

ತೀರ್ಪನ್ನು ಪ್ರಶ್ನಿಸಿ, ಅರ್ಜಿದಾರರಿಗೆ ಹಾಜರಾಗುವ ಹಕ್ಕು ಇಲ್ಲ ಮತ್ತು ಏಕಸದಸ್ಯ ನ್ಯಾಯಾಧೀಶರು ಪರಿಸ್ಥಿತಿಯ ಸಂಕೀರ್ಣತೆ, ಮಾನವೀಯ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ರಾಜ್ಯವು ಹೈಕೋರ್ಟ್‌ಗೆ ತಿಳಿಸಿತು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...