Homeಮುಖಪುಟಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಉತ್ತರ ಕೊಚ್ಚಿಯ ಮುನಂಬಂ ಪ್ರದೇಶದಲ್ಲಿ ಹೆಚ್ಚಾಗಿ ಮೀನುಗಾರ ಸಮುದಾಯವೇ ನೆಲೆಸಿರುವ, ಪ್ರಸ್ತುತ ಅಲ್ಲಿಂದ ತೆರವು ಬಿಕ್ಕಟ್ಟನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ನೇಮಿಸಿದ್ದನ್ನು ರದ್ದುಗೊಳಿಸಿದ್ದ ಹಿಂದಿನ ಏಕಸದಸ್ಯರ ಆದೇಶಕ್ಕೆ ಕೇರಳ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಕೇರಳ ವಕ್ಫ್ ಮಂಡಳಿಯು ವಕ್ಫ್ ಭೂಮಿ ಎಂದು ಹೇಳಿಕೊಳ್ಳುವ ಸ್ಥಳವು ವಿವಾದದ ತಿರುಳಾಗಿದ್ದು, ಸುಮಾರು 600 ಕುಟುಂಬಗಳ ವಸತಿ ಭದ್ರತೆಗೆ ಅಪಾಯವನ್ನುಂಟುಮಾಡುವ ಆತಂಕ ಎದುರಾಗಿದೆ.

ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಮಾರ್ಚ್ 17 ರ ಆದೇಶದ ವಿರುದ್ಧ ರಾಜ್ಯ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸುವಾಗ ಮುಖ್ಯ ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಮತ್ತು ನ್ಯಾಯಮೂರ್ತಿ ಎಸ್ ಮನು ಅವರ ಪೀಠವು ತಡೆಯಾಜ್ಞೆ ನೀಡಿದೆ. ಈಗಾಗಲೇ ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡುವ ವಿಷಯಗಳನ್ನು ತನಿಖೆ ಮಾಡಲು ಆಯೋಗವನ್ನು ನೇಮಿಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಏಕಸದಸ್ಯ ನ್ಯಾಯಾಧೀಶರು ತೀರ್ಪು ನೀಡಿದ್ದರು.

ಈ ಪ್ರಕರಣವು ಮುನಂಬಂನಲ್ಲಿ ಮೂಲತಃ 400 ಎಕರೆಗಳಿಗಿಂತ ಹೆಚ್ಚು ವ್ಯಾಪಿಸಿರುವ; ಆದರೆ ಸಮುದ್ರ ಕೊರೆತದಿಂದಾಗಿ ಸುಮಾರು 135 ಎಕರೆಗಳಿಗೆ ಇಳಿಸಲಾದ ಭೂಮಿಯ ವಿಸ್ತೀರ್ಣಕ್ಕೆ ಸಂಬಂಧಿಸಿದೆ. 1950 ರಲ್ಲಿ, ಸಿದ್ದಿಕ್ ಸೇಠ್ ಎಂಬ ವ್ಯಕ್ತಿ ಈ ಆಸ್ತಿಯನ್ನು ಫಾರೂಕ್ ಕಾಲೇಜಿಗೆ ಉಡುಗೊರೆಯಾಗಿ ನೀಡಿದರು. ಆದರೂ, ಈ ಭೂಮಿಯನ್ನು ಈಗಾಗಲೇ ಹಲವಾರು ಕುಟುಂಬಗಳು ಆಕ್ರಮಿಸಿಕೊಂಡಿದ್ದು, ಕಾಲೇಜು ಮತ್ತು ನಿವಾಸಿಗಳ ನಡುವೆ ದೀರ್ಘಕಾಲದ ಕಾನೂನು ಜಗಳಕ್ಕೆ ಕಾರಣವಾಯಿತು.

ಮುಂದಿನ ವರ್ಷಗಳಲ್ಲಿ, ಕಾಲೇಜು ಈ ಕೆಲವು ನಿವಾಸಿಗಳಿಗೆ ಭೂಮಿಯ ಕೆಲವು ಭಾಗಗಳನ್ನು ಮಾರಾಟ ಮಾಡಿತು. ಆದರೆ, ಈ ವ್ಯವಹಾರಗಳು ಭೂಮಿಯನ್ನು ವಕ್ಫ್ ಆಸ್ತಿ ಎಂದು ಬಹಿರಂಗಪಡಿಸಲಿಲ್ಲ. 2019 ರಲ್ಲಿ, ಕೇರಳ ವಕ್ಫ್ ಮಂಡಳಿಯು ಭೂಮಿಯನ್ನು ವಕ್ಫ್ ಎಂದು ಔಪಚಾರಿಕವಾಗಿ ನೋಂದಾಯಿಸಿತು. ಇದು ಹಿಂದಿನ ಮಾರಾಟಗಳನ್ನು ಪರಿಣಾಮಕಾರಿಯಾಗಿ ಅಮಾನ್ಯಗೊಳಿಸಿತು. ನಿವಾಸಿಗಳು ವರ್ಗೀಕರಣವನ್ನು ವಿರೋಧಿಸಿದ್ದು, ಈಗ ಸಂಭಾವ್ಯ ತೆರವುಗೊಳಿಸುವ ಆತಂಕ ಎದುರಿಸುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಕೇರಳ ಸರ್ಕಾರವು ನವೆಂಬರ್ 2024 ರಲ್ಲಿ, ಬಾಧಿತ ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸಿಎನ್ ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗವನ್ನು ನೇಮಿಸಿತು.

ಆದರೂ, ವಕ್ಫ್ ಸಂರಕ್ಷಣಾ ಸಮಿತಿಯ (ರಕ್ಷಣಾ ಸಮಿತಿ) ಸದಸ್ಯರು ಈ ಕ್ರಮವನ್ನು ಪ್ರಶ್ನಿಸಿದರು. ಸರ್ಕಾರವು ವಕ್ಫ್ ವಿಷಯಗಳಲ್ಲಿ ನ್ಯಾಯವ್ಯಾಪ್ತಿಯ ಕೊರತೆಯನ್ನು ಹೊಂದಿದೆ ಎಂದು ಅವರು ವಾದಿಸಿದರು. ಏಕಸದಸ್ಯ ಪೀಠವು ಇದಕ್ಕೆ ಸಮ್ಮತಿ ಸೂಚಿಸಿ, ಯಾವುದೇ ತೀರ್ಪು ವಕ್ಫ್ ನ್ಯಾಯಮಂಡಳಿಯ ಮುಂದೆ ನಡೆಯಬೇಕು ಮತ್ತು ಆಯೋಗದ ನೇಮಕಾತಿಗೆ ಯಾವುದೇ ಕಾನೂನು ಆಧಾರವಿಲ್ಲ ಎಂದು ಹೇಳಿತ್ತು.

ತೀರ್ಪನ್ನು ಪ್ರಶ್ನಿಸಿ, ಅರ್ಜಿದಾರರಿಗೆ ಹಾಜರಾಗುವ ಹಕ್ಕು ಇಲ್ಲ ಮತ್ತು ಏಕಸದಸ್ಯ ನ್ಯಾಯಾಧೀಶರು ಪರಿಸ್ಥಿತಿಯ ಸಂಕೀರ್ಣತೆ, ಮಾನವೀಯ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ರಾಜ್ಯವು ಹೈಕೋರ್ಟ್‌ಗೆ ತಿಳಿಸಿತು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...