Homeಮುಖಪುಟಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಉತ್ತರ ಕೊಚ್ಚಿಯ ಮುನಂಬಂ ಪ್ರದೇಶದಲ್ಲಿ ಹೆಚ್ಚಾಗಿ ಮೀನುಗಾರ ಸಮುದಾಯವೇ ನೆಲೆಸಿರುವ, ಪ್ರಸ್ತುತ ಅಲ್ಲಿಂದ ತೆರವು ಬಿಕ್ಕಟ್ಟನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ನೇಮಿಸಿದ್ದನ್ನು ರದ್ದುಗೊಳಿಸಿದ್ದ ಹಿಂದಿನ ಏಕಸದಸ್ಯರ ಆದೇಶಕ್ಕೆ ಕೇರಳ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

ಕೇರಳ ವಕ್ಫ್ ಮಂಡಳಿಯು ವಕ್ಫ್ ಭೂಮಿ ಎಂದು ಹೇಳಿಕೊಳ್ಳುವ ಸ್ಥಳವು ವಿವಾದದ ತಿರುಳಾಗಿದ್ದು, ಸುಮಾರು 600 ಕುಟುಂಬಗಳ ವಸತಿ ಭದ್ರತೆಗೆ ಅಪಾಯವನ್ನುಂಟುಮಾಡುವ ಆತಂಕ ಎದುರಾಗಿದೆ.

ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಮಾರ್ಚ್ 17 ರ ಆದೇಶದ ವಿರುದ್ಧ ರಾಜ್ಯ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸುವಾಗ ಮುಖ್ಯ ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಮತ್ತು ನ್ಯಾಯಮೂರ್ತಿ ಎಸ್ ಮನು ಅವರ ಪೀಠವು ತಡೆಯಾಜ್ಞೆ ನೀಡಿದೆ. ಈಗಾಗಲೇ ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡುವ ವಿಷಯಗಳನ್ನು ತನಿಖೆ ಮಾಡಲು ಆಯೋಗವನ್ನು ನೇಮಿಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಏಕಸದಸ್ಯ ನ್ಯಾಯಾಧೀಶರು ತೀರ್ಪು ನೀಡಿದ್ದರು.

ಈ ಪ್ರಕರಣವು ಮುನಂಬಂನಲ್ಲಿ ಮೂಲತಃ 400 ಎಕರೆಗಳಿಗಿಂತ ಹೆಚ್ಚು ವ್ಯಾಪಿಸಿರುವ; ಆದರೆ ಸಮುದ್ರ ಕೊರೆತದಿಂದಾಗಿ ಸುಮಾರು 135 ಎಕರೆಗಳಿಗೆ ಇಳಿಸಲಾದ ಭೂಮಿಯ ವಿಸ್ತೀರ್ಣಕ್ಕೆ ಸಂಬಂಧಿಸಿದೆ. 1950 ರಲ್ಲಿ, ಸಿದ್ದಿಕ್ ಸೇಠ್ ಎಂಬ ವ್ಯಕ್ತಿ ಈ ಆಸ್ತಿಯನ್ನು ಫಾರೂಕ್ ಕಾಲೇಜಿಗೆ ಉಡುಗೊರೆಯಾಗಿ ನೀಡಿದರು. ಆದರೂ, ಈ ಭೂಮಿಯನ್ನು ಈಗಾಗಲೇ ಹಲವಾರು ಕುಟುಂಬಗಳು ಆಕ್ರಮಿಸಿಕೊಂಡಿದ್ದು, ಕಾಲೇಜು ಮತ್ತು ನಿವಾಸಿಗಳ ನಡುವೆ ದೀರ್ಘಕಾಲದ ಕಾನೂನು ಜಗಳಕ್ಕೆ ಕಾರಣವಾಯಿತು.

ಮುಂದಿನ ವರ್ಷಗಳಲ್ಲಿ, ಕಾಲೇಜು ಈ ಕೆಲವು ನಿವಾಸಿಗಳಿಗೆ ಭೂಮಿಯ ಕೆಲವು ಭಾಗಗಳನ್ನು ಮಾರಾಟ ಮಾಡಿತು. ಆದರೆ, ಈ ವ್ಯವಹಾರಗಳು ಭೂಮಿಯನ್ನು ವಕ್ಫ್ ಆಸ್ತಿ ಎಂದು ಬಹಿರಂಗಪಡಿಸಲಿಲ್ಲ. 2019 ರಲ್ಲಿ, ಕೇರಳ ವಕ್ಫ್ ಮಂಡಳಿಯು ಭೂಮಿಯನ್ನು ವಕ್ಫ್ ಎಂದು ಔಪಚಾರಿಕವಾಗಿ ನೋಂದಾಯಿಸಿತು. ಇದು ಹಿಂದಿನ ಮಾರಾಟಗಳನ್ನು ಪರಿಣಾಮಕಾರಿಯಾಗಿ ಅಮಾನ್ಯಗೊಳಿಸಿತು. ನಿವಾಸಿಗಳು ವರ್ಗೀಕರಣವನ್ನು ವಿರೋಧಿಸಿದ್ದು, ಈಗ ಸಂಭಾವ್ಯ ತೆರವುಗೊಳಿಸುವ ಆತಂಕ ಎದುರಿಸುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಕೇರಳ ಸರ್ಕಾರವು ನವೆಂಬರ್ 2024 ರಲ್ಲಿ, ಬಾಧಿತ ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸಿಎನ್ ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗವನ್ನು ನೇಮಿಸಿತು.

ಆದರೂ, ವಕ್ಫ್ ಸಂರಕ್ಷಣಾ ಸಮಿತಿಯ (ರಕ್ಷಣಾ ಸಮಿತಿ) ಸದಸ್ಯರು ಈ ಕ್ರಮವನ್ನು ಪ್ರಶ್ನಿಸಿದರು. ಸರ್ಕಾರವು ವಕ್ಫ್ ವಿಷಯಗಳಲ್ಲಿ ನ್ಯಾಯವ್ಯಾಪ್ತಿಯ ಕೊರತೆಯನ್ನು ಹೊಂದಿದೆ ಎಂದು ಅವರು ವಾದಿಸಿದರು. ಏಕಸದಸ್ಯ ಪೀಠವು ಇದಕ್ಕೆ ಸಮ್ಮತಿ ಸೂಚಿಸಿ, ಯಾವುದೇ ತೀರ್ಪು ವಕ್ಫ್ ನ್ಯಾಯಮಂಡಳಿಯ ಮುಂದೆ ನಡೆಯಬೇಕು ಮತ್ತು ಆಯೋಗದ ನೇಮಕಾತಿಗೆ ಯಾವುದೇ ಕಾನೂನು ಆಧಾರವಿಲ್ಲ ಎಂದು ಹೇಳಿತ್ತು.

ತೀರ್ಪನ್ನು ಪ್ರಶ್ನಿಸಿ, ಅರ್ಜಿದಾರರಿಗೆ ಹಾಜರಾಗುವ ಹಕ್ಕು ಇಲ್ಲ ಮತ್ತು ಏಕಸದಸ್ಯ ನ್ಯಾಯಾಧೀಶರು ಪರಿಸ್ಥಿತಿಯ ಸಂಕೀರ್ಣತೆ, ಮಾನವೀಯ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ರಾಜ್ಯವು ಹೈಕೋರ್ಟ್‌ಗೆ ತಿಳಿಸಿತು.

ವಕ್ಫ್ ಕಾಯ್ದೆ ಪ್ರಶ್ನಿಸಿದ ಅರ್ಜಿ: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...