Homeಮುಖಪುಟಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

ಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

- Advertisement -
- Advertisement -

ಮುನಂಬಂ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮುನಂಬಮ್‌ನಲ್ಲಿರುವ ಆಸ್ತಿಯನ್ನು ವಕ್ಫ್ ಎಂದು ಘೋಷಿಸಿದ ನಂತರ ತೆರವು ಎದುರಿಸುತ್ತಿರುವ ಸುಮಾರು 600 ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್‌ನ ತೀರ್ಪನ್ನು ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಪ್ರಶ್ನಿಸಿದೆ.

ವಿವಾದಕ್ಕೆ ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ತನಿಖಾ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಅಕ್ಟೋಬರ್ 10ರಂದು, ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜಾ ಅವಧಿಯ ಅರ್ಜಿಯಲ್ಲಿ ಕೇರಳ ವಕ್ಫ್ ಸಂರಕ್ಷಣಾ ವೇದಿಕೆಯು, ವಕ್ಫ್ ನ್ಯಾಯಮಂಡಳಿಯ ಮುಂದೆ ವಿಚಾರಣೆಗಳು ಬಾಕಿ ಇವೆ ಎಂಬ ಅಂಶವನ್ನು ನಿರ್ಲಕ್ಷಿಸುವ ಮೂಲಕ ವಿಭಾಗೀಯ ಪೀಠವು ತನ್ನ ಅಧಿಕಾರ ವ್ಯಾಪ್ತಿಯನ್ನು ಉಲ್ಲಂಘಿಸಿದೆ ಎಂದು ವಾದಿಸಿದೆ. ತನಿಖಾ ಆಯೋಗದ ಪರ ಆದೇಶ ನೀಡುವ ಮೂಲಕ ಸರ್ಕಾರದ ಅತಿಕ್ರಮಣವನ್ನು ಕಾನೂನುಬದ್ಧಗೊಳಿಸಿದೆ ಮತ್ತು ವಿಚಾರಣೆಯ ವಿಷಯವೇ ಆಗಿರದ ವಿವಾದಿತ ಆಸ್ತಿಯ ಸ್ವರೂಪದ ಬಗ್ಗೆ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅನಗತ್ಯವಾಗಿ ತನ್ನ ಅಭಿಪ್ರಾಯವನ್ನು ಅಥವಾ ಸ್ಥಿರೀಕರಣಗಳನ್ನು ನೀಡಿದೆ ಎಂದಿದೆ.

ಈ ವಿವಾದವು ಮುನಂಬಮ್‌ನಲ್ಲಿರುವ ವಕ್ಫ್‌ ಭೂಮಿಗೆ ಸಂಬಂಧಿಸಿದೆ. ಮೂಲತಃ 404.76 ಎಕರೆಗಳಷ್ಟು ವಿಸ್ತೀರ್ಣ ಹೊಂದಿದ್ದ ವಿವಾದಿತ ಭೂಮಿ, ಸಮುದ್ರ ಕೊರೆತದಿಂದಾಗಿ ಈಗ ಸುಮಾರು 135.11 ಎಕರೆಗಳಿಗೆ ಇಳಿದಿದೆ.

1950ರಲ್ಲಿ, ಸಿದ್ದಿಕ್ ಸೇಠ್ ಎಂಬುವವರು ಈ ಭೂಮಿಯನ್ನು ಫಾರೂಕ್ ಕಾಲೇಜಿಗೆ ದಾನವಾಗಿ ನೀಡಿದ್ದರು. ಆದರೆ, ಈಗ ಆ ಭೂಮಿ ಹಲವಾರು ಜನರಿಗೆ ನೆಲೆಯಾಗಿದ್ದು, ಈ ಜನರು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಲೇಜು ಮತ್ತು ದೀರ್ಘಕಾಲದಿಂದ ಅಲ್ಲಿ ವಾಸಿಸುತ್ತಿದ್ದವರ ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ.

ಈ ನಡುವೆ, ಕಾಲೇಜು ಭೂಮಿಯ ಕೆಲವು ಭಾಗಗಳನ್ನು ಅಲ್ಲಿನ ನಿವಾಸಿಗಳಿಗೆ ಮಾರಾಟ ಮಾಡಲಾಗಿದೆ. ಮಾರಾಟದ ವೇಳೆ ಆಸ್ತಿ ವಕ್ಫ್ ಭೂಮಿ ಎಂದು ನಮೂದಿಸಲು ವಿಫಲವಾಗಿದೆ ಎಂದು ಹೇಳಲಾಗ್ತಿದೆ.

2019ರಲ್ಲಿ, ಕೇರಳ ವಕ್ಫ್ ಮಂಡಳಿ (ಕೆಡಬ್ಲ್ಯುಬಿ) ಭೂಮಿಯನ್ನು ವಕ್ಫ್ ಆಸ್ತಿಯಾಗಿ ಔಪಚಾರಿಕವಾಗಿ ನೋಂದಾಯಿಸಿದೆ. ಇದರಿಂದಾಗಿ ಹಿಂದಿನ ಮಾರಾಟಗಳು ಅನೂರ್ಜಿತಗೊಂಡಿವೆ. ಆ ಬಳಿಕ ವಕ್ಫ್‌ ಭೂಮಿಯಿಂದ ತೆರವುಗೊಳಿಸುವ ಆತಂಕ ಎದುರಿಸುತ್ತಿರುವ ಜನರು ಕಾನೂನು ಮತ್ತು ಕಾನೂನೇತರ ಹೋರಾಟಗಳನ್ನು ನಡೆಸುತ್ತಿದ್ದಾರೆ.

ಮುನಂಬಂ ಭೂಮಿಯನ್ನು ವಕ್ಫ್ ಎಂದು ವರ್ಗೀಕರಿಸುವ ಕೆಡಬ್ಲ್ಯೂಬಿ ನಿರ್ಧಾರವನ್ನು ಪ್ರಶ್ನಿಸಿ ಕೋಝಿಕ್ಕೋಡ್‌ನಲ್ಲಿರುವ ವಕ್ಫ್ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ನಡುವೆ, ಸುಮಾರು 600 ಕುಟುಂಬಗಳಿಂದ ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ, ಕೇರಳ ಸರ್ಕಾರವು ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ 2024ರ ನವೆಂಬರ್‌ನಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ.

ಇದನ್ನು ಕೇರಳ ವಕ್ಫ್ ಸಂರಕ್ಷಣಾ ಸಮಿತಿಯ ಸದಸ್ಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರು ಕಾನೂನಿನ ಹೊರಗಿನ ವಕ್ಫ್ ಆಸ್ತಿಗಳನ್ನು ತನಿಖೆ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಏಕ ಸದಸ್ಯ ನ್ಯಾಯಾಧೀಶರು ಆಯೋಗದ ನೇಮಕ ಆದೇಶವನ್ನು ರದ್ದುಗೊಳಿಸಿ, ಅಂತಹ ಆಯೋಗವು 1995 ರ ವಕ್ಫ್ ಕಾಯ್ದೆಯಡಿಯಲ್ಲಿ ಈಗಾಗಲೇ ನಿರ್ಣಯಿಸಲಾದ ಅಥವಾ ಬಾಕಿ ಇರುವ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಕಾನೂನು ಅಧಿಕಾರವನ್ನು ಹೊಂದಿಲ್ಲ ಎಂದು ತೀರ್ಪು ನೀಡಿದ್ದರು.

ಆದರೆ, ಅಕ್ಟೋಬರ್‌ನಲ್ಲಿ ವಿಭಾಗೀಯ ಪೀಠವು ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದೆ. ಮುನಂಬಮ್‌ನಲ್ಲಿರುವ ವಿವಾದಿತ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಕೆಡಬ್ಲ್ಯೂಬಿಯ 2019 ರ ನಿರ್ಧಾರವು ಕಾನೂನುಬಾಹಿರವಾಗಿದೆ ಎಂದು ಹೇಳಿದೆ.

ವಿಭಾಗೀಯ ಪೀಠವು ಕೆಡಬ್ಲ್ಯೂಬಿಯ ನಿರ್ಧಾರವನ್ನು ರದ್ದುಗೊಳಿಸಿಲ್ಲ. ಆದರೆ, ಆಸ್ತಿಯನ್ನು ಫಾರೂಕ್ ಕಾಲೇಜಿಗೆ ನೀಡಿದ 1950ರ ಪತ್ರವು ವಕ್ಫ್ ಪತ್ರವಲ್ಲ, ಉಡುಗೊರೆ ಪತ್ರವಾಗಿದೆ ಎಂದು ತೀರ್ಪು ನೀಡಿದೆ. ಭೂಮಿಯನ್ನು ವಕ್ಫ್ ಎಂದು ಅಧಿಸೂಚನೆ ಮಾಡುವುದು ಕೆಡಬ್ಲ್ಯೂಬಿಯ ಭೂಕಬಳಿಕೆ ತಂತ್ರವಲ್ಲದೆ ಬೇರೇನೂ ಅಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...