Homeಮುಖಪುಟಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

ಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

- Advertisement -
- Advertisement -

ಮುನಂಬಂ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮುನಂಬಮ್‌ನಲ್ಲಿರುವ ಆಸ್ತಿಯನ್ನು ವಕ್ಫ್ ಎಂದು ಘೋಷಿಸಿದ ನಂತರ ತೆರವು ಎದುರಿಸುತ್ತಿರುವ ಸುಮಾರು 600 ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್‌ನ ತೀರ್ಪನ್ನು ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಪ್ರಶ್ನಿಸಿದೆ.

ವಿವಾದಕ್ಕೆ ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ತನಿಖಾ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಅಕ್ಟೋಬರ್ 10ರಂದು, ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜಾ ಅವಧಿಯ ಅರ್ಜಿಯಲ್ಲಿ ಕೇರಳ ವಕ್ಫ್ ಸಂರಕ್ಷಣಾ ವೇದಿಕೆಯು, ವಕ್ಫ್ ನ್ಯಾಯಮಂಡಳಿಯ ಮುಂದೆ ವಿಚಾರಣೆಗಳು ಬಾಕಿ ಇವೆ ಎಂಬ ಅಂಶವನ್ನು ನಿರ್ಲಕ್ಷಿಸುವ ಮೂಲಕ ವಿಭಾಗೀಯ ಪೀಠವು ತನ್ನ ಅಧಿಕಾರ ವ್ಯಾಪ್ತಿಯನ್ನು ಉಲ್ಲಂಘಿಸಿದೆ ಎಂದು ವಾದಿಸಿದೆ. ತನಿಖಾ ಆಯೋಗದ ಪರ ಆದೇಶ ನೀಡುವ ಮೂಲಕ ಸರ್ಕಾರದ ಅತಿಕ್ರಮಣವನ್ನು ಕಾನೂನುಬದ್ಧಗೊಳಿಸಿದೆ ಮತ್ತು ವಿಚಾರಣೆಯ ವಿಷಯವೇ ಆಗಿರದ ವಿವಾದಿತ ಆಸ್ತಿಯ ಸ್ವರೂಪದ ಬಗ್ಗೆ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅನಗತ್ಯವಾಗಿ ತನ್ನ ಅಭಿಪ್ರಾಯವನ್ನು ಅಥವಾ ಸ್ಥಿರೀಕರಣಗಳನ್ನು ನೀಡಿದೆ ಎಂದಿದೆ.

ಈ ವಿವಾದವು ಮುನಂಬಮ್‌ನಲ್ಲಿರುವ ವಕ್ಫ್‌ ಭೂಮಿಗೆ ಸಂಬಂಧಿಸಿದೆ. ಮೂಲತಃ 404.76 ಎಕರೆಗಳಷ್ಟು ವಿಸ್ತೀರ್ಣ ಹೊಂದಿದ್ದ ವಿವಾದಿತ ಭೂಮಿ, ಸಮುದ್ರ ಕೊರೆತದಿಂದಾಗಿ ಈಗ ಸುಮಾರು 135.11 ಎಕರೆಗಳಿಗೆ ಇಳಿದಿದೆ.

1950ರಲ್ಲಿ, ಸಿದ್ದಿಕ್ ಸೇಠ್ ಎಂಬುವವರು ಈ ಭೂಮಿಯನ್ನು ಫಾರೂಕ್ ಕಾಲೇಜಿಗೆ ದಾನವಾಗಿ ನೀಡಿದ್ದರು. ಆದರೆ, ಈಗ ಆ ಭೂಮಿ ಹಲವಾರು ಜನರಿಗೆ ನೆಲೆಯಾಗಿದ್ದು, ಈ ಜನರು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಲೇಜು ಮತ್ತು ದೀರ್ಘಕಾಲದಿಂದ ಅಲ್ಲಿ ವಾಸಿಸುತ್ತಿದ್ದವರ ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ.

ಈ ನಡುವೆ, ಕಾಲೇಜು ಭೂಮಿಯ ಕೆಲವು ಭಾಗಗಳನ್ನು ಅಲ್ಲಿನ ನಿವಾಸಿಗಳಿಗೆ ಮಾರಾಟ ಮಾಡಲಾಗಿದೆ. ಮಾರಾಟದ ವೇಳೆ ಆಸ್ತಿ ವಕ್ಫ್ ಭೂಮಿ ಎಂದು ನಮೂದಿಸಲು ವಿಫಲವಾಗಿದೆ ಎಂದು ಹೇಳಲಾಗ್ತಿದೆ.

2019ರಲ್ಲಿ, ಕೇರಳ ವಕ್ಫ್ ಮಂಡಳಿ (ಕೆಡಬ್ಲ್ಯುಬಿ) ಭೂಮಿಯನ್ನು ವಕ್ಫ್ ಆಸ್ತಿಯಾಗಿ ಔಪಚಾರಿಕವಾಗಿ ನೋಂದಾಯಿಸಿದೆ. ಇದರಿಂದಾಗಿ ಹಿಂದಿನ ಮಾರಾಟಗಳು ಅನೂರ್ಜಿತಗೊಂಡಿವೆ. ಆ ಬಳಿಕ ವಕ್ಫ್‌ ಭೂಮಿಯಿಂದ ತೆರವುಗೊಳಿಸುವ ಆತಂಕ ಎದುರಿಸುತ್ತಿರುವ ಜನರು ಕಾನೂನು ಮತ್ತು ಕಾನೂನೇತರ ಹೋರಾಟಗಳನ್ನು ನಡೆಸುತ್ತಿದ್ದಾರೆ.

ಮುನಂಬಂ ಭೂಮಿಯನ್ನು ವಕ್ಫ್ ಎಂದು ವರ್ಗೀಕರಿಸುವ ಕೆಡಬ್ಲ್ಯೂಬಿ ನಿರ್ಧಾರವನ್ನು ಪ್ರಶ್ನಿಸಿ ಕೋಝಿಕ್ಕೋಡ್‌ನಲ್ಲಿರುವ ವಕ್ಫ್ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ನಡುವೆ, ಸುಮಾರು 600 ಕುಟುಂಬಗಳಿಂದ ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ, ಕೇರಳ ಸರ್ಕಾರವು ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ 2024ರ ನವೆಂಬರ್‌ನಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ.

ಇದನ್ನು ಕೇರಳ ವಕ್ಫ್ ಸಂರಕ್ಷಣಾ ಸಮಿತಿಯ ಸದಸ್ಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರು ಕಾನೂನಿನ ಹೊರಗಿನ ವಕ್ಫ್ ಆಸ್ತಿಗಳನ್ನು ತನಿಖೆ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಏಕ ಸದಸ್ಯ ನ್ಯಾಯಾಧೀಶರು ಆಯೋಗದ ನೇಮಕ ಆದೇಶವನ್ನು ರದ್ದುಗೊಳಿಸಿ, ಅಂತಹ ಆಯೋಗವು 1995 ರ ವಕ್ಫ್ ಕಾಯ್ದೆಯಡಿಯಲ್ಲಿ ಈಗಾಗಲೇ ನಿರ್ಣಯಿಸಲಾದ ಅಥವಾ ಬಾಕಿ ಇರುವ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಕಾನೂನು ಅಧಿಕಾರವನ್ನು ಹೊಂದಿಲ್ಲ ಎಂದು ತೀರ್ಪು ನೀಡಿದ್ದರು.

ಆದರೆ, ಅಕ್ಟೋಬರ್‌ನಲ್ಲಿ ವಿಭಾಗೀಯ ಪೀಠವು ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದೆ. ಮುನಂಬಮ್‌ನಲ್ಲಿರುವ ವಿವಾದಿತ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಕೆಡಬ್ಲ್ಯೂಬಿಯ 2019 ರ ನಿರ್ಧಾರವು ಕಾನೂನುಬಾಹಿರವಾಗಿದೆ ಎಂದು ಹೇಳಿದೆ.

ವಿಭಾಗೀಯ ಪೀಠವು ಕೆಡಬ್ಲ್ಯೂಬಿಯ ನಿರ್ಧಾರವನ್ನು ರದ್ದುಗೊಳಿಸಿಲ್ಲ. ಆದರೆ, ಆಸ್ತಿಯನ್ನು ಫಾರೂಕ್ ಕಾಲೇಜಿಗೆ ನೀಡಿದ 1950ರ ಪತ್ರವು ವಕ್ಫ್ ಪತ್ರವಲ್ಲ, ಉಡುಗೊರೆ ಪತ್ರವಾಗಿದೆ ಎಂದು ತೀರ್ಪು ನೀಡಿದೆ. ಭೂಮಿಯನ್ನು ವಕ್ಫ್ ಎಂದು ಅಧಿಸೂಚನೆ ಮಾಡುವುದು ಕೆಡಬ್ಲ್ಯೂಬಿಯ ಭೂಕಬಳಿಕೆ ತಂತ್ರವಲ್ಲದೆ ಬೇರೇನೂ ಅಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...