Homeಮುಖಪುಟಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

ಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

- Advertisement -
- Advertisement -

ಮುನಂಬಂ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮುನಂಬಮ್‌ನಲ್ಲಿರುವ ಆಸ್ತಿಯನ್ನು ವಕ್ಫ್ ಎಂದು ಘೋಷಿಸಿದ ನಂತರ ತೆರವು ಎದುರಿಸುತ್ತಿರುವ ಸುಮಾರು 600 ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್‌ನ ತೀರ್ಪನ್ನು ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಪ್ರಶ್ನಿಸಿದೆ.

ವಿವಾದಕ್ಕೆ ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ತನಿಖಾ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಅಕ್ಟೋಬರ್ 10ರಂದು, ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜಾ ಅವಧಿಯ ಅರ್ಜಿಯಲ್ಲಿ ಕೇರಳ ವಕ್ಫ್ ಸಂರಕ್ಷಣಾ ವೇದಿಕೆಯು, ವಕ್ಫ್ ನ್ಯಾಯಮಂಡಳಿಯ ಮುಂದೆ ವಿಚಾರಣೆಗಳು ಬಾಕಿ ಇವೆ ಎಂಬ ಅಂಶವನ್ನು ನಿರ್ಲಕ್ಷಿಸುವ ಮೂಲಕ ವಿಭಾಗೀಯ ಪೀಠವು ತನ್ನ ಅಧಿಕಾರ ವ್ಯಾಪ್ತಿಯನ್ನು ಉಲ್ಲಂಘಿಸಿದೆ ಎಂದು ವಾದಿಸಿದೆ. ತನಿಖಾ ಆಯೋಗದ ಪರ ಆದೇಶ ನೀಡುವ ಮೂಲಕ ಸರ್ಕಾರದ ಅತಿಕ್ರಮಣವನ್ನು ಕಾನೂನುಬದ್ಧಗೊಳಿಸಿದೆ ಮತ್ತು ವಿಚಾರಣೆಯ ವಿಷಯವೇ ಆಗಿರದ ವಿವಾದಿತ ಆಸ್ತಿಯ ಸ್ವರೂಪದ ಬಗ್ಗೆ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅನಗತ್ಯವಾಗಿ ತನ್ನ ಅಭಿಪ್ರಾಯವನ್ನು ಅಥವಾ ಸ್ಥಿರೀಕರಣಗಳನ್ನು ನೀಡಿದೆ ಎಂದಿದೆ.

ಈ ವಿವಾದವು ಮುನಂಬಮ್‌ನಲ್ಲಿರುವ ವಕ್ಫ್‌ ಭೂಮಿಗೆ ಸಂಬಂಧಿಸಿದೆ. ಮೂಲತಃ 404.76 ಎಕರೆಗಳಷ್ಟು ವಿಸ್ತೀರ್ಣ ಹೊಂದಿದ್ದ ವಿವಾದಿತ ಭೂಮಿ, ಸಮುದ್ರ ಕೊರೆತದಿಂದಾಗಿ ಈಗ ಸುಮಾರು 135.11 ಎಕರೆಗಳಿಗೆ ಇಳಿದಿದೆ.

1950ರಲ್ಲಿ, ಸಿದ್ದಿಕ್ ಸೇಠ್ ಎಂಬುವವರು ಈ ಭೂಮಿಯನ್ನು ಫಾರೂಕ್ ಕಾಲೇಜಿಗೆ ದಾನವಾಗಿ ನೀಡಿದ್ದರು. ಆದರೆ, ಈಗ ಆ ಭೂಮಿ ಹಲವಾರು ಜನರಿಗೆ ನೆಲೆಯಾಗಿದ್ದು, ಈ ಜನರು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಲೇಜು ಮತ್ತು ದೀರ್ಘಕಾಲದಿಂದ ಅಲ್ಲಿ ವಾಸಿಸುತ್ತಿದ್ದವರ ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ.

ಈ ನಡುವೆ, ಕಾಲೇಜು ಭೂಮಿಯ ಕೆಲವು ಭಾಗಗಳನ್ನು ಅಲ್ಲಿನ ನಿವಾಸಿಗಳಿಗೆ ಮಾರಾಟ ಮಾಡಲಾಗಿದೆ. ಮಾರಾಟದ ವೇಳೆ ಆಸ್ತಿ ವಕ್ಫ್ ಭೂಮಿ ಎಂದು ನಮೂದಿಸಲು ವಿಫಲವಾಗಿದೆ ಎಂದು ಹೇಳಲಾಗ್ತಿದೆ.

2019ರಲ್ಲಿ, ಕೇರಳ ವಕ್ಫ್ ಮಂಡಳಿ (ಕೆಡಬ್ಲ್ಯುಬಿ) ಭೂಮಿಯನ್ನು ವಕ್ಫ್ ಆಸ್ತಿಯಾಗಿ ಔಪಚಾರಿಕವಾಗಿ ನೋಂದಾಯಿಸಿದೆ. ಇದರಿಂದಾಗಿ ಹಿಂದಿನ ಮಾರಾಟಗಳು ಅನೂರ್ಜಿತಗೊಂಡಿವೆ. ಆ ಬಳಿಕ ವಕ್ಫ್‌ ಭೂಮಿಯಿಂದ ತೆರವುಗೊಳಿಸುವ ಆತಂಕ ಎದುರಿಸುತ್ತಿರುವ ಜನರು ಕಾನೂನು ಮತ್ತು ಕಾನೂನೇತರ ಹೋರಾಟಗಳನ್ನು ನಡೆಸುತ್ತಿದ್ದಾರೆ.

ಮುನಂಬಂ ಭೂಮಿಯನ್ನು ವಕ್ಫ್ ಎಂದು ವರ್ಗೀಕರಿಸುವ ಕೆಡಬ್ಲ್ಯೂಬಿ ನಿರ್ಧಾರವನ್ನು ಪ್ರಶ್ನಿಸಿ ಕೋಝಿಕ್ಕೋಡ್‌ನಲ್ಲಿರುವ ವಕ್ಫ್ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ನಡುವೆ, ಸುಮಾರು 600 ಕುಟುಂಬಗಳಿಂದ ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ, ಕೇರಳ ಸರ್ಕಾರವು ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ 2024ರ ನವೆಂಬರ್‌ನಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ.

ಇದನ್ನು ಕೇರಳ ವಕ್ಫ್ ಸಂರಕ್ಷಣಾ ಸಮಿತಿಯ ಸದಸ್ಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರು ಕಾನೂನಿನ ಹೊರಗಿನ ವಕ್ಫ್ ಆಸ್ತಿಗಳನ್ನು ತನಿಖೆ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಏಕ ಸದಸ್ಯ ನ್ಯಾಯಾಧೀಶರು ಆಯೋಗದ ನೇಮಕ ಆದೇಶವನ್ನು ರದ್ದುಗೊಳಿಸಿ, ಅಂತಹ ಆಯೋಗವು 1995 ರ ವಕ್ಫ್ ಕಾಯ್ದೆಯಡಿಯಲ್ಲಿ ಈಗಾಗಲೇ ನಿರ್ಣಯಿಸಲಾದ ಅಥವಾ ಬಾಕಿ ಇರುವ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಕಾನೂನು ಅಧಿಕಾರವನ್ನು ಹೊಂದಿಲ್ಲ ಎಂದು ತೀರ್ಪು ನೀಡಿದ್ದರು.

ಆದರೆ, ಅಕ್ಟೋಬರ್‌ನಲ್ಲಿ ವಿಭಾಗೀಯ ಪೀಠವು ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದೆ. ಮುನಂಬಮ್‌ನಲ್ಲಿರುವ ವಿವಾದಿತ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಕೆಡಬ್ಲ್ಯೂಬಿಯ 2019 ರ ನಿರ್ಧಾರವು ಕಾನೂನುಬಾಹಿರವಾಗಿದೆ ಎಂದು ಹೇಳಿದೆ.

ವಿಭಾಗೀಯ ಪೀಠವು ಕೆಡಬ್ಲ್ಯೂಬಿಯ ನಿರ್ಧಾರವನ್ನು ರದ್ದುಗೊಳಿಸಿಲ್ಲ. ಆದರೆ, ಆಸ್ತಿಯನ್ನು ಫಾರೂಕ್ ಕಾಲೇಜಿಗೆ ನೀಡಿದ 1950ರ ಪತ್ರವು ವಕ್ಫ್ ಪತ್ರವಲ್ಲ, ಉಡುಗೊರೆ ಪತ್ರವಾಗಿದೆ ಎಂದು ತೀರ್ಪು ನೀಡಿದೆ. ಭೂಮಿಯನ್ನು ವಕ್ಫ್ ಎಂದು ಅಧಿಸೂಚನೆ ಮಾಡುವುದು ಕೆಡಬ್ಲ್ಯೂಬಿಯ ಭೂಕಬಳಿಕೆ ತಂತ್ರವಲ್ಲದೆ ಬೇರೇನೂ ಅಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...